ಬೆಳಗಾವಿ: ₹1,40,000ಕ್ಕೆ 30 ತಿಂಗಳ ಹಸುಗೂಸು ಮಾರಾಟಕ್ಕೆ ಯತ್ನಿಸಿದ ಐವರು ಈಗ ಪೊಲೀಸರ ಅತಿಥಿಗಳು
ಬೆಳಗಾವಿ, ಜೂನ್, 10: ಕೇವಲ 30 ದಿನದ ಹೆಣ್ಣು ಮಗುವನ್ನು ಮಾರಾಟ ಯತ್ನಿಸಿದ್ದು, ಈ ವೇಳೆ ಐವರನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ನಗರದಲ್ಲಿ ಮಗು ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಐವರನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ದತ್ತು ಕೇಂದ್ರದ ಸಂಯೋಜಕರಾದ ರಾಜಕುಮಾರ ಸಿಂಗಪ್ಪಾ ರಾಠೋಡ ದೂರಿನ ಮೇರೆಗೆ ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಬ್ದುಲಗಫಾರ ಲಾಡಖಾನ ತಾ.ಸವದತ್ತಿ ಹಾಲಿ ಸೋಮವಾರ ಪೇಠ ಕಿತ್ತೂರ ಇವನಿಂದ 60,000ಕ್ಕೆ ಮಗು ಪಡೆದುಕೊಂಡಿದ್ದಾನೆ. ಬಳಿಕ ಬೆಳಗಾವಿಯಲ್ಲಿ ಆ ಮಗುವನ್ನ 1,40,000 ರೂಪಾಯಿ ಮಾರಾಟ ಮಾಡಲು ಯತ್ನಿಸಿದೆ. ಇನ್ನು ಈ ಜಾಲವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಪೋಲಿಸರು ಭೇದಿಸಿ ಆರೋಪಿಗಳನ್ನು ಮಟ್ಟಹಾಕುವ ಕೆಲಸ ಮಾಡಿದ್ದಾರೆ.
ಮಹಾದೇವಿ ಜೈನ್,ಅಬ್ದುಲಗಫಾರ ಲಾಡಖಾನ, ಚಂದನ ಸುಭೇಧಾರ, ಪವಿತ್ರಾ, ಪ್ರವೀಣ ಮಡಿವಾಳರ ಈ ಐವರು ಬಂಧಿತ ಆರೋಪಿಗಳಾಗಿದ್ದಾರೆ.
ಮಗುವನ್ನ ವಶಕ್ಕೆ ಪಡೆದುಕೊಂಡ ಪೋಲಿಸರು ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ. ಪೋಲಿಸ್ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದಶ್, ಡಿಸಿಪಿ ಪಿ.ವಿ.ಸ್ನೇಹಾ, ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಇವರ ಮಾರ್ಗದರ್ಶನದಲ್ಲಿ ಸಬ್ಇನ್ಸ್ಪೆಕ್ಟರ ರಾಮಗೌಡ ಸಂಕನಾಳ ಸಿಬ್ಬಂದಿ ಕೆ.ಬಿ.ಗೌರಾಣಿ ಮತ್ತು ಜಾಸ್ಮಿನ ಮುಲ್ಲಾ ಈ ಕಾರ್ಯಾಚರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications