Belagavi: ನಿಗೂಢ ಗುಂಡಿನ ದಾಳಿಯಿಂದ ಯುವಕ ಸಾವು..ಹೆಚ್ಚಿದ ಆತಂಕ
ಬೆಳಗಾವಿ, ನವೆಂಬರ್ 11: ಐತಿಹಾಸಿಕ ಹಲಸಿ ಮತ್ತು ಬೇಕವಾಡ ರಸ್ತೆಯ ನರಸೇವಾಡಿ ಸೇತುವೆ ಬಳಿ ಇಂದು(ನವೆಂಬರ್ 11) ಸೋಮವಾರ ಬೆಳಗಿನಜಾವ ಆಗುಂತಕರ ಗುಂಡಿನ ದಾಳಿಯಲ್ಲಿ ಯುವಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಳಕಿಗೆ ಬಂದಿದೆ. ಹಲಸಿಯ ಯುವಕ ಅಲ್ತಾಫ ಗೌಸ್ ಮಕಾನದಾರ(27) ಎನ್ನುವ ಯುವಕನ ಮೇಲೆ ಗುಂಡಿನ ದಾಳಿ ನಡೆದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳಗಿನಜಾವ ಸರಿಸುಮಾರು ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಅಲ್ತಾಫ ಗೌಸ್ ಮಕಾನದಾರ ಮೇಲೆ ಗುಂಡಿನ ದಾಳಿ ಮಾಡಿದವರು ಯಾರು..? ಯಾಕೆ ಮಾಡಿದ್ದಾರೆ ಎನ್ನುವ ನಿಖರ ಕಾರಣ ಈವರೆಗೂ ತಿಳಿದುಬಂದಿಲ್ಲ.

ಗುಂಡಿನ ದಾಳಿ ಹಾಗೂ ಯುವಕ ಸಾವು ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕೂಡಲೇ ಜಿಲ್ಲಾ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಹಲಸಿ ಖಾನಾಪುರದ ಬೇಕವಾಡಕ್ಕೆ ಹೋಗುವ ನರಸೇವಾಡಿ ಸೇತುವೆ ಬಳಿ ಪ್ರತಿದಿನ ಅಕ್ರಮವಾಗಿ ಮರಳು ಸಂಗ್ರಹಿಸಲು ಅಲ್ತಾಫ್ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಯುವಕನ ಶವವನ್ನು ಘಟನಾ ಸ್ಥಳದಿಂದ ಮನೆಗೆ ತಂದಿದ್ದಾರೆ. ಬಳಿಕ ಈ ಸುದ್ದಿ ಎಲ್ಲೆಡೆ ಹರಡಿದ್ದು, ಪೊಲೀಸರಿಗೂ ಕೂಡ ವಿಚಾರ ತಲುಪಿದೆ. ಕೂಡಲೇ ಬೈಲಹೊಂಗಲ ಡಿಎಸ್ಪಿ, ಖಾನಾಪುರ ಪೊಲೀಸ್ ಇನ್ಸ್ ಪೆಕ್ಟರ್ ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಬಿಗಿ ಭದ್ರತೆಯಲ್ಲಿ ತಪಾಸಣೆ ನಡೆಸಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಡಿಎಸ್ಪಿ ರವಿ ನಾಯಕ್, ನಂದಗಡ ಹಾಗೂ ಖಾನಾಪುರ ಪೊಲೀಸ್ ನಿರೀಕ್ಷಕ ಎಸ್. ಸಿ. ಪಾಟೀಲ್ ಸದ್ಯ ಸ್ಥಳದಲ್ಲೇ ಠಿಕಾಣಿ ಹೂಡಿದ್ದು, ತನಿಖೆ ಮುಂದುವರಿಸಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications