ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐವರಲ್ಲಿ ಮೂರು ಶಾಸಕರಿಗೆ ನಿಗಮ ಮಂಡಳಿ ಸ್ಥಾನ,ಇಬ್ಬರ ಸ್ಥಿತಿ ತ್ರಿಶಂಕು

|
Google Oneindia Kannada News

ಬೆಂಗಳೂರು, ಜನವರಿ 09: ನಿಗಮ ಮಂಡಳಿ ಸ್ಥಾನ ಕೈತಪ್ಪಿದ್ದ ಐದು ಜನ ಕಾಂಗ್ರೆಸ್‌ ಶಾಸಕರ ಪೈಕಿ ಮೂವರಿಗೆ ಮತ್ತೆ ಅದೇ ಹುದ್ದೆ ಸಿಕ್ಕಿದೆ ಆದರೆ ಇಬ್ಬರು ಶಾಸಕರಿಗೆ ಇನ್ನೂ ಸಿಕ್ಕಿಲ್ಲ.

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಅವರನ್ನು ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಅವರನ್ನು ಬಿಎಂಟಿಸಿ ನಿಗಮದ ಅಧ್ಯಕ್ಷರನ್ನಾಗಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್ ಅವರನ್ನು ನೇಮಕ ಮಾಡಲಾಗಿದೆ.

ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ

ಮೊದಲ ಪಟ್ಟಿಯಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಹಾಗೂ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಎರಡನೇಯ ಪಟ್ಟಿಯಲ್ಲಿಯೂ ಸ್ಥಾನ ದೊರೆತಿಲ್ಲ.

Three Congress MLAs appointed to board and corporation president post

ಕಾಂಗ್ರೆಸ್‌ ನವರು 20 ಮಂದಿ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕಕ್ಕೆ ಅಂತಿಮಗೊಳಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅಂಕಿತಕ್ಕೆ ಕಳುಹಿಸಿದ್ದರು ಆದರೆ ಕುಮಾರಸ್ವಾಮಿ ಅವರು ಐದು ಜನ ಶಾಸಕರ ಹೆಸರು ಕೈಬಿಟ್ಟಿದ್ದರು ಇದು ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಸಮರಕ್ಕೆ ಕಾರಣವಾಗಿತ್ತು.

ಕುಮಾರಸ್ವಾಮಿ 'ಕೃಪೆ'ಯಿಂದ ನಿಗಮ ಮಂಡಳಿ ಕೈತಪ್ಪಿದ ಶಾಸಕರಿಗೆ ಸಿದ್ದರಾಮಯ್ಯ ಅಭಯಕುಮಾರಸ್ವಾಮಿ 'ಕೃಪೆ'ಯಿಂದ ನಿಗಮ ಮಂಡಳಿ ಕೈತಪ್ಪಿದ ಶಾಸಕರಿಗೆ ಸಿದ್ದರಾಮಯ್ಯ ಅಭಯ

ಸಚಿವ ಸ್ಥಾನ ಕೈತಪ್ಪಿರುವ ಕಾರಣ ಈಗಾಗಲೇ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ಅವರು ಈಗ ನಿಗಮ ಮಂಡಳಿ ಸ್ಥಾನವೂ ಕೈತಪ್ಪಿರುವ ಕಾರಣ ಇನ್ನಷ್ಟು ಅಸಮಾಧಾನಗೊಳ್ಳುವ ಸಾಧ್ಯತೆ ಇದೆ.

English summary
Three congress MLAs NA Harris, ST Somashekhar, Subbareddy appointed to board and corporation president post by government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X