ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನ್ನಡ ತೀರ್ಪಿತ್ತ ನ್ಯಾಯಾಧೀಶರಿಗೆ ಮುಖ್ಯಮಂತ್ರಿಯಿಂದ ಸನ್ಮಾನ

ಕನ್ನಡದಲ್ಲಿ ತೀರ್ಪು ನೀಡಿದ 69 ನ್ಯಾಯಾಧೀಶರು ಹಾಗೂ 19 ಸರ್ಕಾರಿ ಅಭಿಯೋಜಕರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಸನ್ಮಾನಿಸಲಾಯಿತು.

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 19: ಕನ್ನಡದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರು ಹಾಗೂ ಸರ್ಕಾರಿ ಅಭಿಯೋಜಕರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.

ಕನ್ನಡದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರನ್ನು ಸನ್ಮಾನಿಸುವ ಈ ವಿಶಿಷ್ಟ ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಬೆಳಿಗ್ಗೆ ಹಮ್ಮಿಕೊಂಡಿತ್ತು. ಈ ವೇಳೆ ಕನ್ನಡದಲ್ಲಿ ತೀರ್ಪು ನೀಡಿದ 69 ನ್ಯಾಯಾಧೀಶರಿಗೆ ಹಾಗೂ 19 ಸರ್ಕಾರಿ ಅಭಿಯೋಜಕರಿಗೆ ಮುಖ್ಯಮಂತ್ರಿ ಸನ್ಮಾನ ಮಾಡಿದರು.

Siddaramaiah felicitated ‘Kannada Judges’, Who gave judgment in Kannada

ಮುಖ್ಯಮಂತ್ರಿಗಳ ಜತೆ ಸಚಿವರುಗಳಾದ ಟಿ ಬಿ ಜಯಚಂದ್ರ, ಕೆ ಜೆ ಜಾರ್ಜ್, ಹೈಕೋರ್ಟು ನ್ಯಾಯಮೂರ್ತಿ ಬೋಪಣ್ಣ, ಕನ್ನಡ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಪ್ರೊ ಎಸ್ ಜಿ ಸಿದ್ದರಾಮಯ್ಯ ಹಾಜರಿದ್ದರು.

Siddaramaiah felicitated ‘Kannada Judges’, Who gave judgment in Kannada

ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸಿಎಂ ಶಿಲಾನ್ಯಾಸ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರದ ರಾಜರಾಜೇಶ್ವರಿ ವಿಧಾನ ಸಭೆ ಕ್ಷೇತ್ರದಲ್ಲಿ ಉದ್ಯಾನವನ, ಆಟದ ಮೈದಾನ ಮತ್ತು ಬೃಹತ್ ನೀರುಗಾಲುವೆ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಕೆ ಜೆ ಜಾರ್ಜ್ ಮತ್ತು ಗಣ್ಯರು ಮುಖ್ಯಮಂತ್ರಿಗಳ ಜತೆ ಹಾಜರಿದ್ದರು.

Siddaramaiah felicitated ‘Kannada Judges’, Who gave judgment in Kannada
English summary
Chief minister Siddaramaiah felicitated 69 judges and 19 public prosecutors, who gave their judgments in Kannada language here in Vidhan Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X