ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಲವಂತದ ನಮಾಜ್
ಬೆಂಗಳೂರು, ಫೆಬ್ರವರಿ 24 : ನಗರದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ನಮಾಜ್ ಮಾಡುವಂತೆ ಬೋಧಕ ಸಿಬ್ಬಂದಿಗಳು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶಿವಾಜಿನಗರದ ಶಿವಾಜಿ ರಸ್ತೆಯಲ್ಲಿರುವ ವಿಕೆಒ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಲಸವಂತವಾಗಿ ಪ್ರತಿನಿತ್ಯ ನಮಾಜ್ ಮಾಡಿಸಲಾಗುತ್ತಿದೆ ಎನ್ನಲಾಗಿದೆ. ಈ ಶಾಲೆಯಲ್ಲಿ ಹಿಂದೂ-ಮುಸ್ಲಿಂ ಸೇರಿದಂತೆ ಇತರೆ ಜನಾಂಗದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯನ್ನೇ ಅಲ್ಪಸಂಖ್ಯಾತರ ಪ್ರಾರ್ಥನಾ ಮಂದಿರ ಮಾಡಿಕೊಂಡಿದ್ದಾರೆ ಎಂದು ಕೆಲವು ಪೋಷಕರು ಆರೋಪಿಸಿದ್ದಾರೆ.
ಈ ಸರ್ಕಾರಿ ಶಾಲೆಯನ್ನು ಖಾಸಗಿ ಸಂಸ್ಥೆಯೊಂದು ದತ್ತು ಪಡೆದಿದೆ. ಅಡ್ಮಿಷನ್ ಸಂದರ್ಭದಲ್ಲಿ ಅವರು ಅಲ್ಪ ಸಂಖ್ಯಾತರಿಗೆ ಮಣೆ ಹಾಕುತ್ತಿದ್ದಾರೆ. ಅಲ್ಲದೆ. ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ರಾಷ್ಟ್ರಗೀತೆ ಬದಲು ನಮಾಜ್ ಮಾಡಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ.
ಆದರೆ ಈ ಆರೋಪವನ್ನು ನಿರಾಕರಿಸಿರುವ ಶಾಲೆಯ ಮುಖ್ಯೋಪಧ್ಯಾಯರು ಇಡೀ ಶಾಲೆಯನ್ನು ಪ್ರರ್ಥನಾ ಮಂದಿರ ಮಾಡಿಲ್ಲ. ಅಲ್ಪಸಂಖ್ಯಾತರಿಗೆ ಪ್ರಾರ್ಥನೆ ಮಾಡಲು ಜಾಗವಿಲ್ಲ. ಹಾಗಾಗಿ ಕೇವಲ ಒಂದು ಕೊಠಡಿ ಬಿಟ್ಟುಕೊಡಲಾಗಿದೆ . ನಾವು ಪ್ರತಿನಿತ್ಯ ಬಲಸವಂತವಾಗಿ ವಿದ್ಯಾರ್ಥಿಗಳಿಂದ ನಮಾಜ್ ಮಾಡಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.