ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನವಿಲು ತೀರ್ಥದಿಂದ ಬಾದಾಮಿಗೆ ನೀರು ಕೇಳಿದ ಸಿದ್ದರಾಮಯ್ಯ

By Nayana
|
Google Oneindia Kannada News

Recommended Video

ಬಾದಾಮಿಗೆ ನವಿಲು ತೀರ್ಥದಿಂದ ನೀರು ಬಿಡುಗಡೆ ಮಾಡುವಂತೆ ಸಿದ್ದು ಸೂಚನೆ | Oneindia Kannada

ಬೆಂಗಳೂರು, ಜು.7: ಬಾದಾಮಿ ವಿಧಾನಸಭೆ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿರುವುದರಿಂದ ಬೆಳಗಾವಿಯ ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಮುಂಗಾರು ಆರಂಭವಾಗಿ ಒಂದು ತಿಂಗಳು ಕಳೆದಿದೆ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ, ಆದರೆ ಕಲಬುರಗಿ, ಬಾಗಲಕೋಟೆ ಈ ಭಾಗದಲ್ಲಿ ಮಳೆಯಾಗದೆ, ರೈತರು ಕಂಗಾಲಾಗಿದ್ದಾರೆ, ಹಾಗಾಗಿ ಬಾದಾಮಿ ಕ್ಷೇತ್ರದ ಜನರಿಗೆ ನೀರು ಒದಗಿಸುವಂತೆ ಸಿದ್ದರಾಮಯ್ಯ ಹೇಳಿದ್ದಾರೆ.

ಉ.ಕರ್ನಾಟಕಕ್ಕೆ ನ್ಯಾಯ ಕೊಡಿಸುವಂತೆ ಸಿದ್ದರಾಮಯ್ಯಗೆ ಎಚ್‌.ಕೆ.ಪಾಟೀಲ್ ಪತ್ರಉ.ಕರ್ನಾಟಕಕ್ಕೆ ನ್ಯಾಯ ಕೊಡಿಸುವಂತೆ ಸಿದ್ದರಾಮಯ್ಯಗೆ ಎಚ್‌.ಕೆ.ಪಾಟೀಲ್ ಪತ್ರ

ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಮೇಘಣ್ಣನವರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಮಲಪ್ರಭಾ ಅಚ್ಚುಕಟ್ಟು ಭಾಗದ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಹೋಗಾಗಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದರು.

Siddaramaiah sought water release from Naveelu teertha reservoir

ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವುದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ರೈತರ ಬೆಳೆಗಳಿಗೂ ನೀರು ದೊರೆಯುತ್ತದೆ ಎಂದರು. ನೀರು ಬಿಡುಗಡೆಗೆ ತಕ್ಷಣ ಕ್ರಮ ಜರುಗಿಸುವುದಾಗಿ ಪಾದೇಶಿಕ ಆಯುಕ್ತರು ತಿಳಿಸಿದ್ದಾರೆ.

English summary
Former chief minister Siddaramaiah has sought water release from Naveelu teertha reservoir of Malaprabha river which provides drinking water to Badami town.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X