'ಸ್ಮಾರ್ಟ್ ಸ್ವಚ್ಛ ಮಲ್ಲೇಶ್ವರಂ' ಅಭಿಯಾನಕ್ಕೆ ಚಾಲನೆ
ಬೆಂಗಳೂರು, ಅಕ್ಟೋಬರ್ 03 : ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಅಶ್ವಥನಾರಾಯಣ್ ಅವರ ನಾಯಕತ್ವದಲ್ಲಿ 'ಸ್ಮಾರ್ಟ್ ಸ್ವಚ್ಛ ಮಲ್ಲೇಶ್ವರಂ' ಅಭಿಯಾನಕ್ಕೆ ಗಾಂಧಿ ಜಯಂತಿಯಂದು ಚಾಲನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ದೂರದೃಷ್ಟಿಯ 'ಸ್ವಚ್ಛ ಭಾರತ' ಅಭಿಯಾನದಡಿ ಈ ಕಾರ್ಯಕ್ರಮ ಆರಂಭಿಸಲಾಗಿದೆ.
ಅಕ್ಟೋಬರ್ 2ರ ಶುಕ್ರವಾರ ಡಾ.ಸಿ.ಎನ್. ಅಶ್ವಥನಾರಾಯಣ್, ನಟ ಯಶ್ ಮುಂತಾದವರು 'ಸ್ಮಾರ್ಟ್ ಸ್ವಚ್ಛ ಮಲ್ಲೇಶ್ವರಂ' ಅಭಿಯಾನದ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಬಿಬಿಎಂಪಿ, ನಾಗರಿಕ ಹಿತರಕ್ಷಣಾ ಸಮಿತಿ ಹಾಗೂ ಸಾರ್ವಜನಿಕ ಸಂಸ್ಥೆಗಳ ಬೆಂಬಲದೊಂದಿಗೆ ಪ್ರತಿ ಮನೆಯಲ್ಲಿಯೂ ಈ ಕುರಿತು ಅರಿವು ಮೂಡಿಸುವ ಯೋಜನೆ ಹಾಕಿಕೊಳ್ಳಲಾಗಿದೆ. [ಡಿಜಿಟಲ್ ಇಂಡಿಯಾದಿಂದ ರಾಜ್ಯಕ್ಕಾಗುವ ಲಾಭಗಳೇನು?]

ಸ್ವಚ್ಛ ಭಾರತ ಹಾಗೂ ಡಿಜಿಟಲ್ ಇಂಡಿಯಾ ಅಭಿಯಾನವನ್ನು ಮುಂದಿಟ್ಟುಕೊಂಡು ತ್ಯಾಜ್ಯ ನಿರ್ವಹಣೆ, ವಿಲೇವಾರಿಗಾಗಿ android app ಹಾಗೂ ನಾಗರಿಕ ದೂರುಗಳ ನಿರ್ವಹಣೆಗಾಗಿ ಕಾಲ್ ಸೆಂಟರ್ಗಳನ್ನು ಆರಂಭಿಸುವುದು ಸೇರಿದಂತೆ ಅಭಿಯಾನದ ಯಶಸ್ಸಿಗಾಗಿ ತಂತ್ರಜ್ಞಾನಗಳನ್ನು ಸದ್ಭಳಕೆ ಮಾಡಿಕೊಳ್ಳಲಾಗುತ್ತದೆ. [ಮಲ್ಲೇಶ್ವರಂ ಶಾಸಕ ಡಾ. ಅಶ್ವತ್ಥ ನಾರಾಯಣ ಸಂದರ್ಶನ]
ಮಲ್ಲೇಶ್ವರಂ ಕ್ಷೇತ್ರವನ್ನು ಉದ್ಯಾನ ನಗರಿ ಬೆಂಗಳೂರಿನ ಇತರ ಭಾಗಗಳಿಗೆ ಹಾಗೂ ಭಾರತಕ್ಕೆ ಮಾದರಿಯನ್ನಾಗಿಸುವ ದೂರದೃಷ್ಠಿಯಿಂದ ಈ ಅಭಿಯಾನವನ್ನು ಆರಂಭಿಸಲಾಗಿದ್ದು, ಶುಕ್ರವಾರ ಇದಕ್ಕೆ ಚಾಲನೆ ಸಿಕ್ಕಿದೆ.
ಅರಿವು ಮೂಡಿಸುವುದು ಹೇಗೆ? : ಪ್ರಮುಖ ಸ್ಥಳಗಳಲ್ಲಿ ಅರ್ಥಪೂರ್ಣವಾದ ಸಂದೇಶಗಳನ್ನು ಪ್ರದರ್ಶಿಸುವುದು, ನಾಗರೀಕರು/ಸಂಸ್ಥೆಗಳು/ದೇವಾಲಯಗಳು/ಸಮುದಾಯಗಳು ಸ್ವಯಂ ಸೇವಕರು ಭಾಗವಹಿಸುವಂತೆ ಮಾಡುವುದು, ತರಬೇತಿ ನೀಡುವ ಮೂಲಕ ಅರಿವು ಮೂಡಿಸುವುದು ಮುಂತಾದ ಕಾರ್ಯಕ್ರಮಗಳ ಮೂಲಕ 'ಸ್ಮಾರ್ಟ್ ಸ್ವಚ್ಛ ಮಲ್ಲೇಶ್ವರಂ' ಅಭಿಯಾನದ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications