Get Updates
Get notified of breaking news, exclusive insights, and must-see stories!

ಬೆಳಗಾವಿ ಅಧಿವೇಶನ, ಮೊದಲ ದಿನ ಪ್ರತಿಭಟನೆಯ ಬಿಸಿ

ಬೆಳಗಾವಿ, ಜೂ. 29 : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಯಲಿದೆ. ಸೋಮವಾರದಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಇಂದು ಸಾಲು-ಸಾಲು ಪ್ರತಿಭಟನೆಗಳಿಗೆ ಬೆಳಗಾವಿ ಸಾಕ್ಷಿಯಾಗಲಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ 6ನೇ ವಿಧಾನಮಂಡಲ ಅಧಿವೇಶನವಿದಾಗಿದ್ದು, ಈ ಬಾರಿಯೂ ಕಬ್ಬು ಬೆಳೆಗಾರರ ಸಮಸ್ಯೆ ಚರ್ಚೆಯ ಕೇಂದ್ರಬಿಂದುವಾಗಲಿದೆ. ಕಬ್ಬು ಬೆಳೆಗಾರರು ಈ ಬಾರಿಯೂ ಸುವರ್ಣಸೌಧದ ಮುಂದೆ ನಿರಂತರ ಪ್ರತಿಭಟನೆ ನಡೆಸುವ ಘೋಷಣೆ ಮಾಡಿದ್ದಾರೆ. [ಹೋರಾಟಕ್ಕೆ ಸಜ್ಜಾದ ಕಬ್ಬು ಬೆಳೆಗಾರರು]

protest

ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪಗಳು ಆರಂಭವಾಗಲಿವೆ. ಕಬ್ಬು ಬೆಳಗಾರರ ಬಾಕಿ ಪಾವತಿ, ರಾಜ್ಯದಲ್ಲಿನ ರೈತರ ಸರಣಿ ಆತ್ಮಹತ್ಯೆ ವಿಚಾರಗಳ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. [ದಯವಿಟ್ಟು ಆತ್ಮಹತ್ಯೆಗೆ ಶರಣಾಗಬೇಡಿ : ರೈತರಿಗೆ ಸಿದ್ದು ಮನವಿ]

ಪ್ರತಿಪಕ್ಷ ಬಿಜೆಪಿ ಕೊಪ್ಪಳ ಜಿಲ್ಲೆಯಲ್ಲಿ ನಡೆದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರ ರಾಜೀನಾಮೆಗೆ ಒತ್ತಾಯಿಸಲಿದೆ. ಹತ್ತು ದಿನಗಳ ಕಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ, ಜೆಡಿಎಸ್ ಸಜ್ಜಾಗಿದೆ. ['ಭಾಗ್ಯ' ಘೋಷಣೆ ಸಾಲದು, ಅನುಷ್ಠಾನಕ್ಕೆ ತನ್ನಿ: ಕಾಗೋಡು]

ಇಂದಿನ ಪ್ರತಿಭಟನೆಗಳು

* ಬೆಳಗ್ಗೆ 9.30ಕ್ಕೆ ಎರಡು ವರ್ಷಗಳಿಂದ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಪಾವತಿ ಮಾಡುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.

* ಬೆಳಗ್ಗೆ 10.30ಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.

* ಬೆಳಗ್ಗೆ 11 ಗಂಟೆಗೆ ಎಚ್.ಡಿ.ಕುಮಾರಸ್ವಾಮಿ ಅವರು ಧಾರವಾಡದಿಂದ ನಡೆಸಿದ ಪಾದಯಾತ್ರೆ ಸಿ.ಪಿ.ಹೆಡ್ ಮೈದಾನದಲ್ಲಿ ಅಂತ್ಯಗೊಳ್ಳಲಿದ್ದು, ಬೃಹತ್ ಸಮಾವೇಶ ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+