ನಾಡಗೀತೆ ಕತ್ತರಿ ಪ್ರಯೋಗಕ್ಕೆ ಭುಗಿಲೆದ್ದ ಆಕ್ರೋಶ
ಬೆಂಗಳೂರು, ನ. 11 : ನಮ್ಮ ಅನುಕೂಲಕ್ಕೆ ತಕ್ಕಂತೆ, ಸಮಯಕ್ಕೆ ಹೊಂದಿಕೊಳ್ಳುವಂತೆ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ವಿರಚಿತ ನಾಡಗೀತೆ 'ಜಯ ಭಾರತ ಜನನಿಯ ತನುಜಾತೆ'ಯನ್ನು ಮೊಟಕುಗೊಳಿಸುವ ಪ್ರಕ್ರಿಯೆಗೆ ರಾಜ್ಯಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಕುವೆಂಪು ಅವರು 1924ರಲ್ಲಿ ರಚಿಸಿದ್ದ, ಗುಂಪುಗುಂಪಾಗಿ, ಸರಿಯಾದ ವೇಗದಲ್ಲಿ, ಸಂಪೂರ್ಣವಾಗಿ ಹಾಡಿದರೆ ಹೆಚ್ಚೂಕಡಿಮೆ ಮೂರುವರೆ ನಿಮಿಷ ತೆಗೆದುಕೊಳ್ಳುವ ನಾಡಗೀತೆಯನ್ನು ತಿದ್ದುಪಡಿ ಮಾಡುವುದು ಎಷ್ಟು ಸರಿ? ಇದರ ಅಗತ್ಯವಿತ್ತೆ?
ಇಂತಹ ವಿವಾದ ಎದ್ದಿರುವುದು ಇದು ಮೊದಲೇನಲ್ಲ. ನಾಡಗೀತೆಯಲ್ಲಿ ಎಲ್ಲ ಕನ್ನಡ ನಾಡಿನ ಎಲ್ಲ ಮಹನೀಯರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಆದರೆ, ದ್ವೈತ ಸಿದ್ಧಾಂತದ ಹರಿಕಾರ ಮಧ್ವಾಚಾರ್ಯರ ಹೆಸರನ್ನು ಬೇಕೆಂತಲೇ ಕೈಬಿಟ್ಟಿದ್ದಾರೆ, ಅದನ್ನೂ ಸೇರಿಸಿ ಎಂದು ಮಾಧ್ವರು ತಕರಾರೆತ್ತಿದ್ದರು. ಕುವೆಂಪು ಅವರ ಮಗ ಪೂರ್ಣಚಂದ್ರ ತೇಜಸ್ವಿ ಅವರು ಸಾಧ್ಯವೇ ಇಲ್ಲ ಎಂದು ಕಡ್ಡಿಮುರಿದಂತೆ ಉತ್ತರಿಸಿದ್ದರು. [ನಾಡಗೀತೆಗೆ ಕತ್ತರಿ]

ಜೀವಪಡೆದ ವಿವಾದ : ಹೊತ್ತಿಕೊಂಡಿದ್ದ ಕಿಡಿ ಅಲ್ಲೇ ತಣ್ಣಗಾಗಿತ್ತು. ಈಗ ನಾಡಗೀತೆಯ ವಿವಾದ ಮತ್ತೆ ಜೀವ ಪಡೆದುಕೊಂಡಿದೆ. ಕವಿ 'ನಾಡೋಜ' ಚೆನ್ನವೀರ ಕಣವಿ ಅವರ ನೇತೃತ್ವದಲ್ಲಿ ಅಧ್ಯಯನ ನಡೆಸಿದ ತಂಡ, ನಾಡಗೀತೆಯನ್ನು 1 ನಿಮಿಷ 26 ಸೆಕೆಂಡುಗಳನ್ನು ಹಾಡುವಂತೆ ತಿದ್ದುಪಡಿ ಮಾಡಿ, ಅದನ್ನು ವೈ.ಕೆ. ಮುದ್ದುಕೃಷ್ಣ ಅವರ ಮಧುರ ಕಂಠದಿಂದ ಕೂಡ ಹಾಡಿಸಿ ಸರಕಾರಕ್ಕೆ ಸಲ್ಲಿಸಿದ್ದಾರೆ.
ಅದರಿಂದ ಯಾವ್ಯಾವ ಸಾಲುಗಳಿಂದ ಯಾವ್ಯಾವ ಮಹನೀಯರನ್ನು ಯಾವ ಆಧಾರದ ಮೇಲೆ ತೆಗೆದಿದ್ದಾರೋ? ಕಾರಣ ಇನ್ನೂ ನಿಗೂಢವಾಗಿದೆ. ಸದ್ಯಕ್ಕೆ, ಈ ಕತ್ತರಿ ಪ್ರಯೋಗ ಪಂಗಡ-ಪಂಗಡಗಳ ನಡುವೆ ವೈಷಮ್ಯ ತಂದಿಡದಿದ್ದರೆ, ಕುವೆಂಪು ಅಭಿಮಾನಿಗಳಲ್ಲಿ ಕಿಚ್ಚುಹಚ್ಚದಿದ್ದರೆ, ನಾಡಿನ ಸಾಮರಸ್ಯ ಕದಡದಿದ್ದರೆ ಸಾಕು! ಸರಕಾರ ಇದರ ಬಗ್ಗೆ ಯಾವುದೇ ನಿಲುವು ಇನ್ನೂ ಪ್ರಕಟಿಸಿಲ್ಲ. [ಸಂಪೂರ್ಣ ನಾಡಗೀತೆ]
ಎಸ್ಎಫ್ಐ ತೀವ್ರ ವಿರೋಧ : ನಾಡಗೀತೆಯ ತಿದ್ದುಪಡಿಗೆ ಭಾರತ ವಿದ್ಯಾರ್ಥಿ ಫೆಡರೇಷನ್ನ ಕರ್ನಾಟಕ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶಾಂತಿ ಸೌಹಾರ್ದತೆಯ ಪ್ರತೀಕವಾಗಿರುವ ನಾಡಗೀತೆಯಲ್ಲಿರುವ 'ಸರ್ವ ಜನಾಂಗದ ಶಾಂತಿ ತೋಟ' ಸಾಲನ್ನು ನಾಡಗೀತೆಯಿಂದ ಕತ್ತರಿಸಿದ್ದೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕುವೆಂಪು ಅವರ ಮೂಲ ಆಶಯವೂ ಕೂಡ ಈ ಸಾಲಿನಲ್ಲಿದೆ ಎಂಬುವುದನ್ನು ಸಮಿತಿಯು ಮರೆತಿರುವುದು ಖೇದಕರ. ನಾಡಗೀತೆಯು ವಿದ್ಯಾರ್ಥಿಗಳಲ್ಲಿ ಈ ನೆಲದ ಸಾಂಸ್ಕೃತಿಕ ಹಿರಿಮೆಯನ್ನು ಹಾಗೂ ಸಾಂವಿಧಾನಿಕ ಆಶಯವಾದ ಪ್ರಜೆಗಳಲ್ಲೆರೂ ಸಮಾನರೆನ್ನುವ ತಿಳಿವಳಿಕೆಯನ್ನು ಮೂಡಿಸುವಂತಿದೆ. ಈ ಸಾಲುಗಳನ್ನು ತೆಗೆದು ಹಾಕುವಂತೆ ಮಾಡಿರುವ ಶಿಫಾರಸ್ಸನ್ನು ರಾಜ್ಯ ಸರಕಾರ ಮಾನ್ಯತೆ ನೀಡದೆ ತಿರಸ್ಕರಿಸಬೇಕು ಎಂದು ಒಕ್ಕೊರಲಿನಿಂದ ಕೂಗಿದೆ.
ಈ ವಿಷಯಕ್ಕೆ ರಾಜ್ಯದ ಪ್ರಗತಿಪರ ಬುದ್ದಿಜೀವಿಗಳು ಧ್ವನಿ ಎತ್ತಿ ಒಕ್ಕೊರಲಿನಿಂದ ವಿರೋಧಿಸಬೇಕಿದೆ. ಒಂದು ವೇಳೆ ಈ ಸಾಲುಗಳನ್ನು ಕಡಿತಗೊಳಿಸಲು ಮುಂದಾದರೆ ವಿದ್ಯಾರ್ಥಿಗಳು ಸಾಹಿತಿಗಳು, ಶಿಕ್ಷಕ-ಉಪನ್ಯಾಸಕರು ರಾಜ್ಯ ಸರಕಾರದ ವಿರುದ್ಧ ತೀವ್ರತರನಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ)ನ ರಾಜ್ಯಾಧ್ಯಕ್ಷ ವಿ. ಅಂಬರೀಷ ಮತ್ತು ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಅವರು ಎಚ್ಚರಿಕೆ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications