ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರ ಬೀಳಿಸುತ್ತೇವೆ ಎಂದಿದ್ದ ಬಾಲಚಂದ್ರ ಜಾರಕಿಹೊಳಿ ಯೂಟರ್ನ್‌

|
Google Oneindia Kannada News

ಬೆಳಗಾವಿ, ಆಗಸ್ಟ್ 14: ನಿನ್ನೆಯಷ್ಟೆ ಪ್ರವಾಹ ಸಂತ್ರಸ್ತರ ಮುಂದೆ ಬಿಜೆಪಿ ಸರ್ಕಾರವನ್ನು ಬೀಳಿಸುವ ಮಾತನ್ನಾಡಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಯೂಟರ್ನ್ ಹೊಡೆದಿದ್ದಾರೆ.

ನಿನ್ನೆ ಪ್ರವಾಹ ಸಂತ್ರಸ್ತರೊಂದಿಗೆ ಮಾತನಾಡುತ್ತಿದ್ದ ಬಾಲಚಂದ್ರ ಜಾರಕಿಹೊಳಿ, 'ನಿಮಗೆಲ್ಲಾ ಕೆಲವೇ ದಿನಗಳಲ್ಲಿ ಇರಲು ಮನೆ ನಿರ್ಮಾಣ ಮಾಡಿಕೊಡದೇ ಇದ್ದಲ್ಲಿ, ಸರ್ಕಾರವನ್ನೇ ಬೀಳಿಸುತ್ತೇವೆ' ಎಂದು ಗುಡುಗಿದ್ದರು.

ಫೋನ್ ಕದ್ದಾಲಿಕೆ ಆರೋಪ: ಕುಮಾರಸ್ವಾಮಿ ಸ್ಪಷ್ಟನೆ ಫೋನ್ ಕದ್ದಾಲಿಕೆ ಆರೋಪ: ಕುಮಾರಸ್ವಾಮಿ ಸ್ಪಷ್ಟನೆ

ಸ್ವಂತ ಪಕ್ಷದ ವಿರುದ್ಧವೇ ಆಕ್ರೋಶ ಹೊರಹಾಕಿದ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆ ಬಹು ಚರ್ಚೆಗೆ ಕಾರಣವಾಗಿತ್ತು. ಪಕ್ಷದಲ್ಲಿ ಈಗಾಗಲೇ ಭಿನ್ನಮತ ಸ್ಫೋಟಗೊಂಡಿದೆ ಎಂಬ ಅನುಮಾನವೂ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆಯಿಂದ ಉದ್ಭವಿಸಿತ್ತು.

Balchandra Jarkiholi makes u turn about his own statement about government

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಅವರು, 'ಬಾಯಿ ತಪ್ಪಿ ಸರ್ಕಾರ ಉರುಳಿಸುವ ಮಾತನ್ನಾಡಿದ್ದೇನೆ. ಯಾವುದೇ ದುರುದ್ಧೇಶ ಇರಲಿಲ್ಲ' ಎಂದಿದ್ದಾರೆ.

ಟ್ವಿಟ್ಟರ್ ನಲ್ಲಿ ಯಡಿಯೂರಪ್ಪರ ಕಾಲೆಳೆದ ಪ್ರಿಯಾಂಕ್ ಖರ್ಗೆಟ್ವಿಟ್ಟರ್ ನಲ್ಲಿ ಯಡಿಯೂರಪ್ಪರ ಕಾಲೆಳೆದ ಪ್ರಿಯಾಂಕ್ ಖರ್ಗೆ

ಸಂತ್ರಸ್ತರ ಜೊತೆ ಮಾತನಾಡುವಾಗ ದುಖಃದಲ್ಲಿದ್ದ ಅವರನ್ನು ಸಮಾಧಾನಪಡಿಸುವ ಭರದಲ್ಲಿ ಸರ್ಕಾರ ಬೀಳಿಸುವ ಮಾತನ್ನಾಡಿದೆ. ನನಗೆ ಅಂತಹಾ ಉದ್ದೇಶವಿಲ್ಲ. ನಾನು ಪಕ್ಷದ ಅತ್ಯಂತ ನಿಷ್ಠ ಸಿಪಾಯಿ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ

ಕೇಂದ್ರದಲ್ಲಿ, ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ರಾಜ್ಯದಲ್ಲಿ ಕಷ್ಟಪಟ್ಟು ಸರ್ಕಾರ ರಚನೆ ಮಾಡಿದ್ದೇವೆ. ಸರ್ಕಾರ ಅಭಿವೃದ್ಧಿ ಪಥದಲ್ಲಿದೆ ಹೀಗಿರುವಾಗ ನಾನೇಕೆ ಸರ್ಕಾರ ಬೀಳುವ ಮಾತನಾಡಲಿ ಎಂದಿರುವ ಅವರು, ಆ ವಿಡಿಯೋವನ್ನು ವೈರಲ್ ಮಾಡಿರುವ ಹಿಂದೆ ರಾಜಕೀಯ ಉದ್ದೇಶ ಇದೆ ಎಂದು ಹೇಳಿದರು.

English summary
BJP MLA Balachandra Jarkiholi yesterday told that they will destabilize the present government. But takes u turn from that statement and said that was said not intentional.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X