Bantwal Elections: ಪ್ರಖರ ಹಿಂದುತ್ವದ ಕ್ಷೇತ್ರದಲ್ಲಿ ಬಿಜೆಪಿಯೋ, ಕೈ ಮೇಲೋ?
ನೇತ್ರಾವತಿ ನದಿ ತೀರದಲ್ಲಿರುವ, ಐತಿಹಾಸಿಕ ಪೊಳಲಿ ರಾಜರಾಜೇಶ್ವರಿ ದೇವಾಲಯವನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು/ವಿಧಾನಸಭಾ ಕ್ಷೇತ್ರ ಬಂಟ್ವಾಳ. ಜಿಲ್ಲಾ ಕೇಂದ್ರ ಮಂಗಳೂರಿನಿಂದ 23 ಕಿ.ಮೀಟರ್ ದೂರದಲ್ಲಿರುವ ಬಂಟ್ವಾಳ ಪ್ರಕೃತಿ ಸೌಂದರ್ಯದಿಂದ ಕೂಡಿದೆ. ಚಕ್ರವರ್ತಿ ಅಶೋಕನ ಶಾಸನ, ಅಬ್ದುಲ್ ರಜಾಕ್ ಎಂಬ ವಿದೇಶಿ ಯಾತ್ರಿಕ 1448ರಲ್ಲಿ ಪೊಳಲಿ ದೇವಾಲಯಕ್ಕೆ ಭೇಟಿ ಕೊಟ್ಟಿದ್ದನೆಂದು ಇತಿಹಾಸದ ಪುಟದಲ್ಲಿ ದಾಖಲಾಗಿದೆ.
1975ರಲ್ಲಿ ಪುರಸಭೆಯಾಗಿ ರೂಪುಗೊಂಡ ನಂತರ ಬಂಟ್ವಾಳ ಅಭಿವೃದ್ಧಿ ಹೊಂದುತ್ತಿರುವ ಪಟ್ಟಣವಾಗಿದೆ, ಜೊತೆಗೆ, ಕ್ಷೇತ್ರದ ಕೆಲವು ಪ್ರದೇಶಗಳು ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ (ಬಿ.ಸಿ.ರೋಡ್, ಪಾಣೆಮಂಗಳೂರು, ಕೈಕಂಬ, ಮೇಲ್ಕಾರ್) ಹೊಂದಿಕೊಂಡಿದೆ.
ಶ್ರೀ ಕಾರಿಂಜೇಶ್ವರ ದೇವಸ್ಥಾನ, ನರಹರಿ ಪರ್ವತ ಮುಂತಾದವು ಪಟ್ಟಣದ ಪ್ರಮುಖ ಪ್ರವಾಸೀ ಸ್ಥಳಗಳಾಗಿವೆ. ದಕ್ಷಿಣಕ್ಕೆ ಕೇರಳ, ಬೆಳ್ತಂಗಡಿ ಪುತ್ತೂರು ನಗರ ಪೂರ್ವಕ್ಕೆ, ಮಂಗಳೂರು ಪಶ್ಚಿಮಕ್ಕೆ, ಉತ್ತರಕ್ಕೆ ಕಾರ್ಕಳ ಪ್ರದೇಶಗಳಿವೆ.

ದಿನಸಿ, ತಂಬಾಕು, ಅಡಿಕೆ, ಭತ್ತ ಇಲ್ಲಿನ ಪ್ರಮುಖ ಬೆಳೆ, ಜೊತೆಗೆ, ಚಿನ್ನದ ಪ್ರಮುಖ ವ್ಯಾಪಾರ ಕೇಂದ್ರವೆಂದೂ ಬಂಟ್ವಾಳ ಗುರುತಿಸಿಕೊಂಡಿದೆ. ಕೋಮು ಸೂಕ್ಷ್ಮ ಪ್ರದೇಶವೆಂದೂ ಗುರುತಿಸಲ್ಪಟ್ಟಿರುವ ಇಲ್ಲಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಳೆದ ಕೆಲವು ವರ್ಷಗಳಿಂದ ಜಿದ್ದಿನ ರಾಜಕೀಯ. ರಮಾನಾಥ ರೈ ಕ್ಷೇತ್ರದ ಮಂಚೂಣಿ ನಾಯಕರಾಗಿದ್ದರೂ ಕಳೆದ ಚುನಾವಣೆಯಲ್ಲಿ ಅವರು ಸೋಲುಂಡಿದ್ದರು.
ಬಂಟ್ವಾಳ ಮೊದಲಿನಿಂದಲು ಬಂಟ (ಶೆಟ್ಟಿ) ಸಮುದಾಯದ ಬಿಗಿ ಹಿಡಿತದಲ್ಲೇ ಇದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಂದ ಬಂಟ ಸಮುದಾಯ ಅಭ್ಯರ್ಥಿಗಳೇ ನಿರಂತರವಾಗಿ ಸ್ಪರ್ಧಿಸುತ್ತಾ ಬಂದಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಬಹುದಾಗಿದೆ.
ರಮಾನಾಥ ರೈ ನೇತೃತ್ವದಲ್ಲಿ ಇತ್ತೀಚೆಗೆ ನಡೆದ 'ಬಂಟ್ವಾಳ ಪ್ರಜಾಧ್ವನಿ ಯಾತ್ರೆ'ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸ್ಥಳೀಯ ಕಾಂಗ್ರೆಸ್ ಮುಖಂಡರು ಇದು ಮುಂದಿನ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಗೊಳ್ಳಬಹುದು ಎನ್ನುವ ಲೆಕ್ಕಾಚಾರದಲ್ಲಿದೆ.

1972 - 2018ರ ವರೆಗಿನ ಚುನಾವಣೆಯಲ್ಲಿ ಕಾಂಗ್ರೆಸ್ ಏಳು ಬಾರಿ ಇಲ್ಲಿಂದ ಗೆದ್ದಿದೆ. 1983ರಿಂದ ಈಚೆಗೆ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ. ಮಾಜಿ ಸಚಿವ ರಮಾನಾಥ ರೈ ಇಲ್ಲಿಂದ ಆರು ಬಾರಿ ಗೆದ್ದಿದ್ದಾರೆ. 2013ರ ಚುನಾವಣೆಯಲ್ಲಿ ರೈ ಅವರು ಬಿಜೆಪಿಯ ರಾಜೇಶ್ ನಾಯಕ್ ಅವರನ್ನು 17,850 ಮತಗಳ ಅಂತರದಿಂದ ಸೋಲಿಸಿದ್ದರು.
ರಾಜೇಶ್ ನಾಯಕ್ ಗೆಲುವು
ಕಳೆದ ಚುನಾವಣೆಯಲ್ಲಿ ರಾಜೇಶ್ ನಾಯಕ್ ಸೇಡು ತೀರಿಸಿಕೊಂಡು ರೈ ಅವರನ್ನು 15,971 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು. ಈಗ ಕಾಂಗ್ರೆಸ್ಸಿನಲ್ಲಿರುವ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರು ಈ ಹಿಂದೆ ಎರಡು ಬಾರಿ ಬಿಜೆಪಿ ಟಿಕೆಟಿನಿಂದ ಸ್ಪರ್ಧಿಸಿ, ರೈ ವಿರುದ್ದ ಸೋಲುಂಡಿದ್ದರು. ಕಳೆದ ಚುನಾವಣೆಯಲ್ಲಿ ಶಕುಂತಲ ಶೆಟ್ಟಿ ಕೂಡಾ ಪುತ್ತೂರಿನಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
ಬಂಟ್ವಾಳದಿಂದ ರಮಾನಾಥ ರೈಗೆ ಟಿಕೆಟ್
ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ, ಬಂಟ್ವಾಳದಿಂದ ರಮಾನಾಥ ರೈಗೆ ಟಿಕೆಟ್ ಸಿಕ್ಕಿದೆ. ಬಿಲ್ಲವ ಮುಖಂಡರಾದ ಪದ್ಮರಾಜ್ ಬಂಟ್ವಾಳ್ ಅವರೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಜಿದ್ದಾಜಿದ್ದಿನ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಬಂಟ್ವಾಳದಲ್ಲಿ ಬಿಜೆಪಿ ಈ ಬಾರಿಯೂ ಹಿಂದೂ ಮತಗಳನ್ನೇ ನೆಚ್ಚಿಕೊಂಡಿದೆ. ಪಕ್ಷದ ಏಕೈಕ ಟಿಕೆಟ್ ಆಕಾಂಕ್ಷಿ ರಾಜೇಶ್ ನಾಯಕ್ ಉಳಿಪಾಡಿಗುತ್ತು.
ಕ್ಷೇತ್ರದಲ್ಲಿ ಎಸ್ ಡಿಪಿಐ ಪಾತ್ರವೇನು ಎನ್ನುವುದು ಕಾಂಗ್ರೆಸ್ ಪಾಲಿಗೆ ಬಹು ಮುಖ್ಯವಾದ ಅಂಶವಾಗುತ್ತೆ. ಕಾರಣ, ಅಲ್ಪಸಂಖ್ಯಾತ ಸಮುದಾಯದ ಮತವನ್ನು ರಮಾನಾಥ ರೈ ಅತಿಹೆಚ್ಚು ನಂಬಿಕೊಂಡಿದ್ದಾರೆ. ಎಸ್ ಡಿಪಿಐ ಎಷ್ಟರ ಮಟ್ಟಿಗೆ ಮತ ವಿಭಜನೆ ಮಾಡುತ್ತದೆ ಎನ್ನುವುದು ಕಾದು ನೋಡಬೇಕಿದೆ. ಒಟ್ಟಿನಲ್ಲಿ ತರಾತುರಿಯ ಸ್ಪರ್ಧೆ ಇಲ್ಲಿಂದ ಇರುವ ಸಾಧ್ಯತೆ ದಟ್ಟವಾಗಿದೆ.
ಕಳೆದ ಚುನಾವಣೆಯಲ್ಲಿ (2018) ಅಭ್ಯರ್ಥಿಗಳಿಗೆ ಬಿದ್ದ ಮತ:
| ಒಟ್ಟು ಚಲಾವಣೆಯಾದ ಮತಗಳು | 1,82,737 |
| ರಾಜೇಶ್ ನಾಯಕ್ (ಬಿಜೆಪಿ) | 97,802 |
| ರಮಾನಾಥ ರೈ (ಕಾಂಗ್ರೆಸ್) | 81,831 |
| ಗೆಲುವಿನ ಅಂತರ | 15,971 |
2018ರ ಅಂಕಿಅಂಶದ ಪ್ರಕಾರ ಮತದಾರರ ವಿವರ:
| ಪುರುಷರು | 1,09,567 |
| ಮಹಿಳೆಯರು | 1,12,192 |
| ಇತರರು | 06 |
| ಒಟ್ಟು ಮತದಾರರು | 2,21,765 |
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications