ವಿವಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್
ಬೆಂಗಳೂರು, ಸೆ. 16 : ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಇನ್ನು ಮುಂದೆ ಯಾರೆಂದರೆ ಯಾರು ನುಗ್ಗುವಂತಿಲ್ಲ. ಬೆಂಗಳೂರು ವಿವಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ವಿವಿ ಸ್ಮಾರ್ಟ್ ಕಾರ್ಡ್ ವಿತರಿಸಲು ಮುಂದಾಗಿದೆ.
ಅನಗತ್ಯವಾಗಿ ವಿವಿ ಆವರಣದೊಳಗೆ ಪ್ರವೇಶಿಸುವ ಅಪರಿಚಿತರು ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ಉಂಟುಮಾಡುವುದುನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

ಸೋಮವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ನೀಡುವ ಕಾರ್ಡ್ ಹಾಜರಾತಿ ಲೆಕ್ಕಕ್ಕಲ್ಲ. ಇದು ಕೇವಲ ಗುರುತಿಗೆ ಮಾತ್ರ ಎಂದು ವಿವಿ ಸ್ಪಷ್ಟಪಡಿಸಿದೆ.(ಬೆಳಿಗ್ಗೆ ಎದ್ದು ಕಾಲೇಜಿಗೆ ಹೋದರೆ ಕೂರಲು ಜಾಗವಿಲ್ಲ!)
ಬಯೋಮೆಟ್ರಿಕ್ ವ್ಯವಸ್ಥೆ ಮೂಲಕ ಸ್ಮಾರ್ಟ್ ಕಾರ್ಡ್ ಕೆಲಸ ಮಾಡಲಿದ್ದು ವಿದ್ಯಾರ್ಥಿಗಳೆಂದು ಹೇಳಿಕೊಂಡು ಹಾಸ್ಟೆಲ್ ಸೇರಿಕೊಂಡಿರುವವರನ್ನು ಹೊರಹಾಕಲು ಇದು ನೆರವಾಗುತ್ತೆ ಎಂದು ಕುಲಪತಿ ಪ್ರೋ. ಬಿ.ತಿಮ್ಮೇಗೌಡ ತಿಳಿಸಿದ್ದಾರೆ.
ಉಪನ್ಯಾಸಕರಲ್ಲದವರು ಕೆಲವೊಮ್ಮೆ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿರುವುದು ಕಂಡುಬಂದಿದ್ದು ಸ್ಮಾರ್ಟ್ ಕಾರ್ಡ್ ಅದೆಲ್ಲದಕ್ಕೆ ತಡೆ ಒಡ್ಡಲಿದೆ. ಮೌಲ್ಯಮಾಪನದಿಂದ ತಪ್ಪಿಸಿಕೊಳ್ಳುತ್ತಿದ್ದ ಉಪನ್ಯಾಸಕರಿಗೂ ಇದು ಬ್ರೇಕ್ ಹಾಕಲಿದೆ ಎಂದು ವಿವಿ ಮೌಲ್ಯಮಾಪನ ವಿಭಾಗದ ಕುಲಸಚಿವ ಎನ್.ನಿಂಗೇಗೌಡ ತಿಳಿಸಿದ್ದಾರೆ.(ಬೆಂಗಳೂರು ವಿವಿಯ 12 ಕಾಲೇಜುಗಳಿಗೆ ಬೀಗ?)
ವಿವಿಯ ವಿವಿಧ ವಿಭಾಗದ ಒಟ್ಟು 117 ಪ್ರಾಧ್ಯಾಪಕರು ಮತ್ತು ಸಹ ಪ್ರಾಧ್ಯಾಪಕರಿಗೆ ಪದೋನ್ನತಿ ಬಡ್ತಿ ನೀಡಲು ಚಿಂತಿಸಲಾಗಿದೆ. ಇದಕ್ಕೆ ಸಿಂಡಿಕೇಟ್ ಸಭೆ ಒಪ್ಪಿಗೆ ಸೂಚಿಸಿದೆ ಎಂದು ತಿಮ್ಮೇಗೌಡ ತಿಳಿಸಿದ್ದಾರೆ.
-
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ -
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications