ಕತಾರ್ ನಲ್ಲಿ ಪ್ರೇಮ, ಕಳ್ಳತನದಿಂದ ಭಾರತಕ್ಕೆ ಪಾಕಿಸ್ತಾನಿ ಎಂಟ್ರಿ!
ನಕಲಿ ಪಾಸ್ ಪೋರ್ಟ್ ಹೊಂದಿದ್ದ ಮೂವರು ಪಾಕಿಸ್ತಾನಿಗಳನ್ನು ಬೆಂಗಳೂರಲ್ಲಿ ಬಂಧಿಸಲಾಗಿದೆ. ಕುಮಾರಸ್ವಾಮಿ ಲೇ ಔಟ್ ಪೊಲೀಸರ ಬಲೆಗೆ ಬಿದ್ದ ಮೂವರು ಭಾರತದ ನಕಲಿ ಪಾಸ್ ಪೋರ್ಟ್ ಹೊಂದಿದ್ದರು.
ಬೆಂಗಳೂರು, ಮೇ 25: ನಕಲಿ ಪಾಸ್ ಪೋರ್ಟ್ ಹೊಂದಿದ್ದ ಮೂವರು ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಲ್ಲಿ ಬಂಧಿಸಲಾಗಿದೆ. ಕುಮಾರಸ್ವಾಮಿ ಲೇ ಔಟ್ ಪೊಲೀಸರ ಬಲೆಗೆ ಬಿದ್ದ ಮೂವರು ಭಾರತದ ನಕಲಿ ಪಾಸ್ ಪೋರ್ಟ್, ಆಧಾರ್ ಕಾರ್ಡ್ ಇನ್ನಿತರ ದಾಖಲೆಗಳನ್ನು ಹೊಂದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಹೇಳಿದರು.
ಕಳೆದ 9 ತಿಂಗಳಿನಿಂದ ಕುಮಾರಸ್ವಾಮಿ ಲೌಟಿನ ಅಪಾರ್ಟ್ಮೆಂಟ್ ನಲ್ಲಿ ನಾಲ್ವರು ವಾಸಿಸುತ್ತಿದ್ದರು. ಇವರ ಬಗ್ಗೆ ಕೆಲ ಕಾಲದಿಂದ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ಗುರುವಾರ (ಮೇ 25) ದಂದು ಎಲ್ಲರನ್ನು ಬಂಧಿಸಲಾಗಿದೆ. ಭಾರತದ ನಾಗರಿಕರು ಎಂದು ಸಾಬೀತುಪಡಿಸಲು ಬೇಕಾದ ಸಕಲ ಗುರುತಿನ ಚೀಟಿಗಳನ್ನು ತಯಾರಿಸಿ ಇಟ್ಟುಕೊಂಡಿದ್ದರು.
ಬಂಧಿತರನ್ನು ಕರಾಚಿ ಮೂಲದ ಕಿರಣ್ ಗುಲಾಮ್, ಸಮೀರಾ ಹಾಗೂ ಕಾಸಿಫ್ ಷಂಶುದ್ದೀನ್ ಎಂದು ಗುರುತಿಸಲಾಗಿದೆ. ಇವರ ಜತೆಗೆ ಕೇರಳ ಮೂಲದ ಮೊಹಮ್ಮದ್ ಬಷೀರ್ ಎಂಬಾತನನ್ನು ವಿಚಾರಣೆಗಾಗಿ ಕರೆದೊಯ್ಯಲಾಗಿದೆ.

ಕತಾರ್ ನಲ್ಲಿ ಉದ್ಯೋಗ ನಿರತರಾಗಿದ್ದಾಗ ಪಾಕಿಸ್ತಾನಿ ಯುವತಿ ಕಿರಣ್ ಗುಲಾಮ್ ಎಂಬುವರನ್ನು ಮೊಹಮ್ಮದ್ ಪರಿಚಯ ಮಾಡಿಕೊಂಡಿದ್ದಾನೆ. ಇಬ್ಬರಿಗೂ ಪ್ರೇಮಾಂಕುರವಾಗಿ ಮದುವೆಯಾಗಲು ಬಯಸಿದ್ದಾರೆ. ಯುವತಿಯ ಮನೆಯಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗಿದೆ. ನಕಲಿ ಪಾಸ್ ಪೋರ್ಟ್ ಬಳಸಿ ಪಾಕಿಸ್ತಾನಿಗಳನ್ನು ಕತಾರ್ ನಿಂದ ಮಸ್ಕತ್ ಮೂಲಕ ನೇಪಾಳಕ್ಕೆ ಬಂದು ಅಲ್ಲಿಂದ ಭಾರತದೊಳಗೆ ಕರೆಸಿಕೊಳ್ಳಲಾಗಿದೆ.
ಬೆಂಗಳೂರಿನ ಕುಮಾರಸ್ವಾಮಿ ಲೇ ಔಟಿನಲ್ಲಿ ನೆಲೆಸಲು ಮತ್ತೊಬ್ಬ ಭಾರತೀಯ ನೆರವಾಗಿರುವ ಶಂಕೆ ವ್ಯಕ್ತವಾಗಿದ್ದು, ಆತನಿಗಾಗಿ ಶೋಧಕಾರ್ಯ ನಡೆಯುತ್ತಿದೆ.
-
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
US-Iran Talks: ಪಾಕ್ ನೆಲದಲ್ಲಿ 21 ಗಂಟೆಗಳ ಸಂಧಾನ ಮಾತುಕತೆ ವಿಫಲ: ಹೆಚ್ಚಿದ ಯುದ್ಧ ಭೀತಿ- ಪ್ರಮುಖಾಂಶಗಳು -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್









Click it and Unblock the Notifications