ದ್ವಿತೀಯ ಪಿಯುಸಿ ಅಂಕಗಳ ಗೊಂದಲ, ಪ್ರತಿಭಟನೆ
ಬೆಂಗಳೂರು, ಮೇ 22 : ಮೇ 26ರಂದು ಪ್ರಕಟಗೊಳ್ಳಬೇಕಾಗಿದ್ದ ಸಿಇಟಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ದ್ವಿತೀಯ ಪಿಯುಸಿ ಅಂಕಗಳ ಗೊಂದಲದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಮಯ 12.30 : 'ಮೌಲ್ಯಮಾಪನ ಮಾಡುವಾಗ ಎಚ್ಚರ ವಹಿಸಬೇಕು. ಇದನ್ನೆಲ್ಲ ನಿಮಗೆ ಹೊಸದಾಗಿ ಹೇಳಿಕೊಡಬೇಕೆ?' ಎಂದು ಸಚಿವ ಕಿಮ್ಮನೆ ರತ್ನಾಕರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಸಮಾಧಾನಪಡಿಸುತ್ತೇವೆ ಎಂದು ಸಚಿವರಿಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಸಮಯ 12.15 : ವಿಧಾನಸೌಧದಲ್ಲಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಕತ್ರಿ, ಜಂಟಿ ನಿರ್ದೇಶಕ ರಿತ್ತಿ ಮುಂತಾದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಸಮಯ 12 ಗಂಟೆ : ದ್ವಿತೀಯ ಪಿಯುಸಿ ಪರೀಕ್ಷೆ ಅಂಕಗಳ ಗೊಂದಲ ಮುಂದುವರೆದಿರುವಂತೆಯೇ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೊಹಸೀನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. [2015ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ]
ಸಮಯ 11.45 : ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಸುರೇಶ್ ಕುಮಾರ್ ಪಿಯು ಬೋರ್ಡ್ ಕಚೇರಿಗೆ ಆಗಮಿಸಿದ್ದು, ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಗೊಂದಲವನ್ನು ತಕ್ಷಣ ಬಗೆಹರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.[ಫಲಿತಾಂಶ : ಯಾವ ಜಿಲ್ಲೆಗೆ ಯಾವ ಸ್ಥಾನ]
ಸಮಯ 11 ಗಂಟೆ : ದ್ವಿತೀಯ ಪಿಯು ಮೌಲ್ಯಮಾಪನ ಮತ್ತು ಫಲಿತಾಂಶ ಪ್ರಕಟಣೆಯಲ್ಲಿ ಉಂಟಾಗಿರುವ ಗೊಂದಲವನ್ನು ಸರಿಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದೆ ಶುಕ್ರವಾರ ಪತ್ರಿಭಟನೆ ಮುಂದುವರೆಸಿದ್ದಾರೆ. ಮೇ 26ರಂದು ಪ್ರಕಟಗೊಳ್ಳಲಿರುವ ಸಿಇಟಿ ಪರೀಕ್ಷೆ ಫಲಿತಾಂಶವನ್ನು ಮುಂದೂಡಬೇಕು ಎಂಬುದು ವಿದ್ಯಾರ್ಥಿಗಳ ಒತ್ತಾಯವಾಗಿದೆ. [ಪಿಯು ಗೊಂದಲ : ಕಡೆಗೂ ಎಚ್ಚೆತ್ತ ಕಿಮ್ಮನೆ ರತ್ನಾಕರ]
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಎಚ್ಡಿಕೆ ಬೆಂಬಲ : ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡಿದ್ದು, ಪಿಯು ಕಚೇರಿಗೆ ಆಗಮಿಸಿದರು. 'ಸರ್ಕಾರ ವಿದ್ಯಾರ್ಥಿಗಳ ಬದುಕಿನೊಂದಿಗೆ ಆಟವಾಡದೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮತ್ತು ಫಲಿತಾಂಶದಲ್ಲಿರುವ ಗೊಂದಲವನ್ನು ಬಗೆಹರಿಸಬೇಕು' ಎಂದು ಅವರು ಒತ್ತಾಯಿಸಿದರು.

-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications