ರೈತರು ಆತ್ಮಹತ್ಯೆ ಕಣ್ಮುಂದಿರುವಾಗ, ಹೇಗೆ ಕೇಕ್ ಕಟ್ ಮಾಡ್ಲಿ : ದೇವೇಗೌಡ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಹುಟ್ಟುಹಬ್ಬವನ್ನು ಈ ಬಾರಿ ವಿಶಿಷ್ಟವಾಗಿ ಆಚರಿಸಲಾಯಿತು. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಸ್ತುತತೆ ಬಗ್ಗೆ ದೇವೇಗೌಡರ ಜತೆ ಚಿಂತನಗೋಷ್ಠಿ ಆಯೋಜಿಸಲಾಗಿತ್ತು.
ಬೆಂಗಳೂರು, ಮೇ 19: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಹುಟ್ಟುಹಬ್ಬವನ್ನು ಈ ಬಾರಿ ವಿಶಿಷ್ಟವಾಗಿ ಆಚರಿಸಲಾಯಿತು. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಸ್ತುತತೆ ಬಗ್ಗೆ ದೇವೇಗೌಡರ ಜತೆ ಚಿಂತನಗೋಷ್ಠಿ ಆಯೋಜಿಸಲಾಗಿತ್ತು. ಈ ಮೂಲಕ ಒಂದು ಅಪರೂಪದ ಹಾಗೂ ಉಪಯುಕ್ತ ಚರ್ಚೆಯ ಸರಣಿಗೆ ಇದು ಮುನ್ನುಡಿ ಬರೆದಿದೆ.
ಈ ಸಮಾರಂಭದಲ್ಲಿ ಮಾತನಾಡಿದ ದೇವೇಗೌಡರು, ರಾಜ್ಯದಲ್ಲಿ ರೈತರು ಬರದಿಂದ ಕಂಗೆಟ್ಟು ಸಾಯುವಾಗ ಕೇಕ್ ಕಟ್ ಮಾಡಿ ಸಂಭಮಿಸಲು ಸಾಧ್ಯವೇ? ಐಟಿ ಹುಡುಗರು ಒಂದು ಅರ್ಥಪೂರ್ಣ ಚರ್ಚೆ ಎಂದಿದ್ದಕೆ ಈ ಕಾರ್ಯಕ್ರಮ ಒಪ್ಪಿಕೊಂಡೆ ಎಂದರು.
ಸಮಾಜವಾದದ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದ ದೇವೇಗೌಡರು, ಮಣ್ಣಿನ ಮಗ ಎನಿಸಿಕೊಂಡವರು. ಅಪಾರ ರಾಜಕೀಯ ಅನುಭವ, ನಿಪುಣತೆ ಮೂಲಕ 24/7 ರಾಜಕಾರಣಿಯಾಗಿರುವ ದೇವೇಗೌಡರ 84ನೇ ಹುಟ್ಟುಹಬ್ಬದ ಸಂಭ್ರಮವನ್ನುಮೇ 18ರಂದು ಸಂಭ್ರಮದಿಂದ ಆಚರಿಸಲಾಯಿತು.

ಮುನ್ನೋಟ, ಐಟಿ ಕನ್ನಡಿಗರ ಕೂಟದ ಸಹಯೋಗದಲ್ಲಿ ಆಯೋಜನೆಗೊಂಡಿದ್ದ ಈ ಚರ್ಚಾಕೂಟದಲ್ಲಿ ಮಾಜಿ ಪ್ರಧಾನಿ ದೇವೇಗೌಡರೊಂದಿಗೆ, ಹಿರಿಯ ಪತ್ರಕರ್ತರಾದ ಎನ್.ಎ.ಎಮ್ ಇಸ್ಮಾಯಿಲ್, ಜೆಡಿಎಸ್ ನಾಯಕರಾದ ವೈ.ಎಸ್.ವಿ.ದತ್ತ ಅವರೂ ಹಾಗೂ ಕಾಂಗ್ರೆಸ್ ನಾಯಕರಾದ ಬಿ.ಎಲ್.ಶಂಕರ್ ಮುಂತಾದವರು ಪಾಲ್ಗೊಂಡಿದ್ದರು.
ಕರ್ನಾಟಕ ಕೇಂದ್ರಿತ ರಾಜಕೀಯ ಚಿಂತನೆಯ ಅಗತ್ಯದ ಬಗ್ಗೆ ಕನ್ನಡ ಸಮಾಜದಲ್ಲಿ ಇಂದು ಎಂದಿಗಿಂತಲೂ ಹೆಚ್ಚಿನ ಚರ್ಚೆ, ಜಾಗೃತಿ ಏರ್ಪಡುತ್ತಿದೆ. ಈ ಬಗ್ಗೆ ಕನ್ನಡ ಸಮಾಜದಲ್ಲಿ, ಅದರಲ್ಲೂ ರಾಜಕೀಯ ವಲಯದಲ್ಲಿ ಇನ್ನಷ್ಟು ವ್ಯಾಪಕವಾದ ಚರ್ಚೆ, ವಿಚಾರ ವಿನಿಮಯ ರೂಪಿಸುವ ತುರ್ತು ಅಗತ್ಯ ನಮ್ಮ ಮುಂದಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications