ಗಲಭೆ ನಂತರ ಸಹಜ ಸ್ಥಿತಿಯತ್ತ ಬೆಳಗಾವಿ ನಗರ
ಬೆಳಗಾವಿ, ಜೂ. 10 : ಬೆಳಗಾವಿ ನಗರದ ಸೂಕ್ಷ್ಮ ಪ್ರದೇಶಗಳಾದ ಖಡಕ್ ಗಲ್ಲಿ ಹಾಗೂ ಜಾಲಗಾರ ಗಲ್ಲಿಯ ಸುತ್ತಲಿನ ಪ್ರದೇಶಗಳಲ್ಲಿ ಭಾನುವಾರ ತಡರಾತ್ರಿ ನಡೆದ ಎರಡು ಗುಂಪುಗಳು ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 29 ಜನರನ್ನು ಬಂಧಿಸಿದ್ದಾರೆ. ಗಲ್ಲಿಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಭಾನುವಾರ ತಡರಾತ್ರಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಎರಡೂ ಗುಂಪಿನವರು ಸೇರಿ 29 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಪೂರ್ತಿ ಈ ಭಾಗದಲ್ಲಿ 144 ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮಂಗಳವಾರ ಗಲ್ಲಿಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.
ಭಾನುವಾರ ನಡೆದ ಕಲ್ಲು ತೂರಾಟದಲ್ಲಿ ಒಬ್ಬ ಪೊಲೀಸ್ ಪೇದೆ ಗಾಯಗೊಂಡಿದ್ದರು. ಎಂಟು ದ್ವಿಚಕ್ರ ವಾಹನಗಳು ಸೇರಿದಂತೆ ಹಲವು ವಾಹನಗಳಿಗೆ ಹಾನಿ ಉಂಟಾಗಿದೆ. ಕಲ್ಲು ತೂರಾಟದಿಂದಾಗಿ ಹಲವು ಮನೆಗಳ ಕಿಟಕಿ ಗಾಜುಗಳು ಪುಡಿಯಾಗಿವೆ.
ಘಟನೆಗೆ ಕಾರಣವೇನು? : ಬೆಳಗಾವಿಯ ಖಡಕ್ ಗಲ್ಲಿ ಹಾಗೂ ಜಾಲಗಾರ ಗಲ್ಲಿಯ ಸುತ್ತಲಿನ ಪ್ರದೇಶಗಳಲ್ಲಿ ದೇವರ ಚಿತ್ರವೊಂದನ್ನು ವಿರೂಪಗೊಳಿಸಿದ ಛಾಯಾಚಿತ್ರ ಭಾನುವಾರ ಕೆಲವರ ಮೊಬೈಲ್ ಗೆ ಬಂದಿತ್ತು. ಇದರಿಂದ ಸಿಟ್ಟಿಗೆದ್ದ ಗುಂಪು ಪೊಲೀಸರಿಗೆ ಮಾಹಿತಿ ನೀಡಿತ್ತು. ಈ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ಭರವಸೆ ನೀಡಿದ್ದರು. ಆದರೆ, ರಾತ್ರಿ 11ರ ವೇಳೆಗೆ ಖಡಕ್ ಗಲ್ಲಿ ಬಳಿ ಯಾರೋ ಕಿಡಿಗೇಡಿಗಳು ರಸ್ತೆಗೆ ಬಾಟಲಿ ಎಸೆದಿದ್ದರು.
ಇದರಿಂದಾಗಿ ಕಲ್ಲು ತೂರಾಟ ನಡೆದಿದೆ ಎಂಬ ವದಂತಿ ಹರಡಿ ರಾತ್ರಿ 12 ಗಂಟೆ ಹೊತ್ತಿಗೆ ಎರಡೂ ಗುಂಪಿನವರು ಪರಸ್ಪರ ಕಲ್ಲು ತೂರಾಟ ಆರಂಭಿಸಿದರು. ನಗರದ ವಿವಿಧ ಪ್ರದೇಶಗಳಲ್ಲೂ ಇದೇ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಬೆಳಿಗ್ಗೆವರೆಗೂ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಅಂದಿನಿಂದಲೂ ಎರಡೂ ಗಲ್ಲಿಗಳು ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ













Click it and Unblock the Notifications