ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ 4 ಕಡೆ ಎಸಿಬಿ ಅಧಿಕಾರಿಗಳ ದಾಳಿ
ಬೆಳಗಾವಿ, ಜೂನ್ 16: ಬೆಳಗಾವಿಯ ತೂಕ ಮತ್ತು ಮಾಪನ ಇಲಾಖೆಯ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ಅವರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬೆಳಗಾವಿಯ ರುಕ್ಮಿಣಿ ನಗರದ ನಿವಾಸ ಮತ್ತು ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಸುಭಾಷ್ ಉಪ್ಪಾರ್, ಬೆಳಗಾವಿಯ ತೂಕ ಮತ್ತು ಮಾಪನ ಇಲಾಖೆಯ ಇನ್ವೆಸ್ಟಿಗೇಷನ್ ಯೂನಿಟ್ 3ರ ಅಸಿಸ್ಟೆಂಟ್ ಕಂಟ್ರೋಲರ್ ಆಗಿದ್ದಾರೆ.
ರಾಜ್ಯಸಭಾ ಸದಸ್ಯರಾದ ಬಳಿಕ ಬೆಳಗಾವಿಗೆ ಆಗಮಿಸಿದ ಈರಣ್ಣ ಕಡಾಡಿ
ಏಕಕಾಲದಲ್ಲಿ ನಾಲ್ಕು ಕಡೆ ದಾಳಿ ಮಾಡಿದ 30 ಸಿಬ್ಬಂದಿಯ ಎಸಿಬಿ ತಂಡಗಳು ಪರಿಶೀಲನೆ ಮಾಡುತ್ತಿವೆ. ಎಸಿಬಿ ಎಸ್ಪಿ ಬಿ.ಎಸ್ ನೇಮಗೌಡರ ನೇತೃತ್ವದಲ್ಲಿ ದಾಳಿ ನಡೆದಿದೆ. ಕೊರೊನಾ ವೈರಸ್ ಕಾರಣದಿಂದಾಗಿ ಮುಖಕ್ಕೆ ಮಾಸ್ಕ ಹಾಕಿಕೊಂಡು ಎಸಿಬಿ ಅಧಿಕಾರಿಗಳು ನಾಲ್ಕು ಕಡೆ ದಾಳಿ ಮಾಡಿದ್ದಾರೆ.
ಬೆಳಗಾವಿ ವಿಡಿಯೋ; ಬಾಡಿಗೆ ಕೊಡದಿದ್ದಕ್ಕೆ ಗಾಳಿಯಲ್ಲಿ ಗುಂಡು!
ಬೆಳಗಾವಿಯ ರುಕ್ಮಿಣಿ ನಗರದ ಮನೆ, ಕಚೇರಿ, ಬಾಡಿಗೆ ಮನೆ, ಬಸವನ ಕುಡಚಿಯಲ್ಲಿರುವ ಅಳಿಯ ಸದಾನಂದ ಮನೆಯಲ್ಲಿ ಪತ್ರಗಳ ಪರಿಶೀಲನೆ ನಡೆಯುತ್ತಿದೆ. ಓರ್ವ ಡಿವೈಎಸ್ಪಿ, ಏಳು ಇನ್ಸ್ ಪೆಕ್ಟರ್, 20 ಜನ ಸಿಬ್ಬಂದಿಯಿಂದ ದಾಳಿ ನಡೆದಿದೆ.