ಮೋದಿಯ ಭಾರತದಲ್ಲಿ ನಾನಿರೋಲ್ಲ : ಅನಂತಮೂರ್ತಿ

ಬೆಂಗಳೂರಿನಲ್ಲಿ ಭಾನುವಾರ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅನಂತಮೂರ್ತಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಪಡೆದರೆ, ಗಾಂಧಿ, ನೆಹರು ಕಂಡಂತಹ ಭಾರತ ಉಳಿಯುವುದಿಲ್ಲ ಎಂದು ಅಭಿಪ್ರಾಯಪಟ್ಟರು ಎಂದು ಈ ಸಂಜೆ ದಿನಪತ್ರಿಕೆ ವರದಿ ಮಾಡಿದೆ.
ಗಾಂಧಿ, ನೆಹರು ತತ್ವಗಳು ಇಲ್ಲದ ದೇಶದಲ್ಲಿ ನಾನು ಬದುಕಲು ಇಚ್ಛೆ ಪಡುವುದಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದರೆ ನಾನು, ಭಾರತದಲ್ಲಿ ಬದುಕಲು ಇಚ್ಛೆ ಪಡುವುದಿಲ್ಲ ಎಂದು ಅನಂತಮೂರ್ತಿ ಅವರು ಹೇಳಿದರು.
ಮಾಧ್ಯಮಗಳು ನರೇಂದ್ರ ಮೋದಿಯ ಒಂದು ಮುಖವನ್ನು ಮಾತ್ರ ಬಿಂಬಿಸಿ ಪ್ರಧಾನಿಯನ್ನಾಗಿ ಮಾಡಲು ಹೊರಟಿವೆ. ಅವರ ಇನ್ನೊಂದು ಮುಖವನ್ನು ಅನಾವರಣ ಮಾಡುತ್ತಿಲ್ಲ. ಇದು ದೊಡ್ಡ ದುರಂತ ಎಂದು ವಿಶ್ಲೇಷಿಸಿದರು.
ನರೇಂದ್ರ ಮೋದಿ ಪ್ರಧಾನಿಯಾದರೆ, ಭಾರತ ಸರ್ವ ಜನಾಂಗದ ಸುಂದರ ತೋಟವಾಗಿ ಉಳಿಯುವುದಿಲ್ಲ. ಮೋದಿ ಯಂತಹವರು ದೇಶವನ್ನು ಮುನ್ನೆಡುಸುವುದಾದದರೆ, ನನ್ನಂಥವರು ಭಾರತದಲ್ಲಿ ಬದುಕಲು ಇಷ್ಟ ಪಡುವುದೂ ಇಲ್ಲ ಎಂದು ಘೋಷಿಸಿದರು.
ಕೆಲವು ದಿನಗಳ ಹಿಂದೆ ಕಾರ್ಪೋರೇಟ್ ಕಂಪನಿಗಳು, ಶ್ರೀಮಂತರು, ಮೇಲ್ಜಾತಿಯವರು ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿ ಮಾಡಬೇಕೆಂದು ಹಂಬಲಿಸುತ್ತಿವೆ ಎಂದು ಅನಂತಮೂರ್ತಿ ದೂರಿದ್ದರು. ಸದ್ಯ ಮೋದಿ 2014ರ ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆಯಾದ ಬಳಿಕ ಅನಂತಮೂರ್ತಿ ಅವರನ್ನು ಟೀಕಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications