ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟಗರು ಚಿತ್ರದ ಬೇಬಿ ಕೃಷ್ಣ ಅಲಿಯಾಸ್ ದೇವನಾಥನಿಗೆ ಸಂಕಟ!

By Mahesh
|
Google Oneindia Kannada News

ಬೆಂಗಳೂರು, ಜುಲೈ 05: ಡಾ.ಶಿವರಾಜ್ ಕುಮಾರ್ ಅವರು ಅಭಿನಯಿಸಿರುವ 'ಟಗರು' ಚಿತ್ರದಲ್ಲಿ ಬೇಬಿ ಕೃಷ್ಣ ಎಂಬ ಪಾತ್ರ ನಿರ್ವಹಿಸಿದ್ದ ವೈಕೆ ದೇವನಾಥ ಎಂಬುವರ ಮೇಲೆ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.

ಉದ್ಯಮಿಗೆ ಉಂಡೆನಾಮ ತಿಕ್ಕಲು ಹೋಗಿ ಕಂಬಿ ಎಣಿಸುತ್ತಿರುವ 'ಟಗರು' ನಟ.!

ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಲ್ಲಿ ಬಂಧನವಾಗಿದ್ದ ದೇವನಾಥ ಅವರು ಇತ್ತೀಚೆಗೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದರು. ಈಗ ರಾಮನಗರದ ಜಮೀನು ‌ಮಾರುವುದಾಗಿ ಹೇಳಿ 30 ಲಕ್ಷ ಪಡೆದು ವಂಚಿಸಿರುವುದಾಗಿ ಕನ್ನಡ ಪರ ಕಾಳಜಿಯುಳ್ಳ ಪ್ರಶಾಂತ್ ಸಂಬರ್ಗಿ ಎಂಬವರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Tagaru film actor YK Devanatha Baby Krishna is in trouble again

ಈ ಹಿಂದೆ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲೂ 53 ಲಕ್ಷ ವಂಚನೆ ಕೇಸ್ ದಾಖಲಾಗಿತ್ತು. ಈಗ ನಟನ ವಿರುದ್ಧ ಪ್ರಾಣ ಬೆದರಿಕೆ, ವಂಚನೆ ಕುರಿತಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ವೈಕೆ.ದೇವನಾಥನ ಮೇಲೆ ಇದೊಂದೇ ಕೇಸ್ ಅಲ್ಲ, ಇಂತಹ ಹಲವು ಕೇಸ್ ಗಳಿವೆ. ತಾನು 'ಟಗರು' ಚಿತ್ರದ ನಿರ್ಮಾಪಕ ಅಂತ ಹೇಳಿಕೊಂಡು ಎಷ್ಟೋ ಜನಕ್ಕೆ ವೈಕೆ.ದೇವನಾಥ ಮಂಕು ಬೂದಿ ಎರಚಿದ್ದಾನೆ. ಸಾಲದಕ್ಕೆ, ರಾಜಮೌಳಿ ನಿರ್ದೇಶನದ 'ಮಹಾಭಾರತ' ಚಿತ್ರದಲ್ಲಿ 'ಶಕುನಿ' ಪಾತ್ರ ಮಾಡುತ್ತಿರುವೆ ಅಂತ ಹೇಳಿಕೊಂಡು ಅನೇಕರಿಗೆ ವಂಚನೆ ಮಾಡಿದ ಪ್ರಕರಣಗಳು ಬೆಳಕಿಗೆ ಬಂದಿದೆ.

English summary
Tagaru film actor YK Devanatha 'Baby Krishna' is in trouble again. YK Devanatha is accused in another fraud case related to sale of residential site in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X