ಚಳಿಗಾಲ ಅಧಿವೇಶನಕ್ಕೆ ಪ್ರಿಯಾಂಕಾ ಗಾಂಧಿ ಕರೆ ತಂದ 'ಪ್ರಭು'
ಸುವರ್ಣ ವಿಧಾನಸೌಧ, ಡಿ.10: ಸದನದಲ್ಲಿ ಡರ್ಟಿ ಪಿಕ್ಚರ್ ವೀಕ್ಷಣೆ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಅಪಖ್ಯಾತಿ ಗಳಿಸಿದ ಬಿಜೆಪಿ ನಾಯಕರ ಸಾಲಿಗೆ ಈಗ ಔರಾದ್ ಕ್ಷೇತ್ರದ ಶಾಸಕ ಪ್ರಭು ಚೌವಾಣ್ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.
ಸುವರ್ಣ ವಿಧಾನ ಸೌಧದಲ್ಲಿ ನಡೆದಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಬುಧವಾರ ಪ್ರಭು ಚೌವಾಣ್ ಎರಡು ಬಾರಿ ಮಾಧ್ಯಮಗಳ ಗಮನ ಸೆಳೆದರು. ಬೆಳಗ್ಗೆ ಕಸದ ಬುಟ್ಟಿಯನ್ನು ಸದನದೊಳಗೆ ತಂದು ಪ್ರತಿಭಟನೆ ನಡೆಸಿದ್ದ ಪ್ರಭು ಅವರು ಮಧ್ಯಾಹ್ನದ ವೇಳೆ ಸದನದಲ್ಲಿ ಮೊಬೈಲ್ ಫೋನ್ ದುರ್ಬಳಕೆ ಮಾಡಿಕೊಂಡ ಪ್ರಕರಣ ಬಯಲಾಗಿದೆ.
ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಶಾಸಕರಾದ ಪ್ರಭು ಚೌವಾಣ್ ಅವರು ಸದನದ ಕಲಾಪ ನಡೆಯುತ್ತಿರುವ ವೇಳೆ ಮೊಬೈಲ್ ಫೋನ್ ಬಳಕೆ ಮಾಡಿದ್ದಾರೆ. ಮೊಬೈಲ್ ಫೋನ್ ನಲ್ಲಿ ಹಿಂದಿ/ಮರಾಠಿ ಭಾಷೆಯಲ್ಲಿದ್ದ ಸುದ್ದಿಯೊಂದನ್ನು ಜೂಮ್ ಮಾಡಿ ನೋಡಿದ್ದಾರೆ.
ಈ ದೃಶ್ಯ ಖಾಸಗಿ ಸುದ್ದಿವಾಹಿನಿ ಛಾಯಾಗ್ರಾಹಕರ ಕಣ್ಣಿಗೆ ಬಿದ್ದಿದೆ. ಇವರುಗಳು ಕೂಡಾ ಶಾಸಕ ಪ್ರಭು ಅವರ ಮೊಬೈಲಿಗೆ ಜೂಮ್ ಹಾಕಿದ್ದಾರೆ. ಈ ಸಮಯಕ್ಕೆ ಸರಿಯಾಗಿ ಪ್ರಭು ಅವರ ಮೊಬೈಲ್ ಪರದೆ ಮೇಲೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾಧ್ರಾ ಅವರ ಚಿತ್ರ ಕಾಣಿಸಿಕೊಂಡಿದೆ. [ಬೆಳಗಾವಿ : ಸದನದಲ್ಲಿ ಕ್ಯಾಂಡಿ ಕ್ರಷ್ ಆಟ]

ಬಾಬ್ ಕಟ್ ಮಾಡಿಸಿಕೊಂಡು ಬಿಳಿ ಬಣ್ಣದ ಶರ್ಟ್ ಧರಿಸಿರುವ ಪ್ರಿಯಾಂಕಾ ಗಾಂಧಿ ಅವರ ಚಿತ್ರವನ್ನು ಕಂಡ ಪ್ರಭು ಅವರು ಜೂಮ್ ಮಾಡಿದ್ದಾರೆ. ಮತ್ತೊಮ್ಮೆ ಚಿತ್ರದ ಮೇಲೆ ಮೆಲ್ಲಗೆ ತಟ್ಟಿದ್ದಾರೆ. ನಂತರ ಇತರೆ ಚಿತ್ರಗಳತ್ತ ಗಮನ ಹರಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರ ಫೋಟೋವನ್ನು ಅಸಹ್ಯ ರೀತಿಯಲ್ಲಿ ನೋಡುತ್ತಿದ್ದ ಆರೋಪ ಪ್ರಭು ಮೇಲೆ ಬಿದ್ದಿದೆ.
ಸದನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ ನಡೆಯುವಾಗ ಶಾಸಕ ಪ್ರಭು ಚವಾಣ್ ಅವರು ಪ್ರಿಯಾಂಕಾ ಅವರ ಫೋಟೋ ಅಸಭ್ಯ ರೀತಿಯಲ್ಲಿ ನೋಡುತ್ತಿರುವ ವರ್ತನೆ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ಕ್ಷಣ ಕ್ಷಣದ ಸುದ್ದಿಗಳು ಬರುತ್ತಿವೆ. ['ಡರ್ಟಿ ಪಿಕ್ಚರ್' ವೀಕ್ಷಣೆ ಸಿಬಿಐನಿಂದ ವರದಿ ಬಂದಿಲ್ಲ]
ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ಬಳಸುವ ಪ್ರಭು ಅವರು ತಮ್ಮ ಮೊಬೈಲಿನ ಗ್ಯಾಲರಿಯಲ್ಲಿರುವ ಚಿತ್ರಗಳನ್ನು ನೋಡತೊಡಗುತ್ತಾರೆ. ಪ್ರಭು ಅವರ ಪಕ್ಕದಲ್ಲಿದ್ದ ಶಾಸಕ ರವಿ ಸುಬ್ರಮಣ್ಯ ಅವರು ಎಚ್ ಡಿ ಕುಮಾರಸ್ವಾಮಿ ಅವರ ವಾದಗಳನ್ನು ಆಲಿಸುವಲ್ಲಿ ಮಗ್ನರಾಗಿರುವ ದೃಶ್ಯಗಳನ್ನು ಕಾಣಬಹುದಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಬುಧವಾರ ಬೆಳಗ್ಗೆ ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಪ್ರಭು ಚೌವಾಣ್ ಅವರು ಪಡಿತರ ಚೀಟಿ ತುಂಬಿದ ಬುಟ್ಟಿಯನ್ನು ಸದನಕ್ಕೆ ಹೊತ್ತು ತಂದು ಎಲ್ಲರ ಗಮನ ಸೆಳೆದಿದ್ದರು. ಆದರೆ, ಮಧ್ಯಾಹ್ನದ ವೇಳೆಯಲ್ಲಿ ಮೊಬೈಲಿನಲ್ಲಿ ಪ್ರಿಯಾಂಕಾ ಗಾಂಧಿ ZOOOM ಮಾಡಿ ನೋಡಿ ಸಿಕ್ಕಿಬಿದ್ದಿದ್ದಾರೆ.
ಮತ್ತೊಂದೆಡೆ ಕೆಜೆಪಿಯಿಂದ ಹಿರೇಕೆರೂರಿನಿಂದ ಶಾಸಕರಾಗಿ ಆಯ್ಕೆಯಾಗಿ ಈಗ ಬಿಜೆಪಿ ಶಾಸಕರಾಗಿರುವ ಯು.ಬಿ ಬಣಕರ್ ಅವರು ಸದನದಲ್ಲಿ ಕ್ಯಾಂಡಿ ಕ್ರಷ್ ಆಟವಾಡುತ್ತಾ ಸಿಕ್ಕಿಬಿದ್ದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications