Belagavi: ರಜೆ ಕೊಡದ್ದಕ್ಕೆ ಬೆನ್ನು ನೋವಿನಿಂದ ಬಳಲುತ್ತಿದ್ದ ಚಾಲಕ ಬಸ್ಸಿನಲ್ಲಿಯೇ ನೇಣಿಗೆ ಶರಣು- ಕುಟುಂಬಸ್ಥರ ಆಕ್ರಂದನ
ಬೆಳಗಾವಿ ಏಪ್ರಿಲ್ 2: ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವ ಚಾಲಕರಿಗೆ ಇತ್ತೀಚೆಗೆ ನೆಮ್ಮದಿಯಿಲ್ಲದಂತಾಗಿದೆ. ವಿಶ್ರಾಂತಿ ಇಲ್ಲದಂತೆ ಬಸ್ ಚಾಲನೆ ಮಾಡುವುದು ಕಷ್ಟವಾಗುತ್ತಿದೆ. ಬೆನ್ನು, ಕಾಲು ಹೀಗೆ ನಾನಾ ಆರೋಗ್ಯ ಸಮಸ್ಯೆಗಳನ್ನು ಎದರಿಸುವಂತಾಗಿದೆ. ಅಲ್ಲದೆ ಕುಟುಂಬಸ್ಥರೊಂದಿಗೆ ನೆಮ್ಮದಿಯಾಗಿ ಇರಲು ಆಗದಂತಹ ಸ್ಥಿತಿ ಇದೆ. ರಜೆಗಳನ್ನು ಕೇಳಿದರೆ ರಜೆ ನೀಡದೆ ಸತಾಯಿಸುವಂತಹ ಮೇಲಾಧಿಕರಿಗಳ ದೌರ್ಜನ್ಯಕ್ಕೆ ಬೇಸತ್ತು ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೌದು ಬೆಳಗಾವಿಯಲ್ಲಿ ಬಸ್ ಚಾಲಕರೊಬ್ಬರು ಬಸ್ಸಿನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯ ಡಿಪೋದ ಎರಡನೇ ಘಟಕದಲ್ಲಿ ಈ ಘಟನೆ ನಡೆದಿದೆ. ಎರಡನೇ ಘಟಕದ ಬಸ್ ಚಾಲಕ ಬಾಲಚಂದ್ರ ಹುಕೋಜಿ ನೇಣಿಗೆ ಶರಣಾದ ಚಾಲಕ. ನಿರಂತರ ಬೆನ್ನು ನೋವುನಿಂದ ಬಳಲುತ್ತಿದ್ದ ವಾಲಚಂದ್ರ ಅವರು ಮನೆಯಲ್ಲಿ ಅಕ್ಕನ ಮದುವೆಗೆ ರಜೆಯನ್ನು ಕೇಳಿದ್ದರು.

ಅಕ್ಕನ ಮಗಳ ಮದುವೆ ಇದ್ದ ಕಾರಣ ಮೂರು ದಿನಗಳ ಹಿಂದೆ ರಜೆಗಾಗಿ ಅರ್ಜಿ ಸಲ್ಲಿಸಿದ್ದರು. ರಜೆ ನೀಡದ ಹಿನ್ನೆಲೆಯಲ್ಲಿ ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್ನಲ್ಲ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಅದೇ ಬಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಅವರಿಗೆ ರಜೆ ಬೇಕಿತ್ತು. ರಜೆ ಸಿಗದ ಬೆನ್ನಲ್ಲೆ ಬೆಳಿಗ್ಗೆ ಆರು ಗಂಟೆಗೆ ಕೆಲಸಕ್ಕೆ ಹಾಜರಾಗಿದ್ದರು. ಗಾಂಧಿ ನಗರದಲ್ಲಿ ವಾಸವಾಗಿದ್ದ ಚಾಲಕ ರಾಮಚಂದ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು ಎಂದು ಗೊತ್ತಾಗಿದೆ. ಬಾಲಚಂದ್ರ ಸಾವಿಗೆ ಅಧಿಕಾರಿಗಳಿಏ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ. ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
ಮನೆಗೆ ಆಸರೆಯಾಗಿದ್ದ ಮನೆ ಯಜಮಾನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನ್ಯಾಯಕ್ಕಾಗಿ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
ಯತ್ನಾಳ್ ಬಿಜೆಪಿಗೆ ಬರಲೇಬೇಕು ಹೊಸ ಪಕ್ಷ ಕಟ್ಟಲು ಸಾಧ್ಯವಿಲ್ಲ- ರಮೇಶ್ ಜಾರಕಿಹೊಳಿ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ಪಕ್ಷದಿಂದ ಉಚ್ಛಾಟನೆಯಾದ ಬಳಿಕ ಹೊಸ ಪಕ್ಷ ಕಟ್ಟುವುದಾಗಿ ಹೇಳಿಕೆಯನ್ನು ನೀಡಿದ್ದಾರೆ. ಆದರೆ 'ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಬಿಜೆಪಿಗೆ ಮರಳುತ್ತಾರೆ ಅವರು ಹೊಸ ಪಕ್ಷ ಕಟ್ಟಲು ಆಗಲ್ಲ. ನಾವು ಯಾರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ' ಎಂದು ಶಾಸಕ ರಮೆಶ್ ಜಾರಕಿಹೊಳಿ ಹೇಳಿದ್ದಾರೆ. 'ಪಕ್ಷ ಮುಜುಗರಕ್ಕೆ ಒಳಗಾಗುವಂತೆ ಮಾತನಾಡಬಾರದೆಂದು ಉತ್ನಾಳರಿಗೆ ಕೋರಿದ್ದೇನೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ್ದೇವೆ. ಎಲ್ಲವನ್ನೂ ಮಾಧ್ಯಮಕ್ಕೆ ಹೇಲಲು ಆಗದು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಯತ್ನಾಳ್ ವಿಚಾರದಲ್ಲಿ ಕೆಲವರು ಈಗ ಮನಬಂದಂತೆ ಮಾತನಾಡುತ್ತಿದ್ದಾರೆ. ಈ ಹಿಂದೆ ಅವರೇ ಯತ್ನಾಳ್ ಅವರನ್ನು ಅಣ್ಣ, ಚಿಕ್ಕಪ್ಪ, ಮುಂದಿನ ಸಿಎಂ ಎಂದು ಮಾತನಾಡುತ್ತಾ ಓಡಾಡಿಕೊಂಡಿದ್ದವರು. ಈಗ ಉಲ್ಟಾ ಮಾತನಾಡುತ್ತಿದ್ದಾರೆ' ಎಂದು ಕಿಡಿ ಕಾರಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications