ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೋದಿಗೆ ಟ್ವೀಟ್ ಮಾಡಿದ ಯುವಕ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ .14: ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಘಟನೆ ನಡೆದಿದೆ.

"ಕಬ್ಬಿನ ಬಾಕಿ ಬಿಲ್ ಕೊಡಿಸಿ, ಇಲ್ಲದಿದ್ದರೆ ನಮ್ಮ ಕುಟುಂಬ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತದೆ" ಎಂದು ಆಕಾಶ ಎಂಬ ಯುವಕ ಟ್ವಿಟ್ಟರ್ ನಲ್ಲಿ ಬೆದರಿಕೆ ಹಾಕಿದ್ದು ಆಕಾಶ 7353 ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ರಮ್ಯಾ, ಆಲೂಗೆಡ್ಡೆ, ಮೋದಿ, ಚಿನ್ನ, ಇತ್ಯಾದಿ ಟ್ವೀಟ್ಸ್ ರಮ್ಯಾ, ಆಲೂಗೆಡ್ಡೆ, ಮೋದಿ, ಚಿನ್ನ, ಇತ್ಯಾದಿ ಟ್ವೀಟ್ಸ್

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಬಾಕಿ ವಸೂಲಿಗೆ ಆಗ್ರಹಿಸಿದ್ದು, ಸಕ್ಕರೆ ಕಾರ್ಖಾನೆಗೆ 28 ಟನ್ ಕಬ್ಬು ಪೂರೈಸಿದ್ರು ಬಿಲ್ ಕೊಟ್ಟಿಲ್ಲ.ಬಾಕಿ ಬಿಲ್ ಬರದ ಕಾರಣ ಕುಟುಂಬ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಆಕಾಶ ಅಳಲು ತೋಡಿಕೊಂಡಿದ್ದಾನೆ.

A young man Chetan tweeted to Prime Minister Modi

"ಇದು ನನ್ನ ಕೊನೆ ಮನವಿ. ಬಾಕಿ ಬಿಲ್ ಕೊಡಿಸದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ" ಎಂದು ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಯುವಕನ ಟ್ವೀಟ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.

A young man Chetan tweeted to Prime Minister Modi

ಕಳೆದ ವರ್ಷ ಇದೇ ಸಮಯದಲ್ಲಿ ರೈತನೊಬ್ಬ ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿ, ತನ್ನ ಸಮಸ್ಯೆ ಬಗೆಹರಿಸಿಕೊಂಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದ ರೈತ ಜೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಬೇಸತ್ತು, ತಮ್ಮ ಸಮಸ್ಯೆಯನ್ನು ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿದ್ದರು.

English summary
A young man Chetan tweeted to Prime Minister Modi. He said in twitter Sir it is my final request to you then i am with my family committing suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X