ಬೆಳ್ಳಂಬೆಳಗ್ಗೆ ವಿವಿಧ ಜಿಲ್ಲೆಗಳಲ್ಲಿ ಎಸಿಬಿ ದಾಳಿ, ಅಧಿಕಾರಿಗಳಿಗೆ ಶಾಕ್!
ಬೆಳಗಾವಿ, ಅಕ್ಟೋಬರ್ 06: ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.
ಬೆಳಗಾವಿಯ ಖಾನಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿಬಿ ಪಾಟೀಲ್ ಅವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳಗಾವಿಯ ರಾಮತೀರ್ಥನಗರದಲ್ಲಿರುವ ಅವರ ಮನೆ ಮೇಲೆ ದಾಳಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯಲ್ಲೂ ಕೆಲವೆಡೆ ಎಸಿಬಿ ದಾಳಿ ನಡೆದಿದೆ. ಸಿಬಿ ಪಾಟೀಲ್ ಅವರ ಸಹೋದರರ ಬೈಲಹೊಂಗಲದ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.
Karnataka: Raids underway by Anti-Corruption Bureau (ACB) at 3 locations of government official Chandragouda B Patil in Belagavi in connection with disproportionate assets case against him pic.twitter.com/Hg3Frhu5Mn
— ANI (@ANI) October 6, 2018
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಉಪ ಆಯುಕ್ತ ಚಿದಾನಂದ ಮಿಂಚಿನಾಳ ಅವರ ಬಾಗಲಕೋಟೆಯ ಕಚೇರಿ ಮೇಲೆ ದಾಳಿ ನಡೆದಿದೆ.
ದಾಳಿಯ ಕುರಿತು ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಶುಕ್ರವಾರ ರಾಜಧಾನಿ ಬೆಂಗಳೂರಿನಲ್ಲೂ ಗಳಿಕೆ ಮೀರಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಎಸಿಬಿ ತಂಡ ಹಲವು ಅಧಿಕಾರಿಗಳ ನಿವಾಸ ಮತ್ತು ಕಚೇರಿ ಏಲೆ ದಾಳಿ ನಡೆಸಿತ್ತು.
ಸುಮಾರು ಎಂಟು ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಎನ್ ಜಿ ಗೌಡಯ್ಯ ಅವರ ನಿವಾಸದ ಮೇಲೆ, ಕೆಐಎಡಿಬಿ ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ ಆರ್ ಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದರು.
ಇಂದು ನಡೆದ ಎಸಿಬಿ ದಾಳಿಯ ವಿವರ ಇಲ್ಲಿದೆ:
* ಶ್ರೀ ಚಂದ್ರೇ ಗೌಡ ಬಿ.ಪಾಟೀಲ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಖಾನಾಪುರ ಉಪ ವಿಭಾಗ, ಬೆಳಗಾವಿ ಜಿಲ್ಲೆ.
ಇವರ ರಾಮತೀರ್ಥನಗರ, ಬೆಳಗಾವಿಯಲ್ಲಿನ ವಾಸದ ಮನೆ, ಇವರ ಸಂಬಂಧಿಕರ ಬೈಲಹೊಂಗಲ, ಬೆಳಗಾವಿ ಜಿಲ್ಲೆಯಲ್ಲಿನ ವಾಸದ ಮನೆ ಹಾಗೂ ಇವರು ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಖಾನಾಪುರ ಉಪ ವಿಭಾಗ, ಬೆಳಗಾವಿಯ ಕಛೇರಿ.
* ಶ್ರೀ ಚಿದಾನಂದ ಬಿ.ಮಿಂಚಿನಾಳ್, ಎಇಇ, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗ, ಬಾಗಲಕೋಟೆ ಉಪ ವಿಭಾಗ, ಬಾಗಲಕೋಟೆ ಜಿಲ್ಲೆ.
ಇವರ ವಿಜಯಪುರ ನಗರದಲ್ಲಿನ ಎರಡು ವಾಸದ ಮನೆ ಮತ್ತು ಇವರು ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿ, ಗ್ರಾಮೀಣ ಕುಡಿಯುವ ನೀರು ಸರಬರಾಜು, ಬಾಗಲಕೋಟೆ ಉಪ ವಿಭಾಗ, ಬಾಗಲಕೋಟೆ ಜಿಲ್ಲೆ.
ವಿವಿಧ ಎಸಿಬಿ ತಂಡಗಳಿಂದ ಮೇಲ್ಕಂಡ ಆರೋಪಿತ ಸರ್ಕಾರಿ ನೌಕರರ ವಿರುದ್ಧ ದಾಳಿ ಮುಂದುವರೆದಿದ್ದು, ಸದರಿ ಸರ್ಕಾರಿ ನೌಕರರು ಹೊಂದಿರುವ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಹಾಗೂ ಸಂಬಂಧಪಟ್ಟ ಇನ್ನು ಹೆಚ್ಚಿನ ಸ್ಥಳಗಳ ಮಾಹಿತಿ ಸಂಗ್ರಹಣೆ ಮುಂದುವರೆದಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications