ಪಾರ್ವತಮ್ಮ-ಚಿತ್ರರಂಗದ ತಾಯಿ, ಇನ್ನೂ ಬದುಕಬೇಕಿತ್ತು: ಲೀಲಾವತಿ
ಪಾರ್ವತಮ್ಮ ರಾಜ್ ಕುಮಾರ್ ಅವರು ನಮ್ಮ ಚಿತ್ರರಂಗದ ತಾಯಿಯಾಗಿದ್ದರು. ನಮ್ಮೆಲ್ಲರ ಶಕ್ತಿಯಾಗಿದ್ದರು. ಅವರು ಇನ್ನಷ್ಟು ಕಾಲ ಬದುಕಬೇಕಿತ್ತು.ಅವರಿಗೆ ಸಿಂಗಪುರದಲ್ಲಿ ಚಿಕಿತ್ಸೆ ಕೊಡಿಸಬೇಕಿತ್ತು: ಲೀಲಾವತಿ
ಬೆಂಗಳೂರು, ಮೇ 31: ಪಾರ್ವತಮ್ಮ ರಾಜ್ ಕುಮಾರ್ ಅವರು ನಮ್ಮ ಚಿತ್ರರಂಗದ ತಾಯಿಯಾಗಿದ್ದರು. ನಮ್ಮೆಲ್ಲರ ಶಕ್ತಿಯಾಗಿದ್ದರು. ಅವರು ಇನ್ನಷ್ಟು ಕಾಲ ಬದುಕಬೇಕಿತ್ತು. ಅವರಿಗೆ ಸಿಂಗಪುರದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿತ್ತು ಎಂದು ಹಿರಿಯ ನಟಿ ಲೀಲಾವತಿ ಅವರು ತಮ್ಮ ನೋವು ತೋಡಿಕೊಂಡಿದ್ದಾರೆ.
ಪಾರ್ವತಮ್ಮ ಅವರಿಗೆ ಸೂಕ್ತ ಚಿಕಿತ್ಸೆ ಅಗತ್ಯವಿತ್ತು. ಸರ್ಕಾರದ ಭಂಡಾರದಲ್ಲಿ ಹಣದ ಕೊರತೆ ಇತ್ತಾ? ಪಾರ್ವತಮ್ಮ ಅವರನ್ನು ಸಿಂಗಾಪುರಕ್ಕೆ ಕಳುಹಿಸಬಹುದಿತ್ತಲ್ಲಾ? ಮಕ್ಕಳು ಯಾಕೆ ಅವರನ್ನು ವಿದೇಶಕ್ಕೆ ಕೊಂಡೊಯ್ಯಲಿಲ್ಲ? ಅವರು ಚಿತ್ರರಂಗದಲ್ಲಿ ಇನ್ನೂ ಉಳಿಯಬೇಕಿತ್ತು ಎಂದು ಲೀಲಾವತಿ ಅವರು ಪ್ರಶ್ನಿಸಿದ್ದಾರೆ.

ಸದಾಶಿವನಗರದಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರ ಮನೆಯಲ್ಲಿ ಪಾರ್ವತಮ್ಮ ಅವರ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ನಂತರ ಲೀಲಾವತಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪಾರ್ವತಮ್ಮ ಅವರು ಒಂದು ದೊಡ್ಡ ಹಿಮಾಲಯ ಪರ್ವತ. ಎಲ್ಲರನ್ನೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಿದ್ದರು. ಎದುರಿಗೆ ಯಾರೇ ಸಿಕ್ಕರೂ ಅವರ ಕುಟುಂಬದವರ ಆರೋಗ್ಯ ವಿಚಾರಿಸುತ್ತಿದ್ದರು. ಅವರ ಅಗತ್ಯ ಚಿತ್ರರಂಗಕ್ಕೆ ತುಂಬಾ ಇತ್ತು ಎಂದರು
ಅವರು ಚಿತ್ರರಂಗದ ಶ್ರೇಷ್ಠ ಹೆಣ್ಣುಮಗಳಾಗಿದ್ದರು. ನಾನು ಏನೇ ಮಾತನಾಡಿದರೂ ಹೊರ ಜಗತ್ತಿಗೆ ಸುಳ್ಳು ಅನಿಸುತ್ತದೆ. ಆದರೆ, ಸತ್ಯ ಏನು ಎಂಬುದು ನನ್ನ ಅಂತರಾತ್ಮಕ್ಕೆ ಗೊತ್ತು ಎಂದು ಲೀಲಾವತಿ ಅವರು ಕಣ್ಣೀರಿಟ್ಟರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ











Click it and Unblock the Notifications