ಹಲಸೂರು ಕೆರೆ ಸಂರಕ್ಷಣೆ ಹೊಣೆ ಯಾರದ್ದು?
ಬೆಂಗಳೂರು, ಮಾರ್ಚ್ 09 : ಹಲಸೂರು ಕೆರೆಯಲ್ಲಿನ ಮೀನುಗಳ ಮಾರಣ ಹೋಮಕ್ಕೆ ಕಾರಣ ಯಾರು?. ಕಳೆದ ವರ್ಷದ ಘಟನೆಗಳ ಬಳಿಕವೂ ಬಿಬಿಎಂಪಿ ಮತ್ತು ಬಿಡಿಎ ಒಬ್ಬರ ವಿರುದ್ಧ ಮತ್ತೊಬ್ಬರು ಆರೋಪ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ. ಕೆರೆಯ ಒಡಲು ಸೇರುತ್ತಿರುವ ವಿಷಕಾರಿ ನೀರನ್ನು ತಡೆಗಟ್ಟಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.
2015ರಲ್ಲಿ ಗೌಡನಪಾಳ್ಯ ಮತ್ತು ದೊರೆಕೆರೆಯಲ್ಲಿ ಮೀನುಗಳ ಮಾರಣ ಹೋಮ ನಡೆದಿತ್ತು. ಎರಡೂ ಕೆರೆ ಸೇರಿ ಸುಮಾರು 20000 ಮೀನುಗಳು ಸಾವನ್ನಪ್ಪಿದ್ದವು. ಈ ಬಾರಿ ಹಲಸೂರು ಕೆರೆಯಲ್ಲಿ 1000ಕ್ಕೂ ಅಧಿಕ ಮೀನುಗಳು ಮೃತಪಟ್ಟಿವೆ. [ಹಲಸೂರು ಕೆರೆ ಮಾಲಿನ್ಯಕ್ಕೆ ಬಲಿಯಾದ ಸಾವಿರಾರು ಮೀನುಗಳು]

ಗೌಡನಪಾಳ್ಯ ಕೆರೆಯಲ್ಲಿ ಮೀನುಗಳ ಸಾವಿಗೆ ತ್ಯಾಜ್ಯ ನೀರು ಕೆರೆ ಸೇರಿರುವುದೇ ಕಾರಣ ಎಂದು ತಿಳಿದುಬಂದಿತ್ತು. ಭೂ ಮಾಫಿಯಾದವರ ಕೈವಾಡದಿಂದಾಗಿ ಕೆರೆ ಸುತ್ತಮುತ್ತಲಿನ ಜಾಗ ಒತ್ತುವರಿಯಾಗಿತ್ತು. ಇದರಿಂದಾಗಿ ತ್ಯಾಜ್ಯದ ನೀರು ಕೆರೆಗೆ ನೇರವಾಗಿ ಸೇರುತ್ತಿತ್ತು. [ಬೆಳ್ಳಂದೂರು ಕೆರೆ ಬಿಳಿನೊರೆಯ ರಹಸ್ಯ ಲೀಕ್]
ಹಲಸೂರು ಕೆರೆಯಲ್ಲಿನ ಮೀನುಗಳ ಸಾವಿಗೆ ಆಮ್ಲಜನಕದ ಕೊರತೆ ಕಾರಣ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಪರಿಸರವಾದಿಗಳು ಬಿಬಿಎಂಪಿಯ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ. ಮನೆಗಳ ತ್ಯಾಜ್ಯ ನೀರು ಕೆರೆಗೆ ಸೇರುತ್ತಿದೆ. ಆದ್ದರಿಂದ ಮೀನುಗಳು ಸಾವನ್ನಪ್ಪಿವೆ ಎಂದು ಅವರು ಹೇಳುತ್ತಿದ್ದಾರೆ. [ಗೂಗಲ್ ಮ್ಯಾಪ್ ನಲ್ಲಿ 'ಬೆಳ್ಳಂದೂರು ಲೇಕ್' ಹುಡುಕಬೇಡಿ!]
ಯಾರನ್ನು ದೂರುವುದು? : ಬಿಬಿಎಂಪಿ ಮತ್ತು ಬಿಡಿಎ ಕೆರೆಗಳಿಗೆ ತ್ಯಾಜ್ಯ ನೀರು ಸೇರಲು ನೀವು ಕಾರಣ ಎಂದು ಆರೋಪ ಮಾಡಿಕೊಳ್ಳುತ್ತಿವೆ. ಬಿಡಿಎ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಂಡಿಲ್ಲ ಎಂದು ದೂರುತ್ತಿದೆ.
ಬಿಬಿಎಂಪಿಗೆ ಕೆರೆಗಳ ನಿರ್ವಹಣೆಗೆ ವಾರ್ಷಿಕವಾಗಿ ಅನುದಾನ ನೀಡಲಾಗುತ್ತದೆ. ಅವರು ಅದನ್ನು ಸರಿಯಾಗಿ ಬಳಸುತ್ತಿಲ್ಲ ಎಂದು ಬಿಡಿಎ ದೂರಿದೆ. ಆದರೆ, ಹಲಸೂರು ಕೆರೆಗೆ ತ್ಯಾಜ್ಯ ನೀರು ಎಲ್ಲಿಂದ ಸೇರುತ್ತಿದೆ? ಎಂದು ಬಿಬಿಎಂಪಿ ಅಥವ ಬಿಡಿಎ ಇನ್ನೂ ಪರಿಶೀಲನೆ ನಡೆಸಿಲ್ಲ. [ಪಿಟಿಐ ಚಿತ್ರ]
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications