15 ಕ್ಷೇತ್ರದ ಉಪ ಚುನಾವಣೆ; ಸ್ಪಷ್ಟನೆ ನೀಡಿದ ಜೆಡಿಎಸ್
ಬೆಳಗಾವಿ, ನವೆಂಬರ್ 28 : ಅಥಣಿ ಕ್ಷೇತ್ರದ ಉಪ ಚುನಾವಣೆ ವಿಚಾರದಲ್ಲಿ ಜೆಡಿಎಸ್ ಸ್ಪಷ್ಟನೆಯನ್ನು ನೀಡಿದೆ. ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ಪಕ್ಷದ ಬೆಂಬಲಿತ ಅಭ್ಯರ್ಥಿಯಲ್ಲ, ಪಕ್ಷದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡಿಲ್ಲ ಎಂದು ಹೇಳಿದೆ.
ಡಿಸೆಂಬರ್ 5ರಂದು ಅಥಣಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಮಹೇಶ್ ಕುಮಟಳ್ಳಿ, ಕಾಂಗ್ರೆಸ್ನಿಂದ ಜಿ. ಬಿ. ಮಂಗ್ಸೂಳಿ ಕಣದಲ್ಲಿದ್ದಾರೆ. ಜೆಡಿಎಸ್ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಪಕ್ಷದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡಿಲ್ಲ.
ಅಥಣಿ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ಉಪ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಪ್ರಚಾರವನ್ನು ಮಾಡುತ್ತಿದ್ದಾರೆ. ತಾವು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದ್ದರಿಂದ, ಪಕ್ಷ ಸ್ಪಷ್ಟನೆಯನ್ನು ನೀಡಿದೆ.
ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಅಣ್ಣಾರಾಯ ಹಾಲಳ್ಳಿ ಅಧಿಕಾರ ಸ್ವೀಕಾರ ಮಾಡಿದರು. ಎನ್. ಎಚ್. ಕೋನರೆಡ್ಡಿ ಪಕ್ಷದ ಧ್ವಜ ಮತ್ತು ಆದೇಶಪತ್ರವನ್ನು ನೀಡಿದರು. ಅಥಣಿಯಲ್ಲಿ ಪಕ್ಷದ ಅಭ್ಯರ್ಥಿ ಇಲ್ಲ ಆದರೆ, ಕಾಗವಾಡದಲ್ಲಿ ಶ್ರೀ ಶೈಲ ತುಗಶೆಟ್ಟಿ ಪಕ್ಷದಿಂದ ಕಣದಲ್ಲಿದ್ದಾರೆ.

ವೆಂಕಟರಾವ್ ನಾಡಗೌಡ ಹೇಳಿಕೆ
"ಅಥಣಿ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ರಾಜಕೀಯ ಲಾಭ ಪಡೆಯಲು ನಮ್ಮ ಪಕ್ಷದ ನಾಯಕರ ಭಾವಚಿತ್ರ ಬಳಸಿಕೊಂಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ" ಎಂದು ವೆಂಕಟರಾವ್ ನಾಡಗೌಟ ಹೇಳಿದರು.

ಪಕ್ಷದ ಟಿಕೆಟ್ ಕೇಳಿದ್ದರು
"ಶ್ರೀಶೈಲ ಹಳದಮಳ ಜೆಡಿಎಸ್ ಪಕ್ಷದ ಟಿಕೆಟ್ ಕೇಳಿದ್ದರು. ಆದರೆ, ಟಿಕೆಟ್ ಸಿಕ್ಕಲಿಲ್ಲ. ನಾವು ನೈತಿಕ ಬೆಂಬಲ ಘೋಷಣೆ ಮಾಡದಿದ್ದರೂ ನಮ್ಮ ಗಮನಕ್ಕೆ ತರದೇ ಜೆಡಿಎಸ್ ಬೆಂಬಲಿತ ಎಂದು ಹೇಳಿಕೊಂಡಿದ್ದಾರೆ. ಆದ್ದರಿಂದ, ಇದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ" ಎಂದು ಪಕ್ಷ ಹೇಳಿದೆ.

ಪಕ್ಷ ಸಂಘಟನೆ ಮಾಡಲಿದೆ ಜೆಡಿಎಸ್
ಅಥಣಿ ತಾಲೂಕು ಘಟಕದ ಪಕ್ಷದ ನೂತನ ಅಧ್ಯಕ್ಷರಾಗಿ ಅಣ್ಣಾರಾಯ ಹಾಲಳ್ಳಿ ನೇಮಕ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಇಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟನೆ ಮಾಡಲಿದ್ದೇವೆ ಎಂದು ಜೆಡಿಎಸ್ ಪಕ್ಷ ಹೇಳಿದೆ.

ಜನತಾ ನ್ಯಾಯಾಲಯದಲ್ಲಿ ಪಾಠ
ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ಎಚ್. ಕೋನರೆಡ್ಡಿ ಮಾತನಾಡಿ, "ಮೈತ್ರಿ ಸರ್ಕಾರದಲ್ಲಿ ಅನೇಕ ಗೊಂದಲಗಳು ಉಂಟಾಗಿ ಎಚ್. ಡಿ. ಕುಮಾರಸ್ವಾಮಿ ಅಧಿಕಾರ ತ್ಯಜಿಸಬೇಕಾಯಿತು. ಬಿಜೆಪಿ ಉಪ ಚುನಾವಣೆಯಲ್ಲಿ ಕನಿಷ್ಠ 8 ಸ್ಥಾನದಲ್ಲಿ ಗೆಲ್ಲಲು ಹೊರಟಿದೆ. ಅನರ್ಹ ಶಾಸಕರಿಗೆ ಜನತಾ ನ್ಯಾಯಾಲಯದಲ್ಲಿ ಮತದಾರರು ಪಾಠ ಕಲಿಸಲಿದ್ದಾರೆ" ಎಂದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications