ಒಂದೇ ಮಾದರಿ ಪಿಸ್ತೂಲ್ ಬಳಸಿ ಕಲಬುರ್ಗಿ, ಗೌರಿ ಹತ್ಯೆ
ಬೆಂಗಳೂರು, ಸೆ. 06: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲು ಬಳಸಲಾದ ಪಿಸ್ತೂಲ್ ಹಾಗೂ ಕಲಬುರ್ಗಿ ಅವರ ಹತ್ಯೆಗೆ ಬಳಸಲಾದ ಪಿಸ್ತೂಲ್ ಎರಡು ಒಂದೇ ಮಾದರಿಯದ್ದು ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. 7.65 ಎಂಎಂ ಪಿಸ್ತೂಲ್ ಬಳಕೆ ಬಗ್ಗೆ ಪೊಲೀಸರಿಗೆ ಇದ್ದ ಶಂಕೆ ಈಗ ನಿಜವಾಗಿದೆ.
ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ,ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಹತ್ಯೆಗೆ ಒಂದೇ ರೀತಿಯ ಪಿಸ್ತೂಲ್ ಬಳಕೆ ಮಾಡಲಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಪೊಲೀಸರಿಂದ ಮಾಹಿತಿ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಸದ್ಯಕ್ಕೆ ಲಭ್ಯವಾಗಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿರುವ ಬೆಂಗಳೂರು ಪೊಲೀಸರು, ಕಲಬುರ್ಗಿ ಅವರ ಮನೆ ಮುಂದಿನ ಸಿಸಿಟಿವಿ ದೃಶ್ಯದಲ್ಲಿ ಕಂಡು ಬಂದ ದುಷ್ಕರ್ಮಿಯ ಹೋಲಿಕೆ ಇರುವುದನ್ನು ಗುರುತಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿರುವ ಗೌರಿ ಅವರ ಮನೆ ಬಳಿಯ ಸಿಸಿಟಿವಿ ದೃಶ್ಯದಲ್ಲಿ ಕಂಡು ಬಂದಿರುವ ವ್ಯಕ್ತಿಯ ಚಹರೆ ಪತ್ತೆ ಕಾರ್ಯ ಮುಂದುವರೆದಿದೆ.
ಇದಲ್ಲದೆ, ಗೌರಿ ಅವರ ಮೊಬೈಲ್ ಫೋನ್, ಬಳಸುತ್ತಿದ್ದ ಲ್ಯಾಪ್ ಟಾಪ್ ನಲ್ಲಿ ಮಾಹಿತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ನಡೆದ ದಿನ ಹಾಗೂ ಕಳೆದ ಕೆಲ ದಿನಗಳಿಂದ ಅವರು ಬೆಂಗಳೂರಿನಲ್ಲಿ ಓಡಾಡಿದ ಜಾಗಗಳಲ್ಲಿ ಸಿಗುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತದೆ.
2013ರ ಆಗಸ್ಟ್ 20ರಂದು ಪುಣೆಯಲ್ಲಿ ಮೂಢನಂಬಿಕೆಗಳ ವಿರುದ್ಧದ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ನರೇಂದ್ರ ದಾಬೋಲ್ಕರ್ ಹತ್ಯೆ ನೆಡೆದಿತ್ತು. 2015ರ ಫೆಬ್ರವರಿ 17ರಂದು ಸಿಪಿಐ ಹಿರಿಯ ನಾಯಕ ಗೋವಿಂದ ಪನ್ಸಾರೆ ಹತ್ಯೆ ಮುಂಬೈನಲ್ಲಿ ನಡೆದಿತ್ತು
2015ರ ಆಗಸ್ಟ್ 30ರಂದು ಧಾರವಾಡ ಕಲ್ಯಾಣ ನಗರದ ನಿವಾದಲ್ಲಿ ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಎಲ್ಲರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, 7.65 ಎಂಎಂ ಪಿಸ್ತೂಲ್ ಬಳಕೆ ಮಾಡಲಾಗಿದೆ
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications