Get Updates
Get notified of breaking news, exclusive insights, and must-see stories!

'ಇದು ಮುನಿರತ್ನ ಗೆಲುವಲ್ಲ, ಸಿದ್ದರಾಮಯ್ಯ ಸರ್ಕಾರದ ಗೆಲುವು'

ಬೆಂಗಳೂರು, ಮೇ 31 : ರಾಜರಾಜೇಶ್ವರಿ ನಗರ ಚುನಾವಣೆ ಫಲಿತಾಂಶ ನಿರೀಕ್ಷೆಯಂತೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಂ ನಾಯ್ಡು ಅವರು ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಇದು ಮುನಿರತ್ನ ಅವರೊಬ್ಬರ ಗೆಲುವಲ್ಲ, ಸಿದ್ದರಾಮಯ್ಯ ಸರ್ಕಾರ ಮಾಡಿದ ಸಾಧನೆಯ ಫಲ' ಎಂದು ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿದ್ದಾರೆ.

ಚುನಾವಣಾ ಅಕ್ರಮದ ಆರೋಪ ಹೊತ್ತಿದ್ದ ಮುನಿರತ್ನ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಯತ್ನಿಸಲಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದ ಬಳಿಕ, ರಾಜರಾಜೇಶ್ವರಿ ನಗರದಲ್ಲಿ ಅಭ್ಯರ್ಥಿಗಳ ಪರಿಸ್ಥಿತಿ ಏನಾಗುವುದೋ ಎಂಬ ಕುತೂಹಲವಿತ್ತು.

ಆದರೆ, ಮೈತ್ರಿ ಏನಿದ್ದರೂ ವಿಧಾನಸಭೆಯಲ್ಲಿ ಮಾತ್ರ, ಚುನಾವಣೆ ಕಣದಲ್ಲಿ ಅಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಘೋಷಿಸಿದ್ದು, ಮಹತ್ವದ ತಿರುವು ತಂದಿತು.

ಸರಿ ಸುಮಾರು 103195 ಮತಗಳನ್ನು ಗಳಿಸಿರುವ ಕಾಂಗ್ರೆಸ್ಸಿನ ಹಾಲಿ ಶಾಸಕ ಮುನಿರತ್ನ ಅವರು ಗೆಲುವು ದಾಖಲಿಸಿದರೆ, ಬಿಜೆಪಿ 69769 ಮತಗಳನ್ನು ಪಡೆದರೆ, ಜೆಡಿಎಸ್ 54289 ಮತಗಳನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ. ಈ ಗೆಲುವಿನಿಂದ ವಿಧಾನಸೌಧದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಜೋಡಿಯ ಬಲ 117ಕ್ಕೇರಿದೆ.

ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರ ಜನತೆಗೆ ನೀಡಿದ ಭರವಸೆ ಸುಳ್ಳಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಜೋಡಿ ಬಲ

ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರ ಜನತೆಗೆ ನೀಡಿದ ಭರವಸೆ ಸುಳ್ಳಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಎಚ್ ಡಿ ಕುಮಾರಸ್ವಾಮಿಗೆ ಸಂದೇಶ

ಎಚ್ ಡಿ ಕುಮಾರಸ್ವಾಮಿಗೆ ಅಭಿಮಾನಿಯೊಬ್ಬ ಸಂದೇಶ ಕಳಿಸಿದ್ದು, ಮುಂದಿನ ಲೋಕಸಭೆಗಾಗಿ ಬೇರೆ ರೀತಿ ಕಾರ್ಯತಂತ್ರ ರೂಪಿಸಿ, ನಮ್ಮ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ, ಈ ಬಗ್ಗೆ ಚಿಂತಿಸಿ ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ರಸ್ತೆಯಲ್ಲಿ ಡ್ಯಾನ್ಸ್ ಮಾಡಿ, ಸಿಹಿ ಹಂಚಿ ಕುಣಿದಾಡಿದ್ದಾರೆ.

ಮುನಿರತ್ನ ಗೆಲುವಿನ ಲೆಕ್ಕಾಚಾರ ಹೇಗೆ?

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಇದ್ದರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅನೇಕ ಕಾರಣಗಳಿದ್ದವು. ಮುನಿರತ್ನ ಅವರ ಮೇಲೆ ಆರೋಪಗಳಿದ್ದರೂ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಹೀಗಾಗಿ ಶೇಕಡಾವಾರು ಮತಗಳ ಪೈಕಿ ಕನಿಷ್ಠ ಶೇ5 ರಷ್ಟು ಕಾಂಗ್ರೆಸ್ಸಿಗೆ ಲಾಭವಾಗಿದೆ.

ಬಿಜೆಪಿ ಅಭಿಮಾನಿಗಳ ಪ್ರತಿಕ್ರಿಯೆ

ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದೇ ಬಿಜೆಪಿ ಸೋಲಿಗೆ ಕಾರಣ, ಬೆಂಗಳೂರಿನ ಶಾಸಕರುಗಳ ನಡುವೆ ಈ ರೀತಿ ಒಪ್ಪಂದಗಳು ನಡೆಯುತ್ತಿರುತ್ತವೆ ಇದೇ ಬೆಂಗಳೂರಲ್ಲಿ ಬಿಜೆಪಿ ಶಾಸಕರ ಸಂಖ್ಯೆ ಹೆಚ್ಚಾಗದಿರಲು ಕಾರಣ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+