ಬೆಳಗಾವಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ವೇಳೆ ಪುರಾತನ ಶಿಲಾ ಶಾಸನ ಪತ್ತೆ
ಬೆಳಗಾವಿ, ಮೇ 20: ಬೆಳಗಾವಿ ನಗರದ ಬಸ್ ನಿಲ್ದಾಣ ಕಟ್ಟಡ ಕಾಮಗಾರಿಗಾಗಿ ನೆಲ ಅಗೆಯುವಾಗ ಮಂಗಳವಾರ ಪುರಾತನ ಕಾಲದ ಶಿಲಾ ಶಾಸನವೊಂದು ಪತ್ತೆಯಾಗಿದೆ.
ಈ ಶಾಸನ ಸುಮಾರು ನಾಲ್ಕು ಅಡಿ ಉದ್ದ ಇದ್ದು, ಶೈವ ಸಂಪ್ರದಾಯದ ಕುರುಹುಗಳು ಶಿಲಾ ಶಾಸನದಲ್ಲಿ ಕೆತ್ತಲ್ಪಟ್ಟಿವೆ. ನಿನ್ನೆ ಜೆಸಿಬಿ ಮೂಲಕ ಕಾರ್ಮಿಕರು ನೆಲ ಅಗೆಯುತ್ತಿದ್ದಾಗ ಶಾಸನ ಕಂಡು ಬಂದಿದೆ. ಕೂಡಲೇ ಕಾರ್ಮಿಕರಿಗೆ ಈ ಬಗ್ಗೆ ಸಂಶಯ ಬಂದು, ನಿಧಾನವಾಗಿ ಅಗೆದು ಶಾಸನಕ್ಕೆ ಧಕ್ಕೆಯಾಗದಂತೆ ಹೊರಗೆ ತೆಗೆದು, ನೀರಿನಿಂದ ಸ್ವಚ್ಛಗೊಳಿಸಿದ್ದಾರೆ.
ಈ ಶಾಸನ ಪುರಾತನ ಕಾಲದ್ದಾಗಿದ್ದು, ಅದರ ಮೇಲೆ ಬಲಭಾಗಕ್ಕೆ ಶಿವಲಿಂಗ ಹಾಗೂ ಎಡ ಭಾಗದಲ್ಲಿ ಬಸವಣ್ಣನ ಚಿತ್ರವಿದೆ. ಇದರ ಮೆಲ್ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರವನ್ನು ಕೆತ್ತಲಾಗಿದೆ. ಕೆಳಭಾಗದಲ್ಲಿ ಸುಮಾರು 10 ರಿಂದ 12 ಸಾಲುಗಳಲ್ಲಿ ಹಳಗನ್ನಡದ ಪದಗಳು ಕಂಡು ಬಂದಿವೆ. ನಗರದ ಮಧ್ಯ ಭಾಗದಲ್ಲಿಯೇ ಇದ್ದ ಸಿಬಿಟಿ ಬಸ್ ನಿಲ್ದಾಣವನ್ನು ತೆರವುಗೊಳಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭದಲ್ಲಿ ನೆಲವನ್ನು ಅಗೆಯುತ್ತಿದ್ದಾಗ ಸುಮಾರು 25 ಅಡಿ ಆಳದಲ್ಲಿ ಈ ಅಪರೂಪದ ಶಿಲಾ ಶಾಸನ ಪತ್ತೆಯಾಗಿದೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರು ಮಹಾನಗರ ಪಾಲಿಕೆ ಆಯುಕ್ತರು, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು. ಇದರ ಪರಿಶೀಲನೆ ನಂತರ ಇನ್ನಷ್ಟು ಮಾಹಿತಿಗಳು ತಿಳಿದು ಬರಲಿವೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications