ಅಂಬರೀಶ್ ಪಾರ್ಥಿವ ಶರೀರ ಮೆರವಣಿಗೆಗೆ ಬಂದೋಬಸ್ತ್: ಇಲ್ಲಿದೆ ಮಾಹಿತಿ
ಬೆಂಗಳೂರು, ನವೆಂಬರ್ 25 : ಸೋಮವಾರ (ನವೆಂಬರ್ 26) ನಗರದ ಕಂಠೀರವ ಸ್ಟೇಡಿಯಂನಿಂದ ಮೆರವಣಿಗೆ ತೆರಳಿ ಕಂಠೀರವ ಸ್ಟುಡಿಯೋನಲ್ಲಿ ನಟ-ಮಾಜಿ ಸಚಿವ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಡೆಸಲಾಗುವುದು. ಆದ್ದರಿಂದ ಬೆಂಗಳೂರು ನಗರದಲ್ಲಿ ವಿಶೇಷವಾಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅದರ ವಿವರ ಇಂತಿದೆ.
* 11,000 ಕಾನೂನು ಸುವ್ಯವಸ್ಥೆ ಪೊಲೀಸರು ಹಾಗೂ ಅಧಿಕಾರಿಗಳು
* 4,000 ಸಂಚಾರಿ ಸಿಬ್ಬಂದಿ ಹಾಗೂ ಅಧಿಕಾರಿಗಳು
* 30 ಕೆ ಎಸ್ ಆರ್ ಪಿ ತುಕಡಿಗಳು
* 34 ಸಿ ಎ ಆರ್ ತುಕಡಿಗಳು
* 3 ಆರ್ ಎ ಎಫ್ ತುಕಡಿಗಳು
* 5 ಆರ್ ಐ ವಿ
* 15 ಡಿಸಿಪಿ
* 4 ಹೆಚ್ಚುವರಿ ಪೊಲೀಸ್ ಆಯುಕ್ತರು
ಪಾರ್ಥಿವ ಶರೀರ ತೆಗೆದುಕೊಂಡು ಹೋಗುವ ರಸ್ತೆಗಳನ್ನು ಸೆಕ್ಟರ್ ಗಳಾಗಿ ವಿಂಗಡಣೆ ಮಾಡಿ, ಪ್ರತಿ ಸೆಕ್ಟರ್ ನ ಉಸ್ತುವಾರಿಯನ್ನು ಡಿಸಿಪಿ ನೇತೃತ್ವದ ತಂಡಕ್ಕೆ ನೀಡಲಾಗಿದೆ.
ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅಂತ್ಯಕ್ರಿಯೆಗೆ ತಕರಾರು
ಅಂತಿಮ ಯಾತ್ರೆ ಸಾಗುವ ಮಾರ್ಗದಲ್ಲಿ ಕೆಲ ಬದಲಾವಣೆ ಮಾಡಲಾಗಿದ್ದು, ವಾಹನ ದಟ್ಟಣೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಕಾನೂನು ಸುವ್ಯವಸ್ಥೆಗೆ ಸಹಕರಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.