ಬೆಳಗಾವಿ : ವಿದ್ಯಾರ್ಥಿಯೊಂದಿಗೆ ಪ್ರಿನ್ಸಿಪಾಲ್ ಕಾಮದಾಟ
ಬೆಳಗಾವಿ, ಡಿ.16 : ತನ್ನ ಕಾಲೇಜಿನ ವಿದ್ಯಾರ್ಥಿಗೆ ಸಾಲ ಕೊಟ್ಟಿದ್ದ ಪ್ರಿನ್ಸಿಪಾಲ್ ಅವನನ್ನು ದೈಹಿಕವಾಗಿ ಬಳಸಿಕೊಂಡ ಅಮಾನವೀಯ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಂದಿಗೆ ಪ್ರಿನ್ಸಿಪಾಲ್ ಸಲಿಂಗ ಕಾಮದಲ್ಲಿ ತೊಡಗಿರುವ ವಿಡಿಯೋಗಳು ಫೋನ್ಗಳಲ್ಲಿ ಹರಿದಾಡುತ್ತಿವೆ. ಪ್ರಿನ್ಸಿಪಾಲ್ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತರನ್ನು ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನ ಪ್ರಾಂಶುಪಾಲ ಅಶೋಕ ಬೈಲವಾಡ (62) ಎಂದು ಗುರುತಿಸಲಾಗಿದೆ. ತನ್ನದೇ ಕಾಲೇಜಿನ ರಮೇಶ ಲಮಾಣಿ (22) ಎಂಬ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಅಶೋಕ ಆತನ ಜೊತೆ ಕಳೆದ ಒಂದು ವರ್ಷದಿಂದ ಸಲಿಂಗಕಾಮದಲ್ಲಿ ತೊಡಗಿದ್ದ. ಈಗ ಪ್ರಕರಣ ಬೆಳಕಿಗೆ ಬಂದಿದೆ.

ಸಾಲಕೊಟ್ಟು ಬ್ಲಾಕ್ ಮೇಲ್ : ಬಂಧಿತ ಅಶೋಕ ಬೈಲವಾಡ ವಿದ್ಯಾರ್ಥಿಗೆ ಸಾಲದ ರೂಪದಲ್ಲಿ ಹಣ ನೀಡಿದ್ದ. ನಂತರ ಆತನನ್ನು ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ, ಬೆಳಗಾವಿ ಹೊರ ವಲಯದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. [ಶಾಲೆಯಲ್ಲಿ ಪ್ರಿನ್ಸಿಪಾಲ್ ಪಾನಗೋಷ್ಠಿ]
ಪ್ರಾಂಶುಪಾಲರ ವರ್ತನೆಯಿಂದ ರೋಸಿ ಹೋದ ವಿದ್ಯಾರ್ಥಿ ಸ್ನೇಹಿತರಿಗೆ ಈ ವಿಷಯವನ್ನು ತಿಳಿಸಿದ್ದ. ವಿದ್ಯಾರ್ಥಿಗಳು ಪ್ರಾಂಶುಪಾಲರ ಈ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿರುವುದಲ್ಲದೇ, 20 ಲಕ್ಷ ಹಣ ಕೊಡದಿದ್ದರೆ, ಇದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದರು.
ವಿದ್ಯಾರ್ಥಿಗಳ ಬೆದರಿಕೆಗೆ ಜಗ್ಗಿದ ಪ್ರಿನ್ಸಿಪಾಲ್ 25 ಸಾವಿರ ರೂ. ಹಣ ನೀಡಲು ಒಪ್ಪಿಕೊಂಡಿದ್ದರು. ಆದರೆ, ವಿದ್ಯಾರ್ಥಿಗಳು ಇದಕ್ಕೆ ಒಪ್ಪದೇ ಪದೇ-ಪದೇ ಪೀಡಿಸತೊಡಗಿದರು. ಇದರಿಂದ ಕೋಪಗೊಂಡ ಪ್ರಿನ್ಸಿಪಾಲ್, ಬೆಳಗಾವಿಯ ಖಡೆಬಜಾರ್ ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ದೂರು ನೀಡಿದ್ದರು.
ಪ್ರಿನ್ಸಿಪಾಲ್ನಿಂದ ದೌರ್ಜನ್ಯಕ್ಕೊಳಗಾದ ಯುವಕನೂ ಅವರ ವಿರುದ್ಧ ಪ್ರತಿದೂರು ನೀಡಿದ. ಸದ್ಯ ಪೊಲೀಸರು ಪ್ರಾಂಶುಪಾಲರನ್ನು ಬಂಧಿಸಿ, ಬೆಳಗಾವಿ ಜಿಲ್ಲಾಸ್ಪತ್ರೆಗೆ ವೈದ್ಯಕೀಯ ಪರಿಕ್ಷೆಗಾಗಿ ದಾಖಲು ಮಾಡಿದ್ದಾರೆ. ಇತ್ತ ಪ್ರಿನ್ಸಿಪಾಲ್ಗೆ ಬ್ಲಾಕ್ ಮೇಲ್ ಮಾಡಿದ ಯುವಕರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications