ಅಳುತ್ತಾ ಸದನದಿಂದ ಹೊರನಡೆದ ಬಸವರಾಜ ಹೊರಟ್ಟಿ, ಏನು ಕಾರಣ?
ಬೆಳಗಾವಿ, ಡಿಸೆಂಬರ್ 12: ವಿಧಾನಪರಿಷತ್ ಹಂಗಾಮಿ ಸಭಾಪತಿ, ಜೆಡಿಎಸ್ನ ಬಸವರಾಜ ಹೊರಟ್ಟಿ ಅವರು ಭಾವುಕರಾಗಿ ಅಳುತ್ತಾ ಸದನದಿಂದ ಹೊರನಡೆದ ಘಟನೆ ಇಂದು ನಡೆಯಿತು.
ಹಂಗಾಮಿ ಸಭಾಪತಿ ಆಗಿದ್ದ ಅವರು ಸಭಾಪತಿಯಾಗಿ ಆಯ್ಕೆ ಆಗುವ ಆಸೆ ಹೊಂದಿದ್ದರು ಆದರೆ ಇಂದು ಕಾಂಗ್ರೆಸ್ ಪಕ್ಷವು ಪ್ರತಾಪ್ ಚಂದ್ರ ಶೆಟ್ಟಿ ಅವರು ಸಭಾಪತಿ ಆಗಿ ಆಯ್ಕೆ ಆದ ಕೂಡಲೇ ಬಸವರಾಜ ಹೊರಟ್ಟಿ ಅವರು ಭಾವುಕರಾದರು. ಬರುತ್ತಿದ್ದ ಅಳುವನ್ನು ತಡೆದುಕೊಳ್ಳಲು ಯತ್ನಿಸಿ ಸದನದಿಂದ ಹೊರನಡೆದರು.
ಬಸವರಾಜಹೊರಟ್ಟಿ ಅವರು ಜೆಡಿಎಸ್ನ ಹಿರಿಯ ಮುಖಂಡರು ಅವರನ್ನು ಪರಿಷತ್ ಸಭಾಪತಿ ಮಾಡಲಾಗುತ್ತದೆ ಎಂಬ ಸುದ್ದಿ ಇತ್ತು. ಸಚಿವ ಸ್ಥಾನ ತಪ್ಪಿಸಿ ಅವರನ್ನು ಹಂಗಾಮಿ ಸಭಾಪತಿ ಮಾಡಲಾಗಿತ್ತು. ಅದೇ ಹುದ್ದೆಯಲ್ಲಿ ಮುಂದುವರೆಸಲಾಗುತ್ತದೆ ಎನ್ನಲಾಗಿತ್ತು ಆದರೆ ಅದಾಗಿಲ್ಲ ಹಾಗಾಗಿ ಬಸವರಾಜ ಹೊರಟ್ಟಿ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಬಸವರಾಜ ಹೊರಟ್ಟಿ ಅವರಿಗೆ ತೆರವಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಈ ಹಿಂದೆ ಸಹ ಅವರು ಈ ಹುದ್ದೆಯನ್ನು ನಿಭಾಯಿಸಿದ್ದಾರೆ. ಬಿಎಸ್ಪಿಯ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಈ ಸ್ಥಾನ ಖಾಲಿಯಿದೆ.
ಎಸ್ಆರ್.ಪಾಟೀಲ್ ಅವರು ಸಭಾಪತಿ ಆಗಲು ಸಜ್ಜಾಗಿದ್ದ ಹೊತ್ತಿನಲ್ಲಿ ಕಾಂಗ್ರೆಸ್ನಲ್ಲಿ ಒಳರಾಜಕೀಯ ನಡೆದು ಯಾವುದರ ಆಕಾಂಕ್ಷೆ ಇಲ್ಲದೇ ಇದ್ದ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ನಾಮತ್ರ ಸಲ್ಲಿಸಲಾಯಿತು. ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಅವರೇ ಪರಿಷತ್ ಸಭಾಪತಿ ಆಗಿ ಆಯ್ಕೆ ಆದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications