ನೇಗಿನಹಾಳ ಗ್ರಾಮದಲ್ಲಿ ಬನಶಂಕರಿ ದೇವಿಯ ಚಿನ್ನಾಭರಣ ಕದ್ದ ಖದೀಮರು
ಬೆಳಗಾವಿ, ಜುಲೈ .01: ದೇವಸ್ಥಾನಕ್ಕೆ ನುಗ್ಗಿ ಬನಶಂಕರಿ ದೇವಿಯ ಕತ್ತಲ್ಲಿದ್ದ ತಾಳಿ(ಮಂಗಲ ಸೂತ್ರ), ಕಿವಿಯೊಲೆ, ಮೂಗುತಿ, ಕಿರೀಟವನ್ನು ಕಳವು ಮಾಡಿರುವ ಘಟನೆ ನೇಗಿನಹಾಳ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂದೆ ಸಂಪಗಾವಿ ರಸ್ತೆಗೆ ಹೊಂದಿಕೊಂಡಿರುವ ಬನಶಂಕರಿ ದೇವಾಲಯದಲ್ಲಿ ಈ ಕಳ್ಳತನ ನಡೆದಿದ್ದು, ರಾತ್ರಿ ವೇಳೆ ಈ ಕೃತ್ಯ ಎಸಗಲಾಗಿದೆ.
ದೇವಸ್ಥಾನದ ಬೀಗ ಒಡೆದು ಸುಮಾರು 40 ಗ್ರಾಂ ತೂಕವಿರುವ ಬಂಗಾರದ ಒಡವೆಗಳು, 500 ಗ್ರಾಂ ತೂಕವಿರುವ ಬೆಳ್ಳಿಯ ಕೀರಿಟ ಕಳ್ಳತನ ಮಾಡಿದ್ದಾರೆ. ಪ್ರತಿನಿತ್ಯದಂತೆ ಮುಂಜಾನೆ 5ಗಂಟೆಗೆ ಪೂಜೆಗೆಂದು ಬಂದ ಅರ್ಚಕರಾದ ಯಲ್ಲಪ್ಪ ಕೆಂಪರೊಜಿ, ಪರಶುರಾಮ ಶಿರೊಳಕರ ಕಳ್ಳತನವಾದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಳ್ಳತನದ ಬಗ್ಗೆ ದೇವಸ್ಥಾನದ ಹಿರಿಯರೊಂದಿಗೆ ಮಾತ್ರ ಚರ್ಚಿಸಿ ಎಂದಿನಂತೆ ಪೂಜಾರಿಗಳು ಪೂಜೆ ನಡೆಸಿರುವುದು ಸ್ಥಳೀಯರಿಗೆ ಅನುಮಾನ ಹುಟ್ಟಿಸಿದೆ.
ಕಳೆದ ಎರಡು ತಿಂಗಳ ಹಿಂದೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಅರಳಾಪುರ ಗ್ರಾಮದಲ್ಲಿ ಮಾರಮ್ಮನ ದೇವಸ್ಥಾನದಲ್ಲಿ ಹುಂಡಿಯೊಡೆದು ಕಳ್ಳತನ ಮಾಡಿರುವ ಘಟನೆ ನಡೆದಿತ್ತು.

ಹುಂಡಿಯಲ್ಲಿದ್ದ 50 ಸಾವಿರಕ್ಕೂ ಹೆಚ್ಚು ಹಣ, ದೇವರ ಕುತ್ತಿಗೆಯಲ್ಲಿದ್ದ ಚಿನ್ನದ ತಾಳಿ, ಮೈಕ್ ಸೆಟ್ ಸೇರಿದಂತೆ ಹಲವು ಉಪಕರಣಗಳನ್ನು ತಡರಾತ್ರಿ ಕಳವು ಮಾಡಿದ್ದರು. ದೇವಸ್ಥಾನದ ಒಳಗಿದ್ದ ಬೀರುವನ್ನು ಒಡೆದು ರೇಷ್ಮೆಸೀರೆಗಳು, ತಾಯಿಯ ಅಲಂಕಾರದ ವಸ್ತುಗಳನ್ನು ಖದೀಮರು ಕದ್ದಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications