ಬೆಳಗಾವಿ ಚೆನ್ನಮ್ಮನ ವೃತ್ತದಲ್ಲಿ ಭವ್ಯ ರಾಜ್ಯೋತ್ಸವ: 5 ಗಂಟೆಯಲ್ಲಿ ₹20 ಸಾವಿರ ಗಳಿಸಿದ ಚಿಂದಿ ಆಯುವವರು
ಬೆಳಗಾವಿ, ನವೆಂಬರ್ 03: ಬೆಳಗಾವಿ ಅಂದರೇನೆ ಹಾಗೇ ಇಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಕೂಡ ಏನಾದರೂ ಹೊಸ ವಿಚಾರ ಇದ್ದೇ ಇರುತ್ತದೆ. ಅದರಲ್ಲೂ ಕರ್ನಾಟಕ ರಾಜ್ಯೋತ್ಸವ ಹತ್ತು ಹಲವಾರು ವಿಶೇಷತೆಗಳಿಗೆ ಪ್ರತಿ ವರ್ಷ ಸಾಕ್ಷಿ ಆಗುತ್ತಿದೆ.
ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಕನ್ನಡ ಪರ ಶ್ರಮಿಸುವ ಸಾಕಷ್ಟು ಜನರಿಗೆ ಆಧಾರವಾಗಿದೆ. ರಾಜ್ಯೋತ್ಸವ ಆಚರಣೆಯಿಂದ ಜಿಲ್ಲೆಯಲ್ಲಿ ಸುಮಾರು 60 ಲಕ್ಷ ರೂಪಾಯಿಯಷ್ಟು ಕನ್ನಡ ಧ್ವಜ ಮಾರಾಟವಾದರೆ, ಬೆಳಗಾವಿ ಚೆನ್ನಮ್ಮ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾರ ಪ್ರಮಾಣದ ವ್ಯಾಪಾರ ವಹಿವಾಟು ನಡೆಯುತ್ತದೆ. ಇದರಿಂದ ಅನೇಕರು ತಮ್ಮ ಜೀವನ ಕಟ್ಟಿಕೊಳ್ಳುತ್ತಾರೆ.

ಇದರ ಜೊತೆಗೆ ಈ ಬಾರಿಯ ಇನ್ನೊಂದು ವಿಶೇಷ ಅಂದರೆ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಚಿಂದಿ ಆಯುವ 10 ಮಂದಿ ಐದೇ ಗಂಟೆಯಲ್ಲಿ ಇಪ್ಪತ್ತು ಸಾವಿರ ರೂಪಾಯಿ ಗಳಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬುಧವಾರ ರಾಣಿ ಚನ್ನಮ್ಮ ವೃತ್ತದಲ್ಲಿ ಲಕ್ಷಾಂತರ ಜನ ಸೇರಿದ್ದರು. ಅವರು ನೀರು ಕುಡಿದು ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನು ಗುರುವಾರ 10 ಮಂದಿ ಚಿಂದಿ ಆಯುವವರು ಸಂಗ್ರಹಿಸಿದರು. ನಸುಕಿನ 3ರಿಂದ ಬೆಳಿಗ್ಗೆ 8ರವರೆಗೆ ಎರಡು ಟನ್ಗೂ ಅಧಿಕ ಪ್ಲಾಸ್ಟಿಕ್ ಬಾಟಲಿಗಳು ಸಂಗ್ರಹವಾದ್ದು ಗಮನಾರ್ಹವಾಗಿದೆ.

ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಬಳಿಕ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಚಿಂದಿ ಆಯುವವರು ಸಂಗ್ರಹಿಸಿದ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಪಾಲಿಕೆ ವಾಹನದಲ್ಲಿ ಸಾಗಿಸಲಾಯಿತು.
ಈ ಬಗ್ಗೆ ಬೆಳಗಾವಿ ಪಾಲಿಕೆ ಪರಿಸರ ಎಂಜಿನಿಯರ್ ಹಣಮಂತ ಕಲಾದಗಿ ಮಾತನಾಡಿದ್ದು, ಪ್ರತಿ ಕೆ.ಜಿ.ಗೆ ಮಹಾನಗರ ಪಾಲಿಕೆ ₹10 ದರ ನೀಡುತ್ತದೆ. 2,000 ಕೆ.ಜಿ ಬಾಟಲಿಗಳನ್ನು ನೀಡಿ ₹20 ಸಾವಿರ ಗಳಿಸಿದರು. ಎಲ್ಲ ಹತ್ತು ಮಂದಿಗೆ ತಲಾ ₹2,000 ಹಂಚಲಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯಿಂದ 475 ಮಂದಿಗೆ ಚಿಂದಿ ಆಯುವ ಗುರುತಿನ ಚೀಟಿ ನೀಡಲಾಗಿತ್ತು. ಹೀಗಾಗಿ ಪ್ರತಿಯೊಬ್ಬರೂ ಪ್ರತಿದಿನ ಗರಿಷ್ಠ ಇನ್ನೂರು ರೂಪಾಯಿ ಗಳಿಸುತ್ತಾರೆ. ಆದರೆ ಈ ಬಾರಿ ರಾಜ್ಯೋತ್ಸವಕ್ಕೆ ಬಂದ ಜನರು ಬಿಸಾಡಿದ ತ್ಯಾಜ್ಯ ಅಧಿಕ ಪ್ರಮಾಣದಲ್ಲಿತ್ತು ಎಂದು ವಿವರಿಸಿದರು.
ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರ ನಿರ್ದೇಶನದಂತೆ, ರಾಜ್ಯೋತ್ಸವ ಮೆರವಣಿಗೆ ನಡೆದ ಮಾರ್ಗಗಳಲ್ಲಿ 100 ಕೆ.ಜಿ.ಯಷ್ಟು ತ್ಯಾಜ್ಯ ಪದಾರ್ಥಗಳನ್ನು ಸಂಗ್ರಹಿಸುವ ದೊಡ್ಡ ತೊಟ್ಟಿಗಳನ್ನು ಇಡಲಾಗಿತ್ತು. ಇದರಿಂದ ಮಾಲಿನ್ಯವಾಗದಂತೆ, ತ್ಯಾಜ್ಯದಿಂದ ನಗರದ ಸೌಂದರ್ಯ ಹಾಳಾಗದಂತೆ ಕಾಪಾಡಲಾಯಿತು ಎಂದು ಹಣಮಂತ ಕಲಾದಗಿ ತಿಳಿಸಿದರು.
ಇನ್ನು ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಬಳಿಕ 2,000 ಕೆ.ಜಿ ಬಾಟಲಿ ಹೊರತುಪಡಿಸಿ, 200 ಕೆ.ಜಿಯಷ್ಟು ವಿವಿಧ ಬಗೆಯ ಹೂವು, 100 ಕೆ.ಜಿ.ಗೂ ಅಧಿಕ ಹರಿದ ಚಪ್ಪಲಿಗಳು, ಪ್ಲಾಸ್ಟಿಕ್ ಚೀಲಗಳು, ತಿಂಡಿ ತಿಂದು ಬಿಸಾಡಿದ ವ್ಯರ್ಥ ಪದಾರ್ಥಗಳು ಹೀಗೆ ಅಪಾರ ಪ್ರಮಾಣದ ತ್ಯಾಜ್ಯ ಸಂಗ್ರಹವಾಗಿತ್ತು. ಸದ್ಯ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತವನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದ್ದು, ವೃತ್ತದಲ್ಲಿ ನಿಯೋಜನೆಗೊಂಡಿದ್ದ ಹತ್ತು ಮಂದಿ ಚಿಂದಿ ಆಯುವವರಿಗೆ ನಾಡ ಹಬ್ಬದಿಂದ ಉಡುಗೊರೆ ಸಿಕ್ಕಂತಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications