ಬೆಳಗಾವಿ ಅಧಿವೇಶನ, ಮೊದಲ ದಿನ ಪ್ರತಿಭಟನೆಯ ಬಿಸಿ
ಬೆಳಗಾವಿ, ಜೂ. 29 : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಯಲಿದೆ. ಸೋಮವಾರದಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಇಂದು ಸಾಲು-ಸಾಲು ಪ್ರತಿಭಟನೆಗಳಿಗೆ ಬೆಳಗಾವಿ ಸಾಕ್ಷಿಯಾಗಲಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ 6ನೇ ವಿಧಾನಮಂಡಲ ಅಧಿವೇಶನವಿದಾಗಿದ್ದು, ಈ ಬಾರಿಯೂ ಕಬ್ಬು ಬೆಳೆಗಾರರ ಸಮಸ್ಯೆ ಚರ್ಚೆಯ ಕೇಂದ್ರಬಿಂದುವಾಗಲಿದೆ. ಕಬ್ಬು ಬೆಳೆಗಾರರು ಈ ಬಾರಿಯೂ ಸುವರ್ಣಸೌಧದ ಮುಂದೆ ನಿರಂತರ ಪ್ರತಿಭಟನೆ ನಡೆಸುವ ಘೋಷಣೆ ಮಾಡಿದ್ದಾರೆ. [ಹೋರಾಟಕ್ಕೆ ಸಜ್ಜಾದ ಕಬ್ಬು ಬೆಳೆಗಾರರು]

ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪಗಳು ಆರಂಭವಾಗಲಿವೆ. ಕಬ್ಬು ಬೆಳಗಾರರ ಬಾಕಿ ಪಾವತಿ, ರಾಜ್ಯದಲ್ಲಿನ ರೈತರ ಸರಣಿ ಆತ್ಮಹತ್ಯೆ ವಿಚಾರಗಳ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. [ದಯವಿಟ್ಟು ಆತ್ಮಹತ್ಯೆಗೆ ಶರಣಾಗಬೇಡಿ : ರೈತರಿಗೆ ಸಿದ್ದು ಮನವಿ]
ಪ್ರತಿಪಕ್ಷ ಬಿಜೆಪಿ ಕೊಪ್ಪಳ ಜಿಲ್ಲೆಯಲ್ಲಿ ನಡೆದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರ ರಾಜೀನಾಮೆಗೆ ಒತ್ತಾಯಿಸಲಿದೆ. ಹತ್ತು ದಿನಗಳ ಕಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ, ಜೆಡಿಎಸ್ ಸಜ್ಜಾಗಿದೆ. ['ಭಾಗ್ಯ' ಘೋಷಣೆ ಸಾಲದು, ಅನುಷ್ಠಾನಕ್ಕೆ ತನ್ನಿ: ಕಾಗೋಡು]
ಇಂದಿನ ಪ್ರತಿಭಟನೆಗಳು
* ಬೆಳಗ್ಗೆ 9.30ಕ್ಕೆ ಎರಡು ವರ್ಷಗಳಿಂದ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಪಾವತಿ ಮಾಡುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.
* ಬೆಳಗ್ಗೆ 10.30ಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.
* ಬೆಳಗ್ಗೆ 11 ಗಂಟೆಗೆ ಎಚ್.ಡಿ.ಕುಮಾರಸ್ವಾಮಿ ಅವರು ಧಾರವಾಡದಿಂದ ನಡೆಸಿದ ಪಾದಯಾತ್ರೆ ಸಿ.ಪಿ.ಹೆಡ್ ಮೈದಾನದಲ್ಲಿ ಅಂತ್ಯಗೊಳ್ಳಲಿದ್ದು, ಬೃಹತ್ ಸಮಾವೇಶ ನಡೆಯಲಿದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications