ವಾಣಿಜ್ಯ ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಮೂರು ಹೊಸ ವಾಣಿಜ್ಯ ಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 19: ರಾಜ್ಯದಲ್ಲಿ ಮೂರು ವಾಣಿಜ್ಯಾತ್ಮಕ ನ್ಯಾಯಾಲಯವನ್ನು ಸ್ಥಾಪಿಸಲು ಸಮ್ಮತಿ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ಗೆ ಜಾಮೀನು, ಬೀಸೋ ದೊಣ್ಣೆಯಿಂದ ಪಾರು
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಾಣಿಜ್ಯ ವ್ಯವಹಾರಗಳ ದಾವೆಗಳ ಸುಗಮ ನಿರ್ವಹಣೆಗಾಗಿ ಈ ಮೂರು ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಒಂದು ನ್ಯಾಯಾಲಯ ಬಳ್ಳಾರಿಯಲ್ಲಿ ಸ್ಥಾಪನೆ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.
ಭಾರತಕ್ಕೆ ಮಲ್ಯ ಹಸ್ತಾಂತರ: ಸೆ. 18ಕ್ಕೆ ವಿಚಾರಣೆ ಮುಂದೂಡಿಕೆ
'ಕಮರ್ಷಿಯಲ್ ಕೋರ್ಟ್ಸ್, ಕಮರ್ಷಿಯಲ್ ಡಿವಿಷನ್ ಅಂಡ್ ಕಮರ್ಷಿಯಲ್ ಅಪೆಲೇಟ್ ಡಿವಿಷನ್ ಆಫ್ ಹೈಕೋರ್ಟ್ಸ್ ಆಕ್ಟ್, 2015' ರಲ್ಲಿ ದಾಖಲಾಗುವ ಪ್ರಕರಣಗಳನ್ನು ಈ ನ್ಯಾಯಾಲಯದಲ್ಲಿ ನಿರ್ವಹಿಸಲಾಗುತ್ತದೆ.
ಈ ನ್ಯಾಯಾಲಯಗಳಿಗೆ ಅಗತ್ಯವಾದ ಹುದ್ದೆಗಳಿಗೂ ಸಹ ಮಂಜೂರಾತಿ ನೀಡಲಾಗಿದೆ. ಪ್ರತಿ ನ್ಯಾಯಾಲಯಕ್ಕೆ ಒಬ್ಬರು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ಒಬ್ಬರು ಶಿರಸ್ತೆದಾರರು, ತೀರ್ಪು ಬರಹಗಾರರು, ದ್ವಿತೀಯ ದರ್ಜೆ ಸಹಾಯಕರು, ಬೆರಳಚ್ಚುಗಾರರು, ಅಟೆಂಡರ್ ಹಾಗೂ ಜವಾನ ಸೇರಿದಂತೆ 8 ಹುದ್ದೆಗಳಿಗೆ ನೇಮಕ ಮಾಡುವಂತೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.