ಮಾನವೀಯತೆ ಮೆರೆದ ದೊಡೇಜಾಗೆ ಅಭಿನಂದನೆ
ಬೆಂಗಳೂರು, ಮೇ 12 : ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪಾದಚಾರಿಯನ್ನು ತಾವೇ ಸ್ವತಃ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮತ್ತು ಸಮಯಸ್ಫೂರ್ತಿ ಮೆರೆದ ಬೆಂಗಳೂರಿನ ನಿವಾಸಿ ಸಂದೀಪ್ ದೊಡೇಜಾ ಅವರನ್ನು ಬೆಂಗಳೂರು ಸಂಚಾರಿ ಪೊಲೀಸರು ಶ್ಲಾಷಿಸಿದ್ದಾರೆ. ಸಂದೀಪ್ ಅವರನ್ನು ಗುರುತಿಸಿ ಶ್ಲಾಘಿಸಿದ ಸಂಚಾರಿ ಪೊಲೀಸರಿಗೂ ಅಭಿನಂದನೆ.
ಮಾನವ ಜೀವವನ್ನು ಕಾಪಾಡುವ ಉದ್ದೇಶದಿಂದ ರಾತ್ರಿಯಾಗಿದ್ದನ್ನೂ ಲೆಕ್ಕಿಸದೆ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ ಸಂದೀಪ್ ಅವರ ಪ್ರಯತ್ನವನ್ನು ಶ್ಲಾಘಿಸಿ ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸ್ ಅಧಿಕಾರಿ ಅವರು ಸಂದೀಪ್ ದೊಡೇಜಾ ಅವರ ನಿವಾಸಕ್ಕೆ ತೆರಳಿ ಹೂಗುಚ್ಛ ನೀಡಿ ಅಭಿನಂದಿಸಿದರು.

ಆಗಿದ್ದೇನು? : ಸಿಟಿ ಮಾರುಕಟ್ಟೆ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಿಐಎಸ್ಎಲ್ ಕಟ್ಟಡದ ಬಳಿ ಮೇ 7ರಂದು ರಾತ್ರಿ 10.45ರ ಸುಮಾರಿಗೆ ರಸ್ತೆ ದಾಟುತ್ತಿದ್ದ ಪಾದಚಾರಿಯನ್ನು ಕಪ್ಪು ಬಣ್ಣದ ಅಪರಿಚಿತ ಕಾರು ಡಿಕ್ಕಿ ಹೊಡೆದಿದೆ. ಅಡ್ಡಾದಿಡ್ಡಿಯಾಗಿ ಅಜಾರೂಕತೆಯಿಂದ ಓಡಿಸುತ್ತಿದ್ದ ಕಾರಿನ ಚಾಲಕ ವಾಹನವನ್ನು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದಾನೆ.
ಆ ಕಪ್ಪು ಕಾರಿನ ಹಿಂದೆ ಬರುತ್ತಿದ್ದ ಸಾಫ್ಟ್ ವೇರ್ ಇಂಜಿನಿಯರ್ ಸಂದೀಪ್ ದೊಡೇಜಾ ಅವರು ತಕ್ಷಣ ಕಾರನ್ನು ನಿಲ್ಲಿಸಿದ್ದಾರೆ. ತಲೆಗೆ ತೀವ್ರ ಪೆಟ್ಟು ತಿಂದು ಒದ್ದಾಡುತ್ತಿದ್ದ ಪಾದಚಾರಿಯನ್ನು, ಬೇರೆ ವಿಚಾರವನ್ನು ಕೂಡ ಮಾಡದೆ ಸಂದೀಪ್ ಮತ್ತು ಅವರ ಪತ್ನಿ ತಮ್ಮ ಕಾರಿನಲ್ಲಿ ಕೂಡಿಸಿಕೊಂಡು ಹತ್ತಿರದಲ್ಲಿದ್ದ ಎಸ್ಆರ್ ನಗರದಲ್ಲಿರುವ ಸಿಂಧಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. [ಮಾನವೀಯತೆ ಮೆರೆದ ಆಟೋ ಚಾಲಕರು]
ಗಾಯಾಳುವಿನ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸಿಂಧಿ ಆಸ್ಪತ್ರೆಯ ಸಲಹೆಯಂತೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮೇ 8ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಸುನೀಗಿದ್ದಾರೆ. ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಕೇಸನ್ನು ದಾಖಲಿಸಿಕೊಳ್ಳಲಾಗಿದ್ದು, ಹಿಟ್ ಅಂಡ್ ರನ್ ಮಾಡಿದ ಚಾಲಕನ ಹುಡಾಕಾಟದಲ್ಲಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications