ಮೋದಿ ಕುರಿತು ರಮ್ಯಾ ಟ್ವೀಟ್ : ಸೆಲೆಬ್ರಿಟಿಗಳಿಂದ ಖಡಕ್ ಉತ್ತರ
Recommended Video

ಬೆಂಗಳೂರು, ಫೆಬ್ರವರಿ 05: ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ ಮಾಡಿರುವ ಟ್ವೀಟ್ ಇದೀಗ ಭಾರೀ ಸಂಚಲನ ಮೂಡಿಸಿದ್ದು, ಮೋದಿ ಅಭಿಮಾನಿಗಳು ರಮ್ಯಾ ಅವರನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನಶೆಯಲ್ಲಿದ್ದಾರೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದ ರಮ್ಯಾ ಅವರ ನಡೆಗೆ ಎಲ್ಲೆಡೆ ಟೀಕೆ ವ್ಯಕ್ತವಾಗಿದೆ. ದೇಶದ ಅತ್ಯನ್ನತ ಹುದ್ದೆಯಲ್ಲಿರುವ ಪ್ರಧಾನಿ ಕುರಿತು ಇಂಥ ಬಾಲಿಶ ಹೇಳಿಕೆ ನೀಡುವುದು ಸರಿಯೆ ಎಂಬ ಪ್ರಶ್ನೆ ಎದ್ದಿದೆ.
ಚಿತ್ರಗಳು : ಬೆಂಗಳೂರಿನಲ್ಲಿ ಮೋಡಿ ಮಾಡಿದ ಮೋದಿ
ರಮ್ಯಾ ಅವರ ಹೇಳಕೆಯನ್ನು ಹಲವರು ಖಂಡಿಸಿದ್ದಾರೆ. ಚಿತ್ರ ನಟ ಜಗ್ಗೇಶ್ ರಮ್ಯಾ ಅವರನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡು, ಈಕೆ ಯಾರು? ಸಾಧನೆ ಏನು? ನೆಟ್ಟಗೆ ಕನ್ನಶ ಮಾತಾಡಲು ಬರದ ಕಾಡುಪಾಪದಂತೆ ಈಕೆ ಎಂದಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಿಲ್ಪಾ ಗಣೇಶ್, ರಮ್ಯಾ ಹೆಸರಿನಲ್ಲೇ ರಮ್ ಇದೆ! ಬಹುಶಃ ಅವರೇ ಯಾವಾಗಲೂ ರಮ್ ಕುಡಿದು ಟ್ವೀಟ್ ಮಾಡುತ್ತೆ ಅನ್ನಿಸುತ್ತೆ ಎಂದಿದ್ದಾರೆ.
|
ಜಗ್ಗೇಶ್ ತರಾಟೆ
"ದೊಡ್ಡವರ ಬಗ್ಗೆ ಮಾತಾಡ ಬೇಕಾದರೆ
ಮಾತಾಡುವ ಮಂದಿಗೆ ವಯಸ್ಸು ಅನುಭವ ಸಾಧನೆ ಮಾಡಿ ಪಕ್ವವಾದಾಗ ಅಪಭ್ರಂಷ ಇಲ್ಲದೆ ಚರ್ಚೆ ಮಾಡಿದರೆ ಅದನ್ನ ತರ್ಕ ಎಂದು ಒಪ್ಪಿ ವಿಮರ್ಷೆಮಾಡಿ ನಿರ್ಣಯಸುತ್ತಾರೆ ಜನ..
ವಿಶ್ವದ ಬಲಿಷ್ಟರಾಷ್ಟ್ರದ ನಾಯಕರೇ ಮೋದಿಯರವರ ಒಪ್ಪಿಮೆಚ್ಚಿದ್ದಾರೆ.
ಈಕೆ ಯಾರು?ಸಾಧನೆ ಏನು?ನೆಟ್ಟಗೆ ಕನ್ನಡ ಮಾತಾಡಲು ಬರದ ಕಾಡುಪಾಪದಂತೆ ಈಕೆ!" ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ ನವರಸ ನಾಯಕ ಜಗ್ಗೇಶ್.
|
ಶಿಲ್ಪಾ ಗಣೇಶ್ ಟಾಂಗ್
"ಸತತ ಸೋಲಿಗೆ ತಲೆಕೆಟ್ಟು ಆಗಾಗ ಗುಟ್ಟಾಗಿ ವಿದೇಶಕ್ಕೆ ಹೋದವರಿಗೆ ನಶೆಯ ವಿಚಾರ ಚೆನ್ನಾಗಿ ತಿಳಿದಿರುತ್ತದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಿಲ್ಪಾ ಗಣೇಶ್ ಟ್ವೀಟ್ ಮಾಡಿದ್ದಾರೆ.
|
ರಮ್ ಇರುವುದು ರಮ್ಯಾ ಹೆಸರಿನಲ್ಲಿ!
"ರಮ್ಯಾ ಅವರ ಹೆಸರಿನಲ್ಲಿಯೇ ರಮ್ ಇದೆ. ಬಹುಶಃ ಅವರೇ ಯಾವಾಗಲೂ ನಶೆಯಲ್ಲಿ ಟ್ವೀಟ್ ಮಾಡುತ್ತಾರೆ ಅನ್ನಿಸುತ್ತೆ" ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ ಶಿಲ್ಪಾ ಗಣೇಶ್.
|
ಮೋದಿ ಕುರಿತು ರಮ್ಯಾ ಟ್ವೀಟ್ ನಲ್ಲೇನಿತ್ತು?
ಬೆಂಗಳೂರಿನಲ್ಲಿ ಪರಿವರ್ತನಾ ಯಾತ್ರೆಯ ಸಮಾರೋಪ ಭಾಷಣ ಮಾಡಿದ ಮೋದಿಯವರನ್ನು ಆಡಿಕೊಂಡ ರಮ್ಯಾ, ಪ್ರಧಾನಿ ನರೇಂದ್ರ ಮೋದಿಯವರು ನಶೆಯಲ್ಲಿದ್ದಾಗ ಮಾತನಾಡಿದರೆ ಹೀಗಾಗುತ್ತದೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.
-
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications