ವಿಬ್ಗಯಾರ್ ಶಾಲೆ ಆರಂಭ: ಆತಂಕದಲ್ಲಿ ಪೋಷಕರು
ಬೆಂಗಳೂರು, ಜು.28: ವಿಬ್ಗಯಾರ್ ಶಾಲೆ ಸೋಮವಾರದಿಂದ ಮತ್ತೆ ಆರಂಭಗೊಂಡಿದ್ದರೂ ಪೋಷಕರ ಆತಂಕ ಇನ್ನೂ ಕಡಿಮೆಯಾಗಿಲ್ಲ.
ವಿಬ್ಗಯಾರ್ ಶಾಲೆಯ 5ರಿಂದ 10ನೇ ತರಗತಿಗಳು ಸೋಮವಾರ ಆರಂಭಗೊಂಡಿದೆ. ನರ್ಸರಿಯಿಂದ 5ನೇ ತರಗತಿವರೆಗಿನ ತರಗತಿಗಳು ಬುಧವಾರದಿಂದ ಆರಂಭಗೊಳ್ಳಲಿದೆ.
ಒಂದನೇ ತರಗತಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದಿಂದಾಗಿ ಎಚ್ಚೆತ್ತ ವಿಬ್ಗಯಾರ್ ಶಾಲೆಯ ಆಡಳಿತ ಮಂಡಳಿ ಪೋಷಕರ 11 ಬೇಡಿಕೆಗಳಿಗೆ ಒಪ್ಪಿಗೆ ನೀಡಿದೆ. ಶಾಲೆಯಲ್ಲಿ ಹೊಸದಾಗಿ 117 ಸಿಸಿ ಕ್ಯಾಮೆರಾವನ್ನು ಅಳವಡಿಸಿಕೊಂಡಿದೆ.
ಶಾಲೆ ಆರಂಭಗೊಂಡಿದ್ದರೂ ಕೆಲ ಪೋಷಕರು ಮತ್ತೆ ಮಕ್ಕಳನ್ನು ಅದೇ ಶಾಲೆಗೆ ಕಳಹಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಒಬ್ಬರು ಪೋಷಕರು ಮಗಳನ್ನು ಬೇರೆ ಶಾಲೆಗೆ ಸೇರಿಸುವುದಾಗಿ ಹೇಳಿದ್ದಾರೆ.

"ನನ್ನ ಮಗಳನ್ನು ಮತ್ತೆ ಅದೇ ಶಾಲೆಗೆ ಕಳುಹಿಸಲು ಮನಸ್ಸು ಒಪ್ಪುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ" ಎಂದು ಪೋಷಕರು ಹೇಳುತ್ತಾರೆ.[ವಿಬ್ಗಯಾರ್ ಶಾಲೆ ಆರಂಭ, ಕುಣಿಯುತ ಬಂದ ಮಕ್ಕಳು]
"ರೇಪ್ ಪ್ರಕರಣದಲ್ಲಿ ಶಾಮೀಲಾಗಿರುವ ಜನರು ಇನ್ನು ಶಾಲೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕೃತ್ಯದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎನ್ನುವ ವಿಚಾರ ಇನ್ನೂ ಹೊರ ಬಂದಿಲ್ಲ. ಒಬ್ಬನ ಹೆಸರು ಮಾತ್ರ ಬಹಿರಂಗವಾಗಿದೆ. ಉಳಿದವರೆಲ್ಲಾ ಒಳಗಡೆ ಇರುವಾಗ ಶಾಲೆಗೆ ಮಗಳನ್ನು ಕಳುಹಿಸುವುದು ಹೇಗೆ" ಎಂದು ಅವರು ಪ್ರಶ್ನಿಸಿದ್ದಾರೆ.
ಈ ಘಟನೆಯಿಂದಾಗಿ ಪೋಷಕರು ಶಾಲೆಯ ಬಗ್ಗೆ ಚರ್ಚೆ ನಡೆಸಲು ಪ್ರತ್ಯೇಕ ಪ್ರೈವೆಟ್ ಫೇಸ್ಬುಕ್ ಪುಟವನ್ನು ತೆರೆದಿದ್ದಾರೆ. ಈ ಪುಟದಲ್ಲಿ ಬಹಳಷ್ಟು ಪೋಷಕರು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುವುದಾಗಿ ತಿಳಿಸಿದ್ದಾರೆ.
ಹಲವರು ಪೋಷಕರು ಈಗಾಗಲೇ ವಿವಿಧ ಶಾಲೆಗಳಲ್ಲಿ ಪ್ರವೇಶದ ಬಗ್ಗೆ ವಿಚಾರಣೆ ನಡೆಸಲು ಆರಂಭಿಸಿದ್ದಾರೆ. ಫೇಸ್ಬುಕ್ನಲ್ಲಿ ಪೋಷಕರ ಅಭಿಪ್ರಾಯದಂತೆ, ಈ ವರ್ಷ ವಿಬ್ಗಯಾರ್ ಶಾಲೆಯನ್ನು ತೊರೆದು ಬೇರೆ ಶಾಲೆಗೆ ಮಕ್ಕಳನ್ನು ಸೇರಿಸುವುದು ಕಷ್ಟದ ಕೆಲಸವಾದರೂ, ಮುಂದಿನ ವರ್ಷ ಬಹಳಷ್ಟು ವಿದ್ಯಾರ್ಥಿಗಳು ಬಿಬ್ಗಯಾರ್ನ್ನು ತೊರೆಯುವ ಸಾಧ್ಯತೆಯಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications