ಕುಮಾರಸ್ವಾಮಿಗೆ ಮತ್ತೆ ಶಾಕ್, ನಾಮಪತ್ರ ಹಿಂಪಡೆದ ಮತ್ತೊಬ್ಬ ಜೆಡಿಎಸ್ ಅಭ್ಯರ್ಥಿ
ಬೆಳಗಾವಿ, ನವೆಂಬರ್ 21: ಜೆಡಿಎಸ್ ನಾಯಕ ಕುಮಾರಸ್ವಾಮಿ ಗೆ ಮತ್ತೆ ಆಘಾತವಾಗಿದ್ದು, ಜೆಡಿಎಸ್ನ ಮತ್ತೊಬ್ಬ ಅಭ್ಯರ್ಥಿ ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಅಥಣಿ ಕ್ಷೇತ್ರದಲ್ಲಿ ಜೆಡಿಎಸ್ನಿಂದ ನಾಮಪತ್ರ ಸಲ್ಲಿಸಿದ್ದ ಗುರಪ್ಪ ದಾಶ್ಯಾಳ ಅವರು ಇಂದು ನಾಮಪತ್ರ ವಾಪಸ್ ಪಡೆದಿದ್ದಾರೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಜೊತೆಗೆ ಆಗಮಿಸಿ ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರಿಂದಾಗಿ ಅಥಣಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಇಲ್ಲದಂತಾಗಿದೆ.
ಇಂದೇ ಹಿರೇಕೆರೂರು ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರೂ ಸಹ ನಾಮಪತ್ರ ವಾಪಸ್ ಪಡೆದಿದ್ದಾರೆ. ಅಲ್ಲಿಯೂ ಸಹ ಜೆಡಿಎಸ್ ಅಭ್ಯರ್ಥಿಗಳು ಇಲ್ಲದಾಗಿದೆ.

ಲಕ್ಷ್ಮಣ ಸವದಿಗೆ ಆಪ್ತರಾಗಿದ್ದ ಗುರಪ್ಪ ದಾಶ್ಯಾಳ
ಅಥಣಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಗುರಪ್ಪ ದಾಶ್ಯಾಳ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅತ್ಯಾಪ್ತರಾಗಿದ್ದರು. ಗುರಪ್ಪ ದಾಶ್ಯಾಳ ಅವರ ಮನವೊಲಿಸುವುದಾಗಿ ಸವದಿ ಹೇಳಿದ್ದರು. ಅಂತೆಯೇ ಗುರಪ್ಪ ದಾಶ್ಯಾಳ ಅವರ ಮನವೊಲಿಸಿ ನಾಮಪತ್ರ ಹಿಂತೆಗೆಸುವಲ್ಲಿ ಸಫಲವಾಗಿದ್ದಾರೆ.

ಸವದಿ ಮನವಿ ಮೇರೆಗೆ ನಾಮಪತ್ರ ವಾಪಸ್: ಗುರಪ್ಪ ದಾಶ್ಯಾಳ
ನಾಮಪತ್ರ ವಾಪಸ್ ಪಡೆದ ಬಳಿಕ ಮಾತನಾಡಿದ ಗುರಪ್ಪ ದಾಶ್ಯಾಳ, 'ಇನ್ನು ಮುಂದೆ ಬಿಜೆಪಿಯಲ್ಲಿಯೇ ಮುಂದುವರೆಯುತ್ತೇನೆ' ಎಂದು ಹೇಳಿದರು. 'ನನ್ನ ಸ್ಪರ್ಧೆಯ ಹಿಂದೆ ಸವದಿ ಪಾತ್ರ ಇದೆ ಎಂದು ಹೇಳಲಾಗಿತ್ತು, ಆದರೆ ಅದು ನಿಜವಲ್ಲ, ಸವದಿ ಅವರೂ ಸಹ ನಾಮಪತ್ರ ವಾಪಸ್ ಪಡೆಯುವಂತೆ ಹೇಳಿದ್ದರು, ಅಂತೆಯ ನಾಮಪತ್ರ ಹಿಂಪಡೆದಿದ್ದೇನೆ' ಎಂದರು. ಗುರಪ್ಪ ದಾಶ್ಯಾಳ ಅವರು ಮಾಧ್ಯಮದೊಂದಿಗೆ ಹೆಚ್ಚು ಮಾತನಾಡಲು ಬಿಡದೆ ಒತ್ತಾಯಪೂರ್ವಕವಾಗಿ ಅವರನ್ನು ಕರೆದೊಯ್ಯಲಾಯಿತು.

ಮೂರು ಕ್ಷೇತ್ರದಲ್ಲಿ ಕುಮಾರಸ್ವಾಮಿಗೆ ಆಘಾತ
ಕುಮಾರಸ್ವಾಮಿ ಅವರಿಗೆ ಮೂರು ಕ್ಷೇತ್ರಗಳಲ್ಲಿ ಆಘಾತವಾಗಿದೆ. ಅಥಣಿ ಹಾಗೂ ಹಿರೇಕೆರೂರಿನಲ್ಲಿ ಅಭ್ಯರ್ಥಿಗಳು ಕೊನೆ ಕ್ಷಣದಲ್ಲಿ ಕೈಕೊಟ್ಟ ಮತಯಂತ್ರದಲ್ಲಿ ಜೆಡಿಎಸ್ ಚಿಹ್ನೆಯೇ ಇಲ್ಲದಂತೆ ಮಾಡಿದರೆ. ಚಿಕ್ಕಬಳ್ಳಾಪುರದಲ್ಲಿ ಕೊನೆ ಕ್ಷಣದಲ್ಲಿ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು ಜೆಡಿಎಸ್ ಅಭ್ಯರ್ಥಿ ಬದಲಾದರು. ಉಳಿದಂತೆ ಹೊಸಕೋಟೆ ಕ್ಷೇತ್ರದಲ್ಲಿ ಜೆಡಿಎಸ್ ಯಾವ ಅಭ್ಯರ್ಥಿಯನ್ನೂ ಕಣಕ್ಕೆ ಇಳಿಸಿಯೇ ಇಲ್ಲ.

ಅಥಣಿ, ಹಿರೇಕೆರೂರಲ್ಲಿ ಪಕ್ಷೇತರರಿಗೆ ಬೆಂಬಲ
ಅಥಣಿ ಹಾಗೂ ಹಿರೇಕೆರೂರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಪಕ್ಷೇತರರಿಗೆ ಬೆಂಬಲಿಸುವುದಾಗಿ ಹೇಳಿದೆಯಾದರೂ ಯಾವ ಪಕ್ಷೇತರರನ್ನು ಬೆಂಬಲಿಸುತ್ತದೆ ಎಂಬುದೇ ಸ್ಪಷ್ಟವಾಗಿಲ್ಲ. ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಮಾತ್ರ ಬಿಗ್ ರಿಲೀಫ್ ದೊರೆತಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications