ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ನೀಡದ ಕರ್ನಾಟಕ ಹೈಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 2: ಬೆಂಗಳೂರಿನ 17 ವರ್ಷದ ಅತ್ಯಾಚಾರ ಸಂತ್ರಸ್ಥೆ ಗರ್ಭಪಾತಕ್ಕೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಆಗಸ್ಟ್ 31 ರಂದು ತಿರಸ್ಕರಿಸಿದೆ.
ವಿಶೇಷ ಪ್ರಕರಣವೊಂದರಲ್ಲಿ ಗರ್ಭಪಾತಕ್ಕೆ ಅವಕಾಶ ನೀಡಿದ ಸುಪ್ರೀಂ
ಲೈಂಗಿಕ ದೌರ್ಜನ್ಯಕ್ಕೊಳಗಾಗಿ 20 ವಾರದ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ತಾವು ಮತ್ತಷ್ಟು ಓದಬೇಕಿದೆ, ಇಷ್ಟವಿಲ್ಲದಿದ್ದರೂ ತಾಯಿಯಾಗುವುದರಿಂದ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಇದು ಪರಿಣಾಮ ಬೀರುತ್ತದೆ, ಆದ್ದರಿಂದ ಗರ್ಭಪಾತಕ್ಕೆ ಅನುಮತಿ ನೀಡಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
ಆದರೆ ಯುವತಿಯನ್ನು ಪರೀಕ್ಷಿಸಿದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯರು ಯುವತಿಗೆ ಗರ್ಭಪಾತ ಮಾಡಿಸುವುದರಿಂದಾಗಲಿ, ಮಾಡಿಸದೇ ಇರುವುದರಿಂದಾಗಲೀ ಆಕೆಯ ಆರೋಗ್ಯದಲ್ಲಿ ಯಾವುದೇ ಪರಿಣಾಮವಾಗುವಿದಿಲ್ಲ ಎಂದಿದ್ದರಿಂದ ಆಕೆಗೆ ಗರ್ಭಪಾತಕ್ಕೆ ಅವಕಾಶ ನೀಡಲು ಕೋರ್ಟ್ ಅಸಮ್ಮತಿ ಸೂಚಿಸಿದೆ.
ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರನೊಬ್ಬ ಆಕೆಯ ಮೇಲೆ ಅತ್ಯಾಚಾರ ಮಾಡಿ, ಗರ್ಭಿಣಿಯಾಗುವಂತೆ ಮಾಡಿದ್ದ.