ರಾಮದುರ್ಗ: ಅಕ್ಷರ ದಾಸೋಹ ಊಟ ಸೇವಿಸಿ 60 ವಿದ್ಯಾರ್ಥಿಗಳು ಅಸ್ವಸ್ಥ
Recommended Video

ಬೆಳಗಾವಿ, ಜೂನ್.20 : ಅಕ್ಷರ ದಾಸೋಹ ಊಟ ಸೇವಿಸಿ ಸುಮಾರು 60 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಮದುರ್ಗ ತಾಲೂಕಿನ ಲಕನಾಯಕನಕೊಪ್ಪ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಅಸ್ವಸ್ಥ ವಿದ್ಯಾರ್ಥಿಗಳನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಪಾಲಕರು ಆಸ್ಪತ್ರೆಗೆ ಘೆರಾವ್ ಹಾಕಿದ್ದಾರೆ.
ಇತ್ತ ಕಡೆ ಮಕ್ಕಳನ್ನು ಸಮಾಧಾನಪಡಿಸಿ, ಚಿಕಿತ್ಸೆ ನೀಡಲು ವೈದ್ಯರು ಪರದಾಡುತ್ತಿದ್ದಾರೆ.
ಅಡುಗೆಗೆ ಹುಳ ಇರುವ ಆಹಾರ ಪದಾರ್ಥಗಳನ್ನು ಉಪಯೋಗಿಸಿದ್ದರಿಂದ ಈ ಘಟನೆ ಸಂಭವಿಸಿರಬಹುದು ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ರಾಮದುರ್ಗ ಪೊಲೀಸರು ಭೇಟಿ ನೀಡಿದ್ದು,
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಊಟದ ವಿಚಾರದಲ್ಲಿ ಸದಾ ಎಚ್ಚರಿಕೆ ಇರಬೇಕು. ಮೈ ಮರೆತರೆ ಜೀವಕ್ಕೇ ಅಪಾಯ. ಈ ಹಿಂದೆ ಬಿಹಾರದಲ್ಲಿ ಬಿಸಿಯೂಟ ಸೇವಿಸಿ 23 ಮಕ್ಕಳು ಬಲಿಯಾಗಿದ್ದರು. ಇದು ನಮಗೂ ಎಚ್ಚರಿಕೆ ಗಂಟೆಯಾಗಿದ್ದು, ಶುಚಿತ್ವಕ್ಕೆ ಆದ್ಯತೆ ನೀಡಬೇಕೆನ್ನುವ ಎಸ್ಸೆಮ್ಮೆಸ್ ಗಳು ಆಗಾಗ ಅಧಿಕಾರಿ ವಲಯದಲ್ಲಿ ಹರಿದಾಡುತ್ತಿರುತ್ತವೆ.
ವಾಸ್ತವವಾಗಿ, ನಮ್ಮ ರಾಜ್ಯದಲ್ಲಿ ಅಕ್ಷರ ದಾಸೋಹ ಜಾರಿಯಾದಾಗಲೂ ಇಂಥದ್ದೇ ನೂರೆಂಟು ಸಮಸ್ಯೆಗಳು ತೊಡರುಗಾಲಾಗಿದ್ದವು. ಎಲ್ಲ ಶಾಲಾ ಮಕ್ಕಳಿಗೆ ಊಟ ಕೊಡುವುದೆಂದರೆ, ಉಡಿಯಲ್ಲಿ ಕೆಂಡ ಇಟ್ಟುಕೊಂಡ ಹಾಗೆಯೇ. ಯಾವಾಗ ಏನು ಬೇಕಾದರೂ ಆಗಬಹುದು ಎನ್ನುವ ಸ್ಥಿತಿ. ಇಂಥದ್ದೇ ಆತಂಕದೊಂದಿಗೇ ನಮ್ಮ 'ಅಕ್ಷರ ದಾಸೋಹ' ಯೋಜನೆ ಶುರುವಾಯಿತು.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications