ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಎಸ್ ವೈ ಡಾಲರ್ಸ್ ಕಾಲೊನಿ ನಿವಾಸದಲ್ಲಿ ಪೌರ ಕಾರ್ಮಿಕರ ಜತೆ ಭೋಜನ

|
Google Oneindia Kannada News

ಬೆಂಗಳೂರು, ಏಪ್ರಿಲ್ 14: ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಕಣ್ಣೀರು ಶಾಶ್ವತವಾಗಿ ಒರೆಸಲು ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ 14 ಸಾವಿರ ಪೌರ ಕಾರ್ಮಿಕರ ಕೆಲಸವನ್ನು ಕಾಯಂಗೊಳಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಅಂಬೇಡ್ಕರ್ ಜಯಂತಿ ಅಂಗವಾಗಿ ದಲಿತರ ಮನೆಯಲ್ಲಿ ಬಿಎಸ್ ವೈ ಉಪಹಾರ ಅಂಬೇಡ್ಕರ್ ಜಯಂತಿ ಅಂಗವಾಗಿ ದಲಿತರ ಮನೆಯಲ್ಲಿ ಬಿಎಸ್ ವೈ ಉಪಹಾರ

ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ತಮ್ಮ ಡಾಲರ್ಸ್ ಕಾಲೊನಿ ನಿವಾಸಕ್ಕೆ 25 ಮಂದಿ ಪೌರ ಕಾರ್ಮಿಕರನ್ನು ಆಹ್ವಾನಿಸಿ ಅವರೊಂದಿಗೆ ಭೋಜನ ಸವಿದ ಅವರು ಪೌರ ಕಾರ್ಮಿಕರ ಕಷ್ಟ ಸುಖಗಳನ್ನು ವಿಚಾರಿಸಿದರು. ಈ ವೇಳೆ ಖುದ್ದಾಗಿ ತಾವೇ ಪೌರ ಕಾರ್ಮಿಕರಿಗೆ ಊಟ ಬಡಿಸಿದ ಯಡಿಯೂರಪ್ಪ ಅವರೊಂದಿಗೆ ಕೆಲ ಕಾಲ ಮಾತನಾಡಿದರು. ಒಬ್ಬಟ್ಟು, ಚಪಾತಿ, ಪಲ್ಯ, ಪುಲಾವ್, ಸಿಹಿಖಾದ್ಯಗಳನ್ನು ಸವಿದ ಪೌರ ಕಾರ್ಮಿಕರು ತಮಗೆ ಕಳೆದ ಮೂರು ತಿಂಗಳಿಂದ ಸಂಬಳ ಸಿಕ್ಕಿಲ್ಲ ಎಂದು ನೋವು ತೋಡಿಕೊಂಡರು.

ಎರಡನೇ ಪಟ್ಟಿ ಸಿದ್ಧತೆಗೆ ಯಡಿಯೂರಪ್ಪ ಇಂದು ದೆಹಲಿಗೆಎರಡನೇ ಪಟ್ಟಿ ಸಿದ್ಧತೆಗೆ ಯಡಿಯೂರಪ್ಪ ಇಂದು ದೆಹಲಿಗೆ

Yeddyurappa invites Pourakarmikas for lunch at Dollars colony

ಯಡಿಯೂರಪ್ಪ ಅವರು ಮತ್ತೆ ಅಧಿಕಾರಕ್ಕೆ ಬರಬೇಕು. ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ ನಮ್ಮ ಕಷ್ಟ-ಕಾರ್ಪಣ್ಯಗಳು ದೂರ ಆಗುತ್ತವೆ ಎಂಬ ವಿಶ್ವಾಸವಿದೆ' ಎಂದು ಪೌರ ಕಾರ್ಮಿಕ ಮಹಿಳೆ ಲಕ್ಷ್ಮಿ ಹರ್ಷ ವ್ಯಕ್ತಪಡಿಸಿದರು.

English summary
On the day Of Dr. BR Ambedkar's Birth Anniversary stated BJP president BS Yeddyurappa has invited more than 25 pourakarmikas for lunch at his dollars colony residents.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X