ಕ್ರೈಸ್ತರ ಮೇಲೆ ದಾಳಿ: 'ಎರಡೂ ಕಡೆಯಿಂದಲೂ ತಪ್ಪಾಗಿದೆ' ಎಂದ ಸಚಿವ ಆರಗ ಜ್ಞಾನೇಂದ್ರ
ಬೆಳಗಾವಿ, ಡಿಸೆಂಬರ್ 24: "ಕರ್ನಾಟಕದಲ್ಲಿ ಕ್ರೈಸ್ತರ ಮೇಲಿನ ಸರಣಿ ದಾಳಿಗೆ ಭಾಗಶಃ ಅವರ ತಪ್ಪುಗಳು ಕೂಡಾ ಕಾರಣ," ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಎನ್ಡಿಟಿವಿಗೆ ಪ್ರತಿಕ್ರಿಯೆ ನೀಡುತ್ತಾ ಹೇಳಿದ್ದಾರೆ. "ಎರಡೂ ಕಡೆಯಿಂದಲೂ ತಪ್ಪು ನಡೆದಿದೆ," ಎಂದಿದ್ದಾರೆ.
ಕ್ರಿಸ್ಮಸ್ಗೆ ಎರಡು ದಿನಗಳ ಮೊದಲು, ವ್ಯಾಪಕ ಪ್ರತಿಭಟನೆಗಳ ನಡುವೆ ರಾಜ್ಯವು ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕಾರ ಮಾಡಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲಿ ಕ್ರೈಸ್ತರ ಮೇಲೆ ಹೆಚ್ಚಾದ ದಾಳಿಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ, ಎರಡೂ ಕಡೆಯಿಂದ ತಪ್ಪು ನಡೆದಿದೆ ಎಂದು ಹೇಳಿದ್ದಾರೆ.
ಕ್ರೈಸ್ತರ ಚರ್ಚುಗಳ ಮೇಲೆ ಬಲಪಂಥೀಯ ಗುಂಪುಗಳ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಆರಗ ಜ್ಞಾನೇಂದ್ರ, "ಎರಡೂ ಕಡೆ ತಪ್ಪು ಇದೆ. ಅವರು ಬಲವಂತದ ಮತಾಂತರವನ್ನು ಮಾಡದಿದ್ದರೆ, ಈ ರೀತಿ ಗದ್ದಲ ಸೃಷ್ಟಿ ಮಾಡಿ ಮತಾಂತರವನ್ನು ನಿಲ್ಲಿಸಬೇಕಾದ ಪ್ರಮೇಯವೇ ಬರುತ್ತಿರಲಿಲ್ಲ," ಎಂದು ಹೇಳುವ ಮೂಲಕ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ವೇಳೆಯೇ "ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ. ಈ ಬಗ್ಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು," ಎಂದು ಕೂಡಾ ತಿಳಿಸಿದ್ದಾರೆ. ಇನ್ನು "ಈ ಕಾಯ್ದೆಯು ರಾಜ್ಯದಲ್ಲಿ ಅತಿರೇಕದ ಬಲವಂತದ ಮತಾಂತರವನ್ನು ತಪ್ಪಿಸುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿದೆ," ಎಂದು ಹೇಳಿದ ಸಚಿವರ ಬಳಿ ಈ ದಾಳಿ ಪ್ರತ್ಯೇಕತಾವಾದಿ ನೀತಿಯಿಂದಾಗಿ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದಾಗ, "ಒಂದೆಡೆ ಹೌದು, ಮತ್ತೊಂದೆಡೆ ಅಕ್ರಮ ಮತಾಂತರಗಳೂ ಕಾರಣವಾಗಿದೆ," ಎಂದು ಅಭಿಪ್ರಾಯಿಸಿದ್ದಾರೆ.
ಮತಾಂತರ ನಡೆಯುತ್ತಿದೆ ಎನ್ನಲು ಸರ್ಕಾರದ ಬಳಿ ಡೇಟಾ ಇದೆಯೇ?
ರಾಜ್ಯದಲ್ಲಿ ಮತಾಂತರ ನಡೆಯುತ್ತಿದೆ ಎಂದು ಸಾಬೀತುಪಡಿಸಲು ಸರ್ಕಾರದ ಬಳಿ ಡೇಟಾ ಇದೆಯೇ ಎಂದು ಕೂಡಾ ಮಾಧ್ಯಮಗಳು ಪ್ರಶ್ನೆ ಮಾಡಿದೆ. ಹೌದು ಎಂದು ಸಚಿವರು ಹೇಳಿದ್ದಾರೆ. ಇನ್ನು ಈ ಡೇಟಾವು ಮತಾಂತರ ನಡೆದ ಪ್ರಕರಣಗಳದ್ದೆ ಅಥವಾ ಆರೋಪಗಳದ್ದೆ ಎಂದು ಪ್ರಶ್ನೆ ಮಾಡಿದಾಗ, ಅದು ಆರೋಪಗಳು ಎಂದು ತಿಳಿಸಿದ್ದಾರೆ. "ಯಾವುದೇ ಪ್ರಕರಣಗಳು ದಾಖಲು ಆಗಿಲ್ಲ. ಉಡುಪಿಯಲ್ಲಿ ಒಂದು ಆತ್ಮಹತ್ಯೆ ನಡೆದಿದೆ. ಮಂಗಳೂರಿನಲ್ಲಿ ನಾಲ್ವರು ಮತಾಂತರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ," ಎಂದು ಹೊಸದುರ್ಗ ತಾಲೂಕಿನ ಬಿಜೆಪಿ ಶಾಸಕ ಗೂಳಿಹಟ್ಟಿ ಚಂದ್ರಶೇಖರ್ರನ್ನು ಉಲ್ಲೇಖಿಸಿ ಹೇಳಿದರು.
"ಪೊಲೀಸರಿಗೆ ದೂರು ನೀಡುವ ಮೊದಲು ಅವರು ಬಿಜೆಪಿ ಶಾಸಕ ಗೂಳಿಹಟ್ಟಿ ಚಂದ್ರಶೇಖರ್ ತನ್ನ ತಾಯಿಯನ್ನು ಮತಾಂತರ ಮಾಡದಂತೆ ಮನವಿ ಮಾಡಿದ್ದಾರೆ. ಹಾಗೆಯೇ ಮತಾಂತರಗೊಳ್ಳದಂತೆ ಜಾಗೃತಿಯನ್ನು ಕೂಡಾ ಮೂಡಿಸಿದರು. ಆದರೆ ಅವರು ದೂರು ದಾಖಲು ಮಾಡಲು ಪ್ರಯತ್ನ ಮಾಡಿದಾಗ ಪೊಲೀಸರು ದೂರು ದಾಖಲು ಮಾಡಿಕೊಂಡಿಲ್ಲ. ಯಾಕೆಂದರೆ ಯಾವ ಸೆಕ್ಷನ್ ಕೂಡಾ ಇಲ್ಲ. ಇದು ಪೊಲೀಸರ ತಪ್ಪಲ್ಲ. ಇನ್ನು ಸಿದ್ದರಾಮಯ್ಯನವರು ಐಪಿಸಿ ಸೆಕ್ಷನ್ 295 ಅಡಿಯಲ್ಲಿ ದೂರು ದಾಖಲು ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ. ಆದರೆ ಆ ಸೆಕ್ಷನ್ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದಕ್ಕೆ ದಾಖಲು ಮಾಡುವುದು ಆಗಿದೆ. ಮತಾಂತರಕ್ಕೆ ಯಾವುದೇ ಸೆಕ್ಷನ್ ಇಲ್ಲ," ಎಂದು ತಿಳಿಸಿದರು.
-
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ












Click it and Unblock the Notifications