ನೂತನ ನಾಡಧ್ವಜಕ್ಕೆ ವಾಟಾಳ್ ನಾಗರಾಜ್ ವಿರೋಧ
ಬೆಂಗಳೂರು, ಮಾರ್ಚ್ 09: ಕಳೆದ 50 ವರ್ಷಗಳಿಂದ ಕನ್ನಡಿಗರ ಮನೆ ಮಾತಾಗಿದ್ದ ಅವರ ಭಾವನೆಗಳ ಬೆಳಕಾಗಿದ್ದ ಹಾಲಿ ಧ್ವಜವೇ ನಾಡಧ್ವಜವಾಗಿ ಮುಂದುವರೆಯಲಿ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು.
ಹೊಸ ನಾಡಧ್ವಜ ರೂಪಿಸಿ ಅನಾವರಣಗೊಳಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಹೇಳಿದ ಅವರು, ನಮಗೆ ಸರ್ಕಾರಿ ಧ್ವಜ ಅಗತ್ಯವಿಲ್ಲ. ಕಳೆದ 50 ವರ್ಷಗಳಿಂದಲೂ ಕನ್ನಡಿಗರು ಬಳಸುತ್ತಾ ಬಂದ, ಎತ್ತಿ ಹಿಡಿದ ಹಳದಿ-ಕೆಂಪು ಬಣ್ಣದ ಧ್ವಜವೇ ನಮ್ಮ ನಾಡಧ್ವಜ ಎಂದು ಹೇಳಿದರು.
ಸಾಹಿತಿಗಳು, ಬರಹಗಾರರು, ಬುದ್ಧಿಜೀವಿಗಳು, ಅಧಿಕಾರಿಗಳು ಸೇರಿ ಹೊಸ ನಾಡಧ್ವಜ ರೂಪಿಸಿದ್ದಾರೆ, ಅಧಿಕಾರಿಗಳು ಸೇರಿ ಹೊಸ ನಾಡಧ್ವಜ ರೂಪಿಸಿದ್ದಾರೆ. ಆದರೆ, ಇದೇ ಸಾಹಿತಿಗಳು ಹಳದಿ, ಕೆಂಪು ಬಣ್ಣದ ಧ್ವಜವನ್ನೇ ಕಳೆದ ಐದು ದಶಕಗಳಿಂದಲೂ ನಾಡಧ್ವಜವೆಂದು ಹಾರಿಸುತ್ತಾ ಬಂದಿದ್ದರು. ಪ್ರತಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ನಾಡಧ್ವಜಾರೋಹಣ ನಡೆಯುತ್ತಿತ್ತು.

ಕೆಂಪು ಹಳದಿ ಧ್ವಜವನ್ನೇ ಹಿಡಿದು ಸಾಕಷ್ಟು ಹೋರಾಟ ಮಾಡಿದ್ದೇವೆ. ನಾಡು ಕಟ್ಟುವಲ್ಲಿ ಶ್ರಮಿಸಿದ್ದೇವೆ. ಅದನ್ನೇ ನಾವು ಮುಂದುವರೆಸುತ್ತೇವೆ ಎಂದು ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications