ಬೆಳಗಾವಿ: ರಾಷ್ಟ್ರಾದ್ಯಂತ ಮುಸ್ಲಿಂ ಸಂಘಟನೆಗಳನ್ನು ನಿಷೇಧಕ್ಕೆ ಆಗ್ರಹ
ಬೆಳಗಾವಿ, ಜನವರಿ 05: ದೀಪಕ್ ರಾವ್ ಹತ್ಯೆ ಖಂಡಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಗುರುವಾರ ರಸ್ತೆ ತಡೆ ನಡೆಸಿ ಉಗ್ರ ಪ್ರತಿಭಟನೆ ನಡೆಸಿದರು.
ಪಟ್ಟಣದ ರಾಯಣ್ಣ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಯುವಕರು, ಮುಖಂಡರು ರಸ್ತೆಗೆ ಅಡ್ಡ ಕುಳಿತು ಎರಡು ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪದೇ-ಪದೇ ಹಿಂದೂ ಯುವಕರ ಹತ್ಯೆ ಮಾಡುತ್ತಿರುವ ಮುಸ್ಲಿಂ ಸಂಘಟನೆಗಳನ್ನು ರಾಷ್ಟ್ರಾದ್ಯಂತ ನಿಷೇಧಗೊಳಿಸಬೇಕು. ರಾಜ್ಯದಲ್ಲಿ ಅಶಾಂತಿ ಸೃಷ್ಠಿಸಿ ದುಷ್ಕೃತ್ಯಗಳನ್ನು ನಡೆಸುತ್ತಿರುವ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.
ಸಾಮಾನ್ಯ ಬಡ ಕುಟುಂಬದ ಆಧಾರ ಸ್ತಂಭವಾಗಿದ್ದ ದೀಪಕ್ ರಾವ್ ಮೃತ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ಕಲ್ಪಿಸಬೇಕು. ಸಂಘಟಣೆಗಳ ಹೆಸರಿನಲ್ಲಿ ಜಾತಿ, ಜಾತಿಗೆ ಬೆಂಕಿ ಹಚ್ಚಿ ಮೋಜು ನೋಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

ರಾಜ್ಯಪಾಲರು ಕೂಡಲೇ ಮಧ್ಯಸ್ಥಿಕೆವಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಅಸಿಸ್ಟೆಂಟ್ ಕಮೀಷನರ್ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿ. ಸರ್ಕಾರ, ಮುಸ್ಲಿಂ ಸಂಘಟನೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ವೇದಮೂರ್ತಿ ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ, 'ಜಾತಿ, ಮತ, ಬೇದ, ಭಾವ ಎಲ್ಲವನ್ನು ಮರೆತು ಇರುವಂತ ಏಕೈಕ ಧರ್ಮ ಹಿಂದೂ ಧರ್ಮವಾಗಿದೆ.
ಮುಸ್ಲಿಂ ಸಂಘಟನೆಗಳ ಹೆಸರಿಟ್ಟುಕೊಂಡಿರುವ ದುರುಳರು ಪದೇ, ಪದೇ ಅಮಾಯಕ ಹಿಂದು ಯುವಕರನನ್ನು ಬರ್ಬರವಾಗಿ ಹತ್ಯೆ ಮಾಡುತ್ತಿರುವದು ಖಂಡನೀಯವಾಗಿದೆ.

ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಹಲ್ಲೆಕೋರರನ್ನು ಬಂಧಿಸಿ ಶಿಕ್ಷಿಸದಿದ್ದರೆ ಹತ್ಯೆಗೆ, ಹತ್ಯೆಯೇ ಪ್ರತೀಕಾರವಾಗಲಿದೆ. ಇದೇ ವೇಳೆ ದೇಶದಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧಗೊಳಿಸಬೇಕು' ಎಂದು ಆಗ್ರಹಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications