ಬೆಂಗಳೂರಿನ ಹಲಸೂರು ಕೆರೆ ಅಭಿವೃದ್ಧಿಗೆ ಯೋಜನೆ ಸಿದ್ಧ
ಬೆಂಗಳೂರು, ಮಾ.12 : 'ನಮ್ಮ ಬೆಂಗಳೂರು ನನ್ನ ಕೊಡುಗೆ' ಯೋಜನೆಯಡಿ ಹಲಸೂರು ಕೆರೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಬಿಬಿಎಂಪಿ ಮೇಯರ್ ಎನ್.ಶಾಂತಕುಮಾರಿ ಹೇಳಿದ್ದಾರೆ. ಕೆರೆ ಅವರಣದಲ್ಲಿ ಶುಚಿತ್ವ ಕಾಪಾಡುವಂತೆ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ.
ಬಿಬಿಎಂಪಿ ಮೇಯರ್ ಶಾಂತಕುಮಾರಿ ಅವರು ಬುಧವಾರ ಹಲಸೂರು ಕೆರೆಗೆ ಭೇಟಿ ನೀಡಿದ್ದರು. ಈ ಕೆರೆಯನ್ನು ಅಭಿವೃದ್ಧಿಗೊಳಿಸುವ ಹೊಣೆಯನ್ನು ಪ್ರೆಸ್ಟೀಜ್ ಸಂಸ್ಥೆಗೆ ನೀಡಲಾಗಿದೆ. ನಮ್ಮ ಬೆಂಗಳೂರು ನನ್ನ ಕೊಡುಗೆ ಯೋಜನೆಯಡಿ ಕೆರೆ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.'

ಹಲಸೂರು ಕೆರೆಯ ಒಂದು ಭಾಗದಲ್ಲಿ ಶುದ್ಧೀಕರಣ ಘಟಕವಿದೆ. ಆದರೆ, ಶಿವಾಜಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಕೊಳಚೆ ನೀರು ಕೆರೆಗೆ ಬಂದು ಸೇರುತ್ತಿದೆ. ಆದ್ದರಿಂದ ಕೆರೆಯ ಪರಿಸರ ಹಾಳಾಗಿದೆ ಎಂದು ಮೇಯರ್ ತಿಳಿಸಿದರು. [ಯಡಿಯೂರು ಕೆರೆ ಮೇಲೊಂದು ಪಕ್ಷಿ ನೋಟ]
ಕೆರೆಯನ್ನು ಅಭಿವೃದ್ಧಿಪಡಿಸಿ, ಕೆರೆಯಲ್ಲಿ ನೈರ್ಮಲ್ಯ ಕಾಪಾಡುವುದು, ನೀರನ್ನು ಸ್ವಚ್ಛಗೊಳಿಸುವ ಹೊಣೆಯನ್ನು ಪ್ರೆಸ್ಟೀಜ್ ಸಂಸ್ಥೆಗೆ ನೀಡಲಾಗಿದೆ. ಕೆರೆಯನ್ನು ಅಭಿವೃದ್ಧಿಪಡಿಸಿ ವಾಯುವಿಹಾರಿಗಳು ಬಳಸುವಂತೆ ಮಾಡುವ ಗುತ್ತಿಗೆಯನ್ನು ನೀಡಲಾಗಿದೆ ಎಂದರು.

ಅಧಿಕಾರಿಗಳಿಗೆ ತರಾಟೆ : ಕೆರೆಯ ಆವರಣದಲ್ಲಿ ಪ್ಲಾಸ್ಟಿಕ್ ಚೀಲ, ಬಾಟಲ್, ಕಸ-ಕಡ್ಡಿ ತೇಲುತ್ತಿರುವುದನ್ನು ನೋಡಿದ ಮೇಯರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇವುಗಳನ್ನು ತಕ್ಷಣ ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.













Click it and Unblock the Notifications