ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಲ ಪಡೆದವ ಅಪಘಾತದಲ್ಲಿ ಸಾವು: ಸಾಲ ಕೊಟ್ಟವರು ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ನವೆಂಬರ್ 13: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ಜನಾರ್ದನ್(52) ಸುಷ್ಮಿತಾ, ಸುದರ್ಶಿನಿ(29) ಹಾಗೂ ಸೋನಿಕ(6) ಮೃತರು, ತಂದೆ, ತಾಯಿ, ಮಗಳು ಹಾಗೂ ಮೊಮ್ಮಗಳು ಮೃತಪಟ್ಟಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೆ ಮಗುವಿನ ಮುಖಕ್ಕೆ ಪ್ಲಾಸ್ಟಿಕ್ ಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಶಂಕರ್ ಐಎಎಸ್ ಅಕಾಡೆಮಿ ಸ್ಥಾಪಕ ಆತ್ಮಹತ್ಯೆಗೆ ಶರಣು ಶಂಕರ್ ಐಎಎಸ್ ಅಕಾಡೆಮಿ ಸ್ಥಾಪಕ ಆತ್ಮಹತ್ಯೆಗೆ ಶರಣು

ಸಾಲ ಪಡೆದ ವ್ಯಕ್ತಿ ಮೃತ ಪಟ್ಟ ಎಂಬ ಕಾರಣಕ್ಕೆ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

Women, her daughter and parents found dead inside house in Bengaluru

ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಜನಾರ್ದನ್ ಮನೆ ತೆಗೆದುಕೊಳ್ಳುವ ಸಲುವಾಗಿ 25 ಲಕ್ಷ ರೂ. ಹಣವನ್ನು ನೀಡಿದ್ದರು. ಆದರೆ ಹಣ ಪಡೆದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಹಣ ಪಡೆದ ವ್ಯಕ್ತಿ ಸಾವನ್ನಪ್ಪಿದ್ದರಿಂದ ನಮ್ಮ ಹಣ ವಾಪಸ್ ಬರುವುದಿಲ್ಲ ಎಂದು ಬೇಸರ ಜನಾರ್ದನ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದ ಕೆಲ ಸದಸ್ಯರು ಹೇಳುತ್ತಿದ್ದಾರೆ.

ಬ್ಲೂವ್ಹೇಲ್ ಆತ್ಮಹತ್ಯೆ ಕೂಪಕ್ಕೆ ಕಲಬುರಗಿಯ ಬಾಲಕ ಬಲಿ ಬ್ಲೂವ್ಹೇಲ್ ಆತ್ಮಹತ್ಯೆ ಕೂಪಕ್ಕೆ ಕಲಬುರಗಿಯ ಬಾಲಕ ಬಲಿ

ಜನಾರ್ದನ್ ತನ್ನ ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿದ್ದು, ಅದರಲ್ಲಿ ಮನೆ ಖರೀದಿ ಬಗ್ಗೆ ಉಲ್ಲೇಖಿಸಿದ್ದಾರೆ. ಸದ್ಯ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.

English summary
A 29 year old woman, her six year old daughter and her elder parents were found dead inside her house in Doddabommasandra in North Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X