15 ದಿನದ ಬಳಿಕ ಭೂತ ಬಂಗಲೆಯಾಗುವ ಸುವರ್ಣಸೌಧ ಬಾಡಿಗೆ ಕೊಡಿ, ಮಗಳ ಬರ್ತ್ಡೇ ಮಾಡ್ತಿನಿ ಎಂದ ತಂದೆ!
ಬೆಳಗಾವಿ, ಡಿ. 22: ಅಧಿವೇಶನ ನಡೆಯಲಿರುವ ದಿನಗಳಲ್ಲಿ ಮಾತ್ರ ಕಂಗೊಳಿಸಲಿರುವ, 15 ದಿನದ ಬಳಿಕ ಭೂತ ಬಂಗಲೆಯಾಗುವ ಸುವರ್ಣಸೌಧ ಬಾಡಿಗೆ ಕೊಡಿ, ಮಗಳ ಹುಟ್ಟುಹಬ್ಬ ಸಮಾರಂಭ ಮಾಡುತ್ತೇನೆ ಎಂದು ವಕೀಲರೊಬ್ಬರು ವಿಧಾನ ಪರಿಷತ್ತ ಸಭಾಪತಿಗಳಿಗೆ ಪತ್ರ ಬರೆದಿರುವ ಘಟನೆ ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿಯಾಗಿರುವ ಮಲ್ಲಿಕಾರ್ಜುನ ದುಂಡಪ್ಪ ಚೌಕಾಶಿ ಎಂಬುವವರು ಪತ್ರ ಬರೆದಿದ್ದು, ಮಗಳ ಹುಟ್ಟುಹಬ್ಬದ ಆಚರಣೆಗೆ ಸುವರ್ಣಸೌಧವನ್ನು ಬಾಡಿಗೆ ಕೇಳಿದ್ದಾರೆ. ವರ್ಷದಲ್ಲಿ 15 ದಿನ ಮಾತ್ರ ಸುವರ್ಣ ಸೌಧ ಕಂಗೊಳಿಸುತ್ತದೆ. ಉಳಿದ ದಿನಗಳಲ್ಲಿ ಭೂತ ಬಂಗಲೆ ರೀತಿ ಇರುವ ಅದನ್ನು ಬಾಡಿಗೆ ನೀಡಿ ಎಂದು ಹೇಳಿದ್ದಾರೆ.
ವಕೀಲರಾಗಿರುವ ಮಲ್ಲಿಕಾರ್ಜುನ ದುಂಡಪ್ಪ ಚೌಕಾಶಿ ತನ್ನ ಮಗಳ 6ನೇ ವರ್ಷದ ಹುಟ್ಟುಹಬ್ಬ ಮಾಡಬೇಕು. ಚಿಕ್ಕ ಮಕ್ಕಳಿಗೆ ಮಾಡುವ 'ಹುಟ್ಟದಟ್ಟಿ' ಕಾರ್ಯಕ್ರಮ ಜೀವನದ ಅಮೂಲ್ಯ ಕ್ಷಣ ಇದಕ್ಕಾಗಿ ಸುವರ್ಣಸೌಧ ಬಾಡಿಗೆ ಕೊಡಿ ಎಂದಿದ್ದಾರೆ.

*ಮಲ್ಲಿಕಾರ್ಜುನ ದುಂಡಪ್ಪ ಚೌಕಾಶಿ ಪತ್ರದಲ್ಲೇನಿದೆ..?*
"ನನ್ನ ಏಕೈಕ ಪುತ್ರಿಯಾದ ಕುಮಾರಿ ಮಣಿಗೆ ಜನವರಿ 30 ಕ್ಕೆ 5 ವರ್ಷ ಮುಗಿದು 6 ವರ್ಷ ತುಂಬಲಿದ್ದು, ಆಕೆ ಒಂದನೇಯ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟು ಹಬ್ಬವನ್ನು ಆಚರಿಸುವದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣು ಮಕ್ಕಳಿಗೆ ಹುಟದಟ್ಟಿ ಕಾರ್ಯಕ್ರಮ ಮಾಡುವ ಪದ್ಧತಿಯಿದ್ದು ಇದು ಕೂಡ ಜೀವನದಲ್ಲಿ ಒಮ್ಮೆ ಬರುವಂತಹದ್ದು. ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧದ ಸಭಾಂಗಣವನ್ನು ಬಾಡಿಗೆ ನೀಡಬೇಕೆಂದು ವಿನಂತಿ".
"ಈ ರೀತಿ ಕಾರ್ಯಕ್ರಮಗಳಿಗೆ ಬಾಡಿಗೆ ನೀಡುವುದರಿಂದ ಸರ್ಕಾರಕ್ಕೆ ಹೊರೆಯಾಗುತ್ತಿರುವ ಆರ್ಥಿಕ ನಿರ್ವಹಣಾ ವೆಚ್ಚವನ್ನು ಉಳಿಸಬಹುದು. ಸದ್ಯ ಅಧೀವೇಶನ ನಡೆದಿದ್ದು ಸದನದಲ್ಲಿ ಈ ವಿಷಯವನ್ನು ಚರ್ಚಿಸಿ ನಮಗೆ ಬಾಡಿಗೆ ನೀಡಬೇಕೆಂದು ಕಳಕಳಿಯ ವಿನಂತಿ" ಎಂದು ಬರೆದಿದ್ದಾರೆ.

ಈ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೆಯಾಗುತ್ತಿದ್ದು, ಹಲವರು ಹೀಗೂ ಮಾಡಬಹುದು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಇನ್ನು, ಕಳೆದ ವರ್ಷ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ, 'ವಿಧಾನಮಂಡಲದ ಅಧಿವೇಶನ ನಡೆಸದಿದ್ದರೆ, ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕಟ್ಟಿಸಿರುವ ಸುವರ್ಣಸೌಧವನ್ನು ಬಾಡಿಗೆಗಾದರೂ ಕೊಡಲಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications