ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯ ಸ್ವಾಮೀಜಿ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಂಧನ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮೇ 20: ಬೆಳಗಾವಿ ಜಿಲ್ಲೆಯ ಹೊಸೂರು ಗ್ರಾಮದಲ್ಲಿ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರಗೋಡ ಠಾಣೆ ಪೊಲೀಸರಿಂದ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿ ಎಂಬುವವನನ್ನು ಬಂಧಿಸಲಾಗಿದೆ.

ಹಲ್ಲೆಗೊಳಗಾದ ಗಂಗಾಧರ ಸ್ವಾಮೀಜಿ ಹೊಸೂರಿನ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದಾರೆ. ನಿನ್ನೆ ತಡರಾತ್ರಿ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿಯು ಮಠಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ.

 ಬೆಳಗಾವಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ವೇಳೆ ಪುರಾತನ ಶಿಲಾ ಶಾಸನ ಪತ್ತೆ ಬೆಳಗಾವಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ವೇಳೆ ಪುರಾತನ ಶಿಲಾ ಶಾಸನ ಪತ್ತೆ

ಈ ವೇಳೆ ಪ್ರತಿರೋಧ ಒಡ್ಡಿದ ಮಡಿವಾಳೇಶ್ವರ ಮಠದ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಮಲ್ಲಿಕಾರ್ಜುನ ಬುಡಶೆಟ್ಟಿ ಮೇಲೆ ಹಲವು ಅಪರಾಧ ಪ್ರಕರಣಗಳಿವೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡ ಪೊಲೀಸ್ ಠಾಣೆಯ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Accused Arrest For Assault On Swamiji In Belagavi

ಕೊಲೆ ಪ್ರಕರಣವೊಂದರಲ್ಲಿ ಆರೋಪಿ ಮಲ್ಲಿಕಾರ್ಜುನ ಬುಡಶಡಟ್ಟಿ ಜೈಲು ಸೇರಿದ್ದನು. ಇತ್ತೀಚೆಗಷ್ಟೇ ಜಾಮೀನು ಮೇಲೆ ಆರೋಪಿ ಬಿಡುಗಡೆಗೊಂಡಿದ್ದನು. ಸ್ಥಳಕ್ಕೆ ಎಎಸ್ಪಿ ಅಮರನಾಥ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

English summary
In connection with the assault on Gangadhara Swamiji, Accused Mallikarjuna Budashetti has been arrested by Murugoda police, Belagavi District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X